ಕಲ್ಪತರು ನಾಡಿಗೆ ಹರಿದಳು ಹೇಮೆ


Team Udayavani, May 26, 2020, 6:57 AM IST

klp-hemavati

ತುಮಕೂರು: ಕಲ್ಪತರು ನಾಡಿನಲ್ಲಿ ಕುಡಿಯುವ ನೀರಿನ ಹಾಹಾಕಾರ ತೀವ್ರವಾಗುತ್ತಿರುವ ಸಂದರ್ಭ ದಲ್ಲಿ ಕುಡಿಯುವ ನೀರಿನ ಬವಣೆ ನೀಗಿಸಲು ತುಮಕೂರಿನ ಬುಗುಡನಹಳ್ಳಿ ಕೆರೆಗೆ ಹೇಮಾವತಿ ನದಿ ನೀರು ಹರಿದು ಬಂದಿದೆ.  ನಗರ  ಸೇರಿದಂತೆ ವಿವಿದ ಕಡೆಗಳಲ್ಲಿ ಕುಡಿಯುವ ನೀರಿನ ಆಸರೆ ಹೇಮಾವತಿ ನೀರೇ ಆಗಿದ್ದು ಜಿಲ್ಲೆಗೆ 25 ಟಿಎಂಸಿ ನೀರು ಬರಬೇಕಾಗಿದ್ದು ಕಳೆದ ಮುಂಗಾರಿನಲ್ಲಿ 19 ಟಿಎಂಸಿ ನೀರು ಹರಿದಿತ್ತು.

ಜಿಲ್ಲೆಗೆ ಇನ್ನೂ ನೀರು ಹರಿಯಬೇಕಾದ  ಸಮಯದಲ್ಲಿ ಸರ್ಕಾರ ನೀರು ಹರಿಯುವುದನ್ನು ನಿಲ್ಲಿಸಿತ್ತು. ಈಗ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ವೇಳೆಯಲ್ಲಿನಮಗೆ ಬರಬೇಕಾಗಿರುವ ನೀರನ್ನು ಬಿಡಬೇಕೆಂದು ಜಿಲ್ಲೆಯ ಬಿಜೆಪಿ ಶಾಸಕರು ಮುಖ್ಯಮಂತ್ರಿಗಳಲ್ಲಿ  ಮನವಿ ಮಾಡಿ ದ್ದರು. ಇದರಿಂದ ನೀರು ಹರಿದು ಬರುತ್ತಿರು ವುದು ಜನರಲ್ಲಿ ಸಂತಸ ಮೂಡಿಸಿದೆ.

ನಗರಕ್ಕೆ ಕುಡಿಯುವ ನೀರು ಒದಗಿಸುವ ಬುಗಡನಹಳ್ಳಿ ಕೆರೆಗೆ ಹೇಮಾವತಿ ನೀರು ತಲುಪುತ್ತಲೇ ಸಂತಸ ಗೊಂಡ ನಗರ ಶಾಸಕ ಜಿ.ಬಿ.  ಜ್ಯೋತಿಗಣೇಶ್‌ ಕುಡಿಯುವ ನೀರಿನ ಸಮಸ್ಯೆ ಇರುವ ವೇಳೆಯಲ್ಲಿ ಜಿಲ್ಲೆಗೆ ಹೇಮಾ ವತಿ ನೀರು ಹರಿಸಿದ ಮುಖ್ಯಮಂತ್ರಿಗಳಾದ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದರು. ನಗರದ ಕುಡಿಯುವ ನೀರಿನ ಮೂಲವಾದ ಹೇಮಾವತಿ ನೀರು ಸೋಮವಾರ ಬುಗಡನಹಳ್ಳಿ ಕೆರೆಯನ್ನು ತಲುಪಿರುವುದು ಸಂತಸ ಮೂಡಿದೆ ಎಂದರು.

ಈ ಬೇಸಿಗೆಯ ತಾಪಕ್ಕೆ ಕೆರೆಯಲ್ಲಿದ್ದ ನೀರು ಖಾಲಿಯಾಗಿ ಪ್ರಸ್ತುತ ಬಗುಡದ ನೀರನ್ನು ಶುದ್ಧೀಕರಿಸಿ ತುಮಕೂರು ನಗರದ  ನಾಗರಿಕರಿಗೆ ನೀರಿನ ವ್ಯವಸ್ಥೆ ಮಾಡಲಾಗುತ್ತಿತ್ತು. ಈಗ ಕೆರೆಯಲ್ಲಿ ನೀರು ಕಾಲಿಯಾಗುತ್ತಿದ್ದ ವೇಳೆಯಲ್ಲಿ ಹೇಗೆ ಮುಂದೆ ನೀರು ಕೊಡುವುದು ಎನ್ನುವ ಆತಂಕ ವಿತ್ತು ಎಂದು ಹೇಳಿದರು. ತುಮಕೂರು ಜಿಲ್ಲೆಗೆ ಹೇಮಾವತಿ ನೀರನ್ನು ಹರಿಸುವುದರ ಮೂಲಕ ಕಲ್ಪತರು  ನಾಡಿನ ಕುಡಿಯುವ ನೀರಿನ ಬವಣೆ ತಪ್ಪಿಸಲು ಸಹಾಯ ಮಾಡಿದ್ದಾರೆ.

ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು. ನೀರಿನ ಬವಣೆ ನಿವಾರಿಸಿದ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ,  ಸಂಸದರಾದ ಜಿ.ಎಸ್‌. ಬಸವರಾಜ್‌, ಶಾಸಕರಾದ ಬಿ.ಸಿ. ನಾಗೇಶ್‌, ಮಸಾಲ ಜಯರಾಂ ಹಾಗೂ ತುಮಕೂರು ಜಿಲ್ಲೆಯ ಶಾಸಕರಿಗೂ ಅಭಿನಂದನೆ ಸಲ್ಲಿಸಿದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.