ಹೆದ್ದಾರಿ ಅಗಲೀಕರಣ ಕಾಮಗಾರಿ ಕುಂಠಿತ

ವಾಹನ ಸವಾರರು, ಸಾರ್ವಜನಿಕರಿಗೆ ಕಿರಿಕಿರಿ | ಅಧಿಕಾರಿಗಳು, ಗುತ್ತಿಗೆದಾರರ ಬೇಜವಾಬ್ದಾರಿ

Team Udayavani, Jun 10, 2019, 12:36 PM IST

tk-tdy-1..

ಹುಳಿಯಾರು ಪೊಲೀಸ್‌ ಸ್ಟೇಷನ್‌ ಬಳಿ ಅರ್ಧಕ್ಕೆ ನಿಂತಿರುವ ಒಳ ಚರಂಡಿ ಕಾಮಗಾರಿ.

ಹುಳಿಯಾರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಪಟ್ಟಣ ವ್ಯಾಪ್ತಿಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ 243ರ ಅಗಲೀಕರಣ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ತಂದೊಡ್ಡಿದೆ.

ನಾಗರಿಕರಿಗೆ ಕಷ್ಟ: ಸರ್ವೀಸ್‌ ರಸ್ತೆ, ಸುಸಜ್ಜಿತ ಒಳಚರಂಡಿ ಹಾಗೂ ಪಾದಚಾರಿ ಮಾರ್ಗ ನಿರ್ಮಿಸುವ ಯೋಜನೆ ಇದಾಗಿದೆ. 2017ರ ಡಿಸೆಂಬರ್‌ನಲ್ಲಿ ಶಿರಾ ಭಾಗದಿಂದ ಕಾಮಗಾರಿ ಆರಂಭಗೊಂಡಿತು. 2018 ರ ಅಕ್ಟೋಬರ್‌ ವೇಳಗೆ ಹುಳಿಯಾರು ಪಟ್ಟಣ ತಲುಪಿತು. ಆರಂಭದಲ್ಲಿ ಬಿರುಸಿನಿಂದ ನಡೆಯುತ್ತಿದ್ದ ಕಾಮಗಾರಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಗುತ್ತಿಗೆದಾರರ ಬೇಜವಾಬ್ದಾರಿಯಿಂದಾಗಿ ಇತ್ತೀಚಿನ ದಿನಗಳಲ್ಲಿ ವಿಳಂಬವಾಗುತ್ತಿರುವುದು ನಾಗರಿಕರಿಗೆ ಕಷ್ಟಪಡುವಂತಾಗಿದೆ.

ಅರ್ಧಕ್ಕೆ ನಿಂತ ಕಾಮಗಾರಿ: ಹೆದ್ದಾರಿ ಪಕ್ಕದಲ್ಲೇ ಎರಡು ಅಡಿ ಆಳವಾದ ಚರಂಡಿ ತೆಗೆದು ಹಾಗೆಯೇ ಬಿಡಲಾಗಿದೆ. ಪಟ್ಟಣದ ಎಪಿಎಂಎಸಿ ಮುಂಭಾಗ, ರಾಮಗೋಪಾಲ್ ಸರ್ಕಲ್ ಸೇರಿದಂತೆ ಹಲವು ಕಡೆ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಎಲ್ಲೆಡೆ ಜಲ್ಲಿಕಲ್ಲಿನ ಗುಡ್ಡೆ, ರಸ್ತೆ ಅಗೆದು ಬಿಟ್ಟಿರುವುದು, ಜಲ್ಲಿ ಹಾಕಿರುವುದು, ಗುಂಡಿಗಳು, ಪೂರ್ಣವಾಗದ ಚರಂಡಿಗಳು ಕಾಣುತ್ತಿವೆ. ಪಟ್ಟಣ ಸಮೀಪದ ಎಸ್‌ಎಲ್ಆರ್‌ ಬಂಕ್‌ನಿಂದ ಎಪಿಎಂಸಿವರೆಗಿನ ಡಾಂಬರ್‌ ರಸ್ತೆ ಕಿತ್ತು ಏಳೆಂಟು ತಿಂಗಳಾಗಿದೆ. ರಸ್ತೆ ವಿಭಜಿಸಿ ಸುಮಾರು 3 ಅಡಿ ಆಳದವರಗೆ ಅರ್ಧ ಕಿಮೀ ರಸ್ತೆ ಕಿತ್ತು ಗುಂಡಿ ತೋಡಿದ್ದಾರೆ. ಒಂದು ಕಡೆ ರಸ್ತೆ ಕಾಮಗಾರಿ ಪ್ರಾರಂಭವಾಗದ್ದರಿಂದ ಉಳಿದ ಅರ್ಧ ರಸ್ತೆಯಲ್ಲಿಯೇ ಸಂಚರಿಸಬೇಕಾಗಿದೆ. ದ್ವಿಚಕ್ರ ವಾಹನಗಳು ಸೇರಿ ಭಾರಿ ವಾಹನಗಳು ಒಂದೇ ರಸ್ತೆಯಲ್ಲಿ ಸಂಚರಿಸುವುದರಿಂದ ಸ್ವಲ್ಪ ಯಾಮಾರಿದರೂ ಬಿದ್ದು ಗಾಯಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

ಗುಂಡಿಗಳಲ್ಲಿ ಕೊಳಚೆ ನೀರು: ಚರಂಡಿ ಮಾಡಲು ತೆಗೆದಿರುವ ಗುಂಡಿಗಳಲ್ಲಿ ಕೊಳಚೆ ನೀರು ನಿಂತು ಸಮಸ್ಯೆ ಎದುರಾಗುತ್ತಿದೆ. ಪಾದಚಾರಿಗಳು ಓಡಾಡಲು ಸಾಧ್ಯವಾಗುತ್ತಿಲ್ಲ. ರಸ್ತೆಬದಿಯಲ್ಲಿರುವ ಅಂಗಡಿ ಮಳಿಗೆ ವರ್ತಕರು ವ್ಯಾಪಾರ ವಹಿವಾಟು ನಡೆಸಲು ಪರದಾಡುವಂತಾಗಿದೆ. 2019ರ ಫೆಬ್ರವರಿಯಲ್ಲೇ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ ಹುಳಿಯಾರು ಪಟ್ಟಣದಲ್ಲಿ ಇನ್ನೂ ಒಳ ಚರಂಡಿ ಕಾಮಗಾರಿಯೇ ಪೂರ್ಣವಾಗಿಲ್ಲ. ಅಂತಹದರಲ್ಲಿ ರಸ್ತೆ ನಿರ್ಮಾಣ, ಪಾದಚಾರಿ ರಸ್ತೆ, ರಸ್ತೆ ಮಧ್ಯೆ ಡಿವೈಡರ್‌ ಹೀಗೆ ಅನೇಕ ಕಾಮಗಾರಿಗಳು ಇನ್ಯಾವಾಗ ಮುಗಿಯುವುದೋ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

● ಎಚ್.ಬಿ.ಕಿರಣ್‌ ಕುಮಾರ್‌

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.