ಖಾಲಿ ಹುದ್ದೆಗೆ ಶೀಘ್ರ ಸಿಬ್ಬಂದಿ ನೇಮಕ


Team Udayavani, Mar 4, 2020, 3:00 AM IST

khali-hudde

ಬರಗೂರು: ರಾಜ್ಯದಲ್ಲೇ ತುಮಕೂರು ಜಿಲ್ಲೆ ರಸ್ತೆ ಅಪಘಾತದಲ್ಲಿ ಮೊದಲನೇ ಸ್ಥಾನದಲ್ಲಿದ್ದು, ಬೈಕ್‌ ಸವಾರರು ಹೆಲ್ಮೆಟ್‌ ಧರಿಸಿ ವಾಹನ ಚಲಾಯಿಸಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಂಶಿಕೃಷ್ಣ ಸಲಹೆ ನೀಡಿದರು. ಶಿರಾ ತಾಲೂಕು ಹುಲಿಕುಂಟೆ ಹೋಬಳಿಯ ಬರಗೂರು ಗ್ರಾಮದ ಉಪಪೋಲೀಸ್‌ ಠಾಣಾ ಆವರಣದಲ್ಲಿ ಹಮ್ಮಿಕೊಂಡಿದ್ದ ಜನಸ್ಪಂದನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಿಬ್ಬಂದಿ ನೇಮಿಸುವ ಭರವಸೆ: ಕುಡಿದು ವಾಹನ ಚಲಾಯಿಸುವುದು, ಮೊಬೈಲ್‌ ಬಳಕೆ, ಅತೀ ವೇಗದಿಂದ ಶೇ.95ರಷ್ಟು ಅಪಘಾತಗಳು ಆಗುತ್ತಿದೆ. 3-4 ವರ್ಷಗಳಲ್ಲಿ ಜಿಲ್ಲೆಯ ಠಾಣೆಗಳಿಗೆ ಸುಮಾರು 200 ಸಿಬ್ಬಂದಿಯನ್ನು ಭರ್ತಿ ಮಾಡಲಾಗುವುದು. ಬರಗೂರು ಉಪಠಾಣೆ ತಾಲೂಕಿನಲ್ಲಿ ಹೆಚ್ಚು ಗ್ರಾಮ ಹೊಂದಿರುವ ಠಾಣೆಯಾಗಿದ್ದು, ಹೆಚ್ಚಿನ ಸಿಬ್ಬಂದಿ ನೇಮಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.

ಸಿ.ಸಿ.ಟಿವಿ ಅಳವಡಿಸುವುದರಿಂದ ಕಳ್ಳರು, ದರೋಡೆಕೋರರನ್ನು ಸುಲಭವಾಗಿ ಪತ್ತೆ ಹಚ್ಚಬಹುದು. ಕಳ್ಳರು, ದರೋಡೆಕೋರರು ಸಿಕ್ಕಿದರೆ ಸಾರ್ವಜನಿಕರು ಥಳಿಸಬಾರದು. ತಕ್ಷಣವೇ ಪೊಲೀಸರಿಗೆ ಒಪ್ಪಿಸಿದರೆ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದರು.

ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಿ: ಡಿವೈಎಸ್ಪಿ ಕುಮಾರಪ್ಪ ಮಾತನಾಡಿ, ಹಳ್ಳಿಗಳಲ್ಲಿ ಮದ್ಯ ಅಕ್ರಮ ಮಾರಾಟ ದೊಡ್ಡ ಪಿಡುಗಾಗಿದ್ದು, ಪ್ರತಿ ಪೊಲೀಸ್‌ ಠಾಣೆ ಸಿಬ್ಬಂದಿ ಈ ಬಗ್ಗೆ ಕ್ರಮ ಕೈಗೊಳ್ಳಲು ಸಿದ್ಧವಾಗಿರಬೇಕು. ಪ್ರಸ್ತುತ ಪಟ್ಟನಾಯಕನಹಳ್ಳಿ ಠಾಣೆಯಲ್ಲಿ 2018ರಲ್ಲಿ 34 ಪ್ರಕರಣ, 2019ರಲ್ಲಿ 7 ಜೂಜು, 22 ಗ್ಯಾಂಬ್ಲಿಂಗ್‌ ಕೇಸ್‌, 4 ಒ.ಸಿ ಕೇಸ್‌, 2020ರಲ್ಲಿ 9 ಜೂಜು ಪ್ರಕರಣ ದಾಖಲಾಗಿದೆ.

ಈಗಾಗಲೇ ಗ್ರಾಮದ ಸಮಸ್ಯೆಗಳ ಬಗ್ಗೆ ಅರಿವಾಗಿದೆ. ಆಯಾ ಇಲಾಖೆಗಳ ಸಂಬಂಧಪಟ್ಟ ಅಧಿಕಾರಿಗಳಿಗೆ ಬಗೆಹರಿಸಲು ಶಿಫಾರಸು ಮಾಡಲಾಗುವುದು ಎಂದು ಹೇಳಿದರು. ಶಿರಾ ಸಿಪಿಐ ಶಿವಕುಮಾರ್‌, ಪಟ್ಟನಾಯಕನಹಳ್ಳಿ ಪಿಎಸ್‌ಐ ವಿ.ನಿರ್ಮಲಾ, ತಾವರೆಕೆರೆ ಪಿಎಸ್‌ಐ ಮಹಾಲಕ್ಷ್ಮೀ, ಬರಗೂರು ಉಪ ಪೊಲೀಸ್‌ ಠಾಣಾ ಮುಖ್ಯಪೇದೆ ಜುಂಜಣ್ಣ, ಗ್ರಾಪಂ ಅಧ್ಯಕ್ಷೆ ಕಾಮಾಕ್ಷಿ, ದಿ ಫ್ಲಾರೆನ್ಸ್‌ ಪಬ್ಲಿಕ್‌ ಶಾಲೆ ಸಂಸ್ಥಾಪಕ ಅಧ್ಯಕ್ಷ ಕೆ.ಬಸವರಾಜು,

ರಂಗ ಕಲಾವಿದ ಕೆ.ಭೂತರಾಜು, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹುಲ್ಲೂರಯ್ಯ, ಕರವೇ ಅಧ್ಯಕ್ಷ ಲತೀಫ್, ಹಂದಿಕುಂಟೆ ವಿಎಸ್‌ಎಸ್‌ಎನ್‌ ಅಧ್ಯಕ್ಷ ನಾರಾಯಣಪ್ಪ, ಡಿ.ಎನ್‌.ಪರಮೇಶ್‌ ಗೌಡ, ಪ್ರಗತಿಪರ ಕೃಷಿಕ ಯಲಪೇನಹಳ್ಳಿ ಕೃಷ್ಣೇಗೌಡ, ಸಾಹಿತಿ ಕೆ.ನರಸಪ್ಪ, ಬಿ.ಹಲುಗುಂಡೇಗೌಡ, ಲಕ್ಕನಹಳ್ಳಿ ಮಂಜುನಾಥ್‌, ಪಕೃದ್ದೀನ್‌, ಓಂಕಾರ್‌ ಇತರರು ಇದ್ದರು.

ಸಿ.ಸಿ. ಟಿವಿ ಅಳವಡಿಸಿ: ಗ್ರಾಮದ ಹೊಸ ಬಡಾವಣೆಯ ದಲಿತ ಕಾಲನಿ, ಬಸ್‌ ನಿಲ್ದಾಣ, ಮುಖ್ಯ ಬೀದಿಗಳಲ್ಲಿ ವಂಶಿಕೃಷ್ಣ ಸಂಚರಿಸಿ, ಸಾರ್ವಜನಿಕರಿಗಾಗುವ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು. ಚಿನ್ನಾಭರಣಗಳ ಅಂಗಡಿ, ಬೂಸಾ ಅಂಗಡಿಗಳಲ್ಲಿ ಸಿ.ಸಿ. ಟಿವಿ ಅಳವಡಿಸಿಕೊಂಡು ಜಾಗ್ರತೆ ವಹಿಸಬೇಕೆಂದು ಸಲಹೆ ನೀಡಿದರು. ದಿ ಫ್ಲಾರೆನ್ಸ್‌ ಪಬ್ಲಿಕ್‌ ಶಾಲೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಂಶಿಕೃಷ್ಣ ಸೋಮವಾರ ರಾತ್ರಿ ಗ್ರಾಮ ವಾಸ್ತವ್ಯ ಮಾಡಿದರು.

“ಉದಯವಾಣಿ’ ವರದಿ ಪ್ರತಿಧ್ವನಿ: ಬರಗೂರಿನ ಉಪಪೊಲೀಸ್‌ ಠಾಣೆ ನೂತನ ಕಟ್ಟಡ ಕಾಮಗಾರಿ, ಸಿಬ್ಬಂದಿ ಕೊರತೆ ನೀಗಿಸುವ ಹಾಗೂ ಉಪಠಾಣೆ ಮೇಲ್ದರ್ಜೆಗೇರಿಸುವ ಬಗ್ಗೆ “ಉದಯವಾಣಿ’ಯಲ್ಲಿ ಪ್ರಕಟವಾಗಿರುವ ವರದಿ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವಂತಿದೆ.

ಸಮಸ್ಯೆ ನಿವಾರಣೆ ಮಾತಿಗೆ ಸೀಮಿತವಾಗಬಾರದು. ಮೇಲಧಿಕಾರಿಗಳೊಂದಿಗೂ ಚರ್ಚಿಸಿ ಬೇಡಿಕೆ ಬಗೆಹರಿಸಬೇಕಿದೆ. ಇತ್ತೀಚಿನ ದಿನಗಳಲ್ಲಿ ದನಕರು ಕದಿಯುವ, ಶಾಲಾ ಆವರಣಗಳಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕೆಂದು ಜ್ಞಾನಜ್ಯೋತಿ ಕಾಲೇಜು ಪ್ರಾಂಶುಪಾಲ ಡಿ.ಎನ್‌.ಪರಮೇಶ್‌ಗೌಡ ಮನವಿ ಮಾಡಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.