ಹೆಚ್ ಎಲ್ ನಾರಾಯಣ್ ಮಾಸ್ಟರ್ ಎಲ್ಲರಿಗೂ ದಾರಿದೀಪ : ಗುರುವಂದನೆ ಕಾರ್ಯಕ್ರಮ


Team Udayavani, Mar 23, 2022, 6:25 PM IST

1-fsdfds

ಕೊರಟಗೆರೆ:   ಮನುಷ್ಯನ ಉಜ್ವಲ ಭವಿಷ್ಯ ವಿದ್ಯೆಯಿಂದ ಮಾತ್ರ ಸಾಧ್ಯ. ನಾವು ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು ಯಾವುದೂ ಕೊನೆಯವರೆಗೂ ಉಳಿಯುವುದಿಲ್ಲ. ಆದರೆ ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜತೆಗಿರುತ್ತದೆ. ಅಂತಹ ಉತ್ತಮ ಶಿಕ್ಷಕನ ಹಿಂದೆ ಒಂದು ಬುದ್ಧಿವಂತರ ಸೈನ್ಯವೇ ಇರುತ್ತದೆ ಅದಕ್ಕೆ ಉದಾಹರಣೆ ಹೆಚ್.ಎಲ್.ಎನ್.  ಮಾಸ್ಟರ್ ಎಂದು ಹೊಳವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಎಸ್. ಈರಣ್ಣ ನಿವೃತ್ತ ಉಪಾಧ್ಯಾಯ ಹೆಚ್ ಎಲ್ ನಾರಾಯಣ್ ಅವರನ್ನ ಗುಣಗಾನ ಮಾಡಿದರು.

ಕೊರಟಗೆರೆ ತಾಲೂಕಿನ ಅಕ್ಕಿ ರಾಂಪುರ ಸರ್ಕಾರಿ ಪ್ರೌಢಶಾಲೆ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಹಿರಿಯ ವಿದ್ಯಾರ್ಥಿಗಳ ಗುರುವಂದನಾ ಕಾರ್ಯಕ್ರಮ, ಶಾರದಾ ಪೂಜೆ , ಎಸ್ ಎಸ್ ಎಲ್ ಸಿ  ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಜೀವನದಲ್ಲಿ ಗುರಿ, ಚಲ, ಗುರುವಿನ ಆಶೀರ್ವಾದ ಇದ್ದರೆ ಮಾತ್ರವೇ ವಿದ್ಯೆ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಸಾಧ್ಯ ಎಂದರು.

ಸಮಾಜದಲ್ಲಿ ನಾವು ಇಂದು  ಉನ್ನತ ಶಿಕ್ಷಣ ಪಡೆದ ಸಮಾಜದಲ್ಲಿ ಒಳ್ಳೆಯ ಸ್ಥಾನಮಾನ ಪಡೆದಿದ್ದರೆ ಅದರ ಹಿಂದೆ ಈ ಸಮಾಜ ಪ್ರತಿಯೊಬ್ಬರ ಶ್ರಮ ಅಡಗಿರುತ್ತದೆ, ಅವರು ಬೆವರು ಸುರಿಸಿ ಸಂಪಾದಿಸಿದ ಹಣವನ್ನು ಖರ್ಚು ಮಾಡುವ ಮೂಲಕ ಕಟ್ಟಿದ ತೆರಿಗೆಯ ಹಣದಿಂದಲೆ ನಾವು ಈ ಸ್ಥಾನಕ್ಕೇರಿದ್ದೇವೆ ಎಂಬುದನ್ನು ಯಾರೂ ಮರೆಯಬಾರದು.ನಾವು ಇಂದು ಏನಾದರೂ ಗಳಿಸಿದ್ದರೆ ಅದೆಲ್ಲವೂ ಈ ಸಮಾಜದಿಂದ ಗಳಿಸಿದ್ದೆ. ಹಾಗಾಗಿ ಈ ಸಮಾಜದಿಂದ ಪಡೆದ ಒಂದಷ್ಟನ್ನಾದರೂ ನಾವು ಮತ್ತೆ ಸಮಾಜಕ್ಕೆ ವಾಪಸ್ಸು ಮಾಡಬೇಕಾಗುತ್ತದೆ. ಆ ಮೂಲಕ ಅಕ್ಷರ ಕಲಿಸಿದ ಗುರುಗಳು, ಜನ್ಮ ಕೊಟ್ಟ ಹೆತ್ತವರು, ಆಡಿ ಬೆಳೆದ ಭೂಮಿಯ ಋಣವನ್ನು ತೀರಿಸಲು ಸಾಧ್ಯವಾಗುತ್ತದೆ ಎಂದರು.

ಹಳೆಯ ವಿದ್ಯಾರ್ಥಿಗಳ ವತಿಯಿಂದ ಭೀಮ್ ಸಂಸ್ಥೆಯ ಸಂಸ್ಥಾಪಕರಾದ ಬಿ.ಜಿ  ರವಿಕುಮಾರ್ ಮಾತನಾಡಿ ಶಿಕ್ಷಣದ ಜೊತೆಗೆ ಬದುಕಿನ ಪಾಠ ಕಲಿಸಿಕೊಟ್ಟ ಅತ್ಯುತ್ತಮ ಶಿಕ್ಷಕರಲ್ಲಿ ವಿದ್ಯಾರ್ಥಿ ಸ್ನೇಹಿ ಜೀವಿಯಾದ ಎಚ್ ಎಲ್ ಎನ್ ಸರ್ ರವರನ್ನ ನಮ್ಮ ಕೊನೆಯ ಉಸಿರಿರುವವರೆಗೂ ಮರೆಯುವಂತಿಲ್ಲ ಅಂದು ಅವರು ನೀಡಿದಂತಹ ಅನೇಕ ಮಾರ್ಗದರ್ಶನಗಳು ಇಂದು ನಮಗೆ ದಾರಿದೀಪವಾಗಿದ್ದು ,ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಅವರ ಜೀವನವನ್ನು ರೂಪಿಸುವಂತ ಶಿಕ್ಷಕರು ಸಿಗುವಂತವರು ಅಪರೂಪ ಅಂತ ಕೆಲಸ ಈ ಶಿಕ್ಷಕರಿಂದ ಸಾವಿರಾರು ವಿದ್ಯಾರ್ಥಿಗಳ ಜೀವನ ರೂಪಗೊಂಡಿರುವುದು ಇವರ ಸಾರ್ಥಕತೆಯ ಜೀವನವಾಗಿದೆ ಎಂದರು.

ಹೊಳವನಹಳ್ಳಿ ಪ್ರೌಢಶಾಲೆಯಲ್ಲಿ 20 ವರ್ಷಗಳ ಹಿಂದೆ ಕೊರಟಗೆರೆ ತಾಲೂಕಿಗೆ  ಟಾಪರ್ ಆಗಿ ಹೊರಹೊಮ್ಮಿದ ಹಳೆಯ ವಿದ್ಯಾರ್ಥಿ ರವಿ ಶರ್ಮಾ ಮಾತನಾಡಿ ನಾನು ಎಚ್ ಎಲ್ ಎನ್ ಮಾಸ್ಟರ್ ಗೆ ಅಚ್ಚುಮೆಚ್ಚಿನ ಶಿಷ್ಯನಾಗಿ ಇಡೀ ಪ್ರೌಢಶಾಲೆಗೆ ಟಾಪರ್ ಆಗಿ ಜೊತೆಗೆ ಪದವಿಪೂರ್ವ ಹಾಗೂ ಪದವಿ ನಂತರವೂ ಟಾಪರ್ ಆಗಿ ಹೊರಹೊಮ್ಮಿರುವ ನಾನು ಶಿಕ್ಷಣ ಹೊಟ್ಟೆ ಒರೆಸಿಕೊಳ್ಳಲು ಸರ್ಕಾರಿ  ವೃತ್ತಿ ಅವಲಂಬಿಸದೆ ನಮಗೆ ಜನ್ಮ ನೀಡಿದ ಭಾರತ ಮಾತೆಯ ಋಣ ತೀರಿಸುವ ಕೆಲಸ ಪ್ರತಿಯೊಬ್ಬರಿಂದ ಆಗಬೇಕಿದೆ ನನ್ನ ಪ್ರಮುಖ ಧ್ಯೇಯ ಹಿಂದೂ ಧರ್ಮವನ್ನ ಪೋಷಿಸುವುದು ಹೊಸ ಪೀಳಿಗೆಯ ಮಕ್ಕಳಿಗೆ ಹಿಂದೂ ಧರ್ಮದ ಬಗ್ಗೆ ಜಾಗೃತಿ ಮೂಡಿಸಿ ನಮ್ಮ ದೇಶದ ದೇಶಾಭಿಮಾನ ಸಂಸ್ಕೃತಿ ಸಂಪ್ರದಾಯವನ್ನ‌ ರೂಡಿಸಿಕೊಳ್ಳುವ ನಿಟ್ಟಿನಲ್ಲಿ ಸಂದೇಶವನ್ನು ಬಿತ್ತಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು ನಾನು ತೆರೆಮರೆಯಲ್ಲಿ ದೇಶಕ್ಕಾಗಿ ದೇಶಾಭಿಮಾನ ಮೂಡಿಸುವಂತಹ ನಿಟ್ಟಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು ನಮ್ಮ ಮನೆ ಜ್ಞಾನ ಕೇಂದ್ರವಾಗಿದ್ದು 4000 ವಿವಿಧ ಬುಕ್ ಗಳು ಇದ್ದು ಇವುಗಳನ್ನು ಅಧ್ಯಯನ ಮಾಡಿರುವುದಲ್ಲದೆ ಇದರಲ್ಲಿನ ಹಲವು ಉಪಯುಕ್ತ ಮಾಹಿತಿಗಳನ್ನು ಬಿತ್ತರಿಸುವುದೇ ನನ್ನ ಪ್ರಮುಖ ಧ್ಯೇಯವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಭೀಮ್ ಸಂಸ್ಥೆಯ ಸಂಸ್ಥಾಪಕರಾದ ಬಿ.ಜಿ . ರವಿಕುಮಾರ್ ಆಹುಜ ಸೌಂಡ್ ಸಿಸ್ಟಮ್ ಉಚಿತವಾಗಿ ಕೊಡುಗೆಯಾಗಿ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರುಗಳಾದ ಗಿರೀಶ್ ,ಕೋಟೆ ಕಲ್ಲಯ್ಯ ಸ್ಮಿತಾ ,ಅನುಪಮಾ ,ಶೈಲಜಾ ,ಮಂಜುನಾಥ್, ಜೈ ಸಿಂಹ, ಕೆ ಎಸ್ ಮಂಜುನಾಥ, ಸುಷ್ಮಾ, ಫಾತಿಮಾ ,ಅಪ್ಪಾಜಿಗೌಡ ಎಸ್ ಡಿಎಂಸಿ ಅಧ್ಯಕ್ಷರಾದ ರಮೇಶ್ ,ಸಿದ್ದಪ್ಪ , ,ಮಹಾಲಕ್ಷ್ಮಿ, ಹಳೆಯ ವಿದ್ಯಾರ್ಥಿಗಳಾದ ರಂಗಧಾಮಯ್ಯ ,ರವಿಕುಮಾರ್ , ರಘುಕುಮಾರ್, ಲಕ್ಷ್ಮೀಪ್ರಸಾದ್ ,ರವಿಪ್ರಸಾದ್ , ಶಂಕರ್ , ಮಲ್ಲಿಕಾರ್ಜುನ್, ಶರೀಫ್ ಗೋವಿಂದರಾಜು ,ಲೋಕೇಶ್ , ಹೆಚ್ ಪಲ್ಲವಿ , ರವಿ .ಎಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.