ಸಿದ್ಧಗಂಗಾ ಶ್ರೀ ಆರೋಗ್ಯ ವಿಚಾರಿಸಿದ ಗೃಹ ಸಚಿವ


Team Udayavani, Jan 2, 2019, 1:57 AM IST

x-20.jpg

ತುಮಕೂರು: “ನಡೆದಾಡುವ ದೇವರು ಸಿದ್ಧಗಂಗಾ ಪೀಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರು ಆರೋಗ್ಯವಾಗಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ’ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದರು. ಸಿದ್ಧಗಂಗಾ ಮಠಕ್ಕೆ ಮಂಗಳವಾರ ತಮ್ಮ
ಪತ್ನಿ ಆಶಾ ಪಾಟೀಲ್‌ ಅವರೊಂದಿಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. “ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿರುವ ಕೊಠಡಿಗೆ ತೆರಳಿ ಆರೋಗ್ಯ ವಿಚಾರಿಸಿ, ಆಶೀರ್ವಾದ ಪಡೆದಿದ್ದೇನೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಶೀಘ್ರ ಗುಣಮುಖರಾಗಲಿದ್ದಾರೆ’ ಎಂದರು. ಶ್ರೀಗಳು ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಕ್ಕೆ ಮಾತ್ರ ಸೀಮಿತವಲ್ಲ. ಇಡೀ ದೇಶ ಮತ್ತು ವಿಶ್ವಕ್ಕೆ ಮಾದರಿಯಾದಂತವರು. ಅವರ ಆರೋಗ್ಯದ ಬಗ್ಗೆ ಅನೇಕರು ಆತಂಕದಲ್ಲಿದ್ದಾರೆ. ಕೆಲ ಸುಳ್ಳು ವದಂತಿಗಳೂ ಹರಿದಾಡುತ್ತಿವೆ. ಭಕ್ತರಿಗೆ ಯಾವುದೇ ಆತಂಕ ಬೇಡ’ ಎಂದು ಹೇಳಿದರು. 

ಶ್ರೀಗಳ ವಿಡಿಯೋ ಬಿಡುಗಡೆ
ತುಮಕೂರು: ಸಿದ್ಧಗಂಗಾ ಮಠದ ಹಿರಿಯ ಶ್ರೀಗಳ ಆರೋಗ್ಯದಲ್ಲಿ ಯಾವುದೇ ಏರುಪೇರು ಕಂಡು ಬಂದಿಲ್ಲ. ಅವರು ಚೇತರಿಕೆ ಕಾಣುತ್ತಿದ್ದು, ಈ ಬಗ್ಗೆ ಭಕ್ತರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಅಲ್ಲದೆ, ಗಾಳಿ ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿಯೇ ಮನವಿ ಮಾಡಿದ್ದಾರೆ. ಇದನ್ನು ಸ್ಪಷ್ಟಿಕರಿಸಲು ಮಠದಿಂದ ಶ್ರೀಗಳು ಚಟುವಟಿಕೆಯಿಂದಿರುವ ವಿಡಿಯೋವನ್ನೂ ಬಿಡುಗಡೆ ಮಾಡಲಾಗಿದೆ. ವಿಡಿಯೋದಲ್ಲಿ ಶ್ರೀಗಳು ಕೈಕಾಲು ಆಡಿಸುವುದು, ಅಕ್ಕಪಕ್ಕದವರನ್ನು ನೋಡುತ್ತಿರುವುದು ಮತ್ತು ವೈದ್ಯರು ಹೇಳುವುದನ್ನು ಗಮನವಿಟ್ಟು ಕೇಳುತ್ತಿರುವುದು ಸ್ಪಷ್ಟವಾಗಿ ಸೆರೆಯಾಗಿದೆ. ಅಷ್ಟೇ ಅಲ್ಲ, ವಿಡಿಯೋ ಮಾಡುವಾಗ ವೈದ್ಯರು ಶ್ರೀಗಳ ಮುಖದ ಮೇಲಿನ ಕಾವಿಯನ್ನು ಸರಿಸಿ ಅವರು ಬಾಯಲ್ಲಿ ಮೆಲ್ಲುವುದನ್ನು, ಕಣ್ಣಾಡಿಸುವುದನ್ನು ಸ್ಪಷ್ಟವಾಗಿ ವಿಡಿಯೋದಲ್ಲಿ ಸೆರೆಯಾಗುವಂತೆ ಮಾಡಿದ್ದಾರೆ. ವಿಡಿಯೋ ಮಾಡುವಾಗ ಶ್ರೀಗಳು ಚಟುವಟಿಕೆಯಿಂದ ಇದ್ದುದ್ದನ್ನು ನೋಡಿ, ಸ್ವತಃ
ವೈದ್ಯರ ಮುಖದಲ್ಲಿ ಮಂದಹಾಸ ಮೂಡಿತ್ತು. ಅಲ್ಲದೆ, ಬಿಡುಗಡೆ ಮಾಡಿದ ವಿಡಿಯೋವನ್ನು ನೋಡಿದ ಭಕ್ತರು ಸಂತೋಷದಿಂದ ಚಪ್ಪಾಳಿ ತಟ್ಟಿ ಶ್ರೀಗಳಿಗೆ ಕೈಮುಗಿದು ಶೀಘ್ರ ಗುಣಮುಖರಾಗಲಿ ಎಂದು ಬೇಡಿಕೊಳ್ಳುತ್ತಿದ್ದ ದೃಶ್ಯ ಕಂಡು ಬಂತು. ಶ್ರೀಗಳನ್ನು ಕಣ್ತುಂಬಿಕೊಂಡ ಭಕ್ತರು 111ನೇ ವರ್ಷದಲ್ಲೂ ಶ್ರೀಗಳ ಆರೋಗ್ಯ ಚೇತರಿಕೆ ಕಾಣುತ್ತಿರುವುದನ್ನು ಕಂಡು ಅಚ್ಚರಿ ವ್ಯಕ್ತಪಡಿಸಿದರು.

ಸುಳ್ಳು ಸುದ್ದಿಗೆ ಸ್ಪಷ್ಟನೆ: ಸೋಮವಾರ ಕೆಲವರು ಹಬ್ಬಿಸಿದ ಗಾಳಿ ಸುದ್ದಿ ಕೇಳಿ ರಾಜ್ಯದಲ್ಲಿರುವ ಶ್ರೀಮಠದ ಭಕ್ತವೃಂದ ಮಠದ ಕಡೆ ಧಾವಿಸುತ್ತಿತ್ತು. ಹಲವರು ದೂರವಾಣಿ ಮೂಲಕ ಕೇಳಲಾರಂಭಿಸಿದರು. ಶ್ರೀಗಳು ಚೆನ್ನಾಗಿದ್ದಾರೆ ಎಂದು ಮಠದಿಂದ ಎಷ್ಟು ಸಾರಿ ಹೇಳಿದರೂ ಭಕ್ತರಿಗೆ ಸಮಾಧಾನವಿಲ್ಲ. ಇದನ್ನು ಅರಿತ ವೈದ್ಯರು ಮಂಗಳವಾರ ಸಿದ್ಧಗಂಗಾ ಶ್ರೀಗಳು ಆರೋಗ್ಯವಾಗಿ ಇರುವ ಬಗ್ಗೆ
ವಿಡಿಯೋವನ್ನು ರಿಲೀಸ್‌ ಮಾಡಿ ಸಿದ್ಧಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ ಎನ್ನುವ ಸಂದೇಶ ರವಾನಿಸಿದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.