ಉದ್ಘಾಟನೆಯಾಗದ ವಸತಿ ಸಮುಚ್ಛಯ
Team Udayavani, Oct 14, 2019, 4:42 PM IST
ತಿಪಟೂರು: ಸರ್ಕಾರ ಪೊಲೀಸರಿಗೆ ಉತ್ತಮ ಸೌಲಭ್ಯ ನೀಡಲು ತಿಪಟೂರು ನಗರದ ಪೊಲೀಸ್ ಕ್ವಾಟ್ರಸ್ ಬಳಿ ಸುಮಾರು 3.60 ಕೋಟಿ ರೂ. ವೆಚ್ಚದಲ್ಲಿ ಕಾವೇರಿ ಹಾಗೂ ಹೇಮಾವತಿ ವಸತಿ ಸಮುಚ್ಛಯ ನಿರ್ಮಿಸಿದ್ದು, ಒಟ್ಟು 24 ಮನೆಗಳುಳ್ಳ ಸಮುತ್ಛಯಗಳು ನಿರ್ಮಾಣಗೊಂಡು ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಕಂಡಿಲ್ಲ.
ಸರ್ಕಾರದ ಆಶಯದಂತೆ ಉದ್ಘಾಟನೆಗೊಂಡು ಪೊಲೀಸರಿಗೆ ಸೂರು ಒದಗಿಸಬೇಕಿದ್ದ ಸಮುಚ್ಛಯಗಳು ಖಾಲಿಬಿದ್ದಿವೆ. ಪೊಲೀಸ್ ಸಿಬ್ಬಂದಿ ವಾಸವಾಗಿರುವ ಮನೆಗಳು ವಾಸಕ್ಕೆ ಯೋಗ್ಯವಲ್ಲದ ಸ್ಥಿತಿಯಲ್ಲಿ ಮಳೆ ಬಂತೆಂದರೆ ಸೋರುವ ಸೂರು ಬಿರುಕು ಬಿಟ್ಟ ಗೋಡೆಗಳ ಮನೆಯಲ್ಲಿ ಇಲಿ ಹಾವುಗಳ ಕಾಟದ ನಡುವೆಯೇ ವಾಸ ಮಾಡಬೇಕಿದೆ.
ಪೊಲೀಸ್ ಇಲಾಖೆಯ ಮೇಲಧಿಕಾರಿಗಳು ಸಿಬ್ಬಂದಿ ಸಮಸ್ಯೆ ಅರಿತು ನಿರ್ಮಾಣವಾಗಿರುವ ವಸತಿ ಸಮುತ್ಛಯಉದ್ಘಾಟನೆ ಮಾಡಿ ಸಿಬ್ಬಂದಿ ವಾಸಕ್ಕೆ ನೀಡಬೇಕಿದೆ. 30-40 ವರ್ಷದ ಹಿಂದೆ ನಿರ್ಮಿಸಿರುವ ಮನೆಗಳಲ್ಲಿ ಪೊಲೀಸರು ವಾಸವಿದ್ದು, ಅವುಗಳು ಶಿಥಿಲವಾಗಿವೆ. ಮಳೆಗಾಲದಲ್ಲಿ ಛಾವಣಿ ಸೋರುತ್ತಿವೆ. ಬಿರುಕು ಬಂದಿರುವ ಗೋಡೆ, ಇಲಿ-ಹಾವುಗಳ ಕಾಟದಿಂದ ವಾಸಿಸಲು ಭಯವಾಗುತ್ತದೆ. ಈ ಬಗ್ಗೆ ಮೇಲಧಿಕಾರಿಗಳ ಬಳಿ ಹೇಳಿಕೊಳ್ಳಲು ಆಗುವುದಿಲ್ಲ ಎಂದು ಹೇಳುತ್ತಾರೆ ಹೆಸರು ಹೇಳಲಿಚ್ಛಿಸದ ಅಧಿಕಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತೆಯರು
2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು