ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಭಾರೀ ಅವ್ಯವಹಾರ


Team Udayavani, Nov 28, 2019, 5:44 PM IST

tk-tdy-1

ತುಮಕೂರು: ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳು ಶಾಮೀಲಾಗಿದ್ದಾರೆ. 6 ವರ್ಷದಿಂದ ಜಿಲ್ಲೆಯಲ್ಲೇ ಠಿಕಾಣಿ ಹೂಡಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಅವರನ್ನು ಅಮಾನತಿನಲ್ಲಿಟ್ಟು ಸಿಬಿಐ ತನಿಖೆ ನಡೆಸಬೇಕೆಂದು ಸರ್ಕಾರಕ್ಕೆ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಸೊಗಡು ಎಸ್‌. ಶಿವಣ್ಣ ಒತ್ತಾಯಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಗರದಲ್ಲಿ ಅಸಮರ್ಪಕ ಅವೈಜ್ಞಾನಿಕ, ಸಾರ್ವಜನಿಕರಿಗೆ ಉಪಯೋಗವಿಲ್ಲದ ಕಾಮಗಾರಿಗಳು ನಡೆಯುತ್ತಿದ್ದು, ಕಳಪೆಯಿಂದ ಕೂಡಿವೆ. ಕಾಮಗಾರಿ ನಡೆಯುವ ಸ್ಥಳದಲ್ಲಿ ಕಂಟ್ರಾಕ್ಟರ್‌, ಎಂಜಿನಿಯರ್‌ ಆಗಲೀ, ಇಲಾಖಾ ಎಂಜಿನಿಯರ್‌ ಇರುವುದಿಲ್ಲ, ಸ್ಮಾರ್ಟ್‌ಸಿಟಿ ನಿಯಮಾವಳಿ ಅನ್ವಯ ಕಾಮಗಾರಿ ಮೇಲ್ವಿಚಾರಣೆ ನಡೆಯುತ್ತಿಲ್ಲ, ಗಾಂಧಿನಗರ, ಎಸ್‌. ಎಸ್‌.ಪುರಂ, ಸಿದ್ಧಗಂಗಾ ಬಡಾವಣೆ, ಕೆ.ಆರ್‌. ಬಡಾವಣೆ, ಎಂ.ಜಿ. ರಸ್ತೆ, ಶ್ರೀರಾಮ ನಗರ, ಅಗ್ರಹಾರ, ಚಿಕ್ಕಪೇಟೆ, ಸಂತೆಪೇಟೆ, ವಿನಾಯಕ ನಗರ,ಮಂಡಿಪೇಟೆ, ಬಾಳನಕಟ್ಟೆ, ಬಸ್ಟ್ಯಾಂಡ್‌ ಪ್ರದೇಶಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಲು ಕ್ರಮ ತೆಗೆದುಕೊಂಡಿಲ್ಲ ಎಂದು ದೂರಿದರು.

ಭ್ರಷ್ಟಾಚಾರದ ಸಾಧ್ಯತೆ: ನಗರದ ಸರ್ಕಾರಿ ಜ್ಯೂನಿಯರ್‌ ಕಾಲೇಜು ಆಟದ ಮೈದಾನದ ಪಾರ್ಕ್‌ ಕೆಲಸ, ವಿಶ್ವವಿದ್ಯಾನಿಲಯ ಪಾರ್ಕ್‌ ಪ್ರದೇಶದ ಕಾಮಗಾರಿ, ಯುಜಿಡಿ ಹಾಗೂ 24×7 ಕುಡಿಯುವ ನೀರು ಸರಬರಾಜು ಯೋಜನೆ, ಬುಗುಡನಹಳ್ಳಿ ಕೆರೆಅಭಿವೃದ್ಧಿ ಸರಿಯಾಗಿ ನಡೆಯುತ್ತಿಲ್ಲ, ಭ್ರಷ್ಟಾಚಾರನಡೆದಿರುವ ಸಾಧ್ಯತೆ ಇದೆ. ಸ್ಮಾರ್ಟ್‌ಸಿಟಿ ಯೋಜನೆ ಉಸ್ತುವಾರಿ ಸಮಿತಿ ಕೇಂದ್ರದ ಮಾರ್ಗಸೂಚಿ ಯನ್ವಯ ರಚಿತವಾಗಬೇಕು. ನಗರದಲ್ಲಿನ ತಾಂತ್ರಿಕ ಕಾಲೇಜಿನ ಕಾಮಗಾರಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರು, ಚಾರ್ಟೆಡ್‌ ಅಸೋಸಿಯೇಷನ್‌ ಮುಖ್ಯಸ್ಥರು, ಕಾನೂನು ತಜ್ಞರು, ಸಾಮಾಜಿಕ ಆರ್ಥಿಕ ಪ್ರಜ್ಞೆಯುಳ್ಳವರನ್ನು ಸದಸ್ಯರನ್ನಾಗಿ ಮಾಡಬೇಕು. ಪ್ರತಿ ಕಾಮಗಾರಿಗಳ ಸೋಶಿಯಲ್‌ ಆಡಿಟ್‌ ಸಾರ್ವಜನಿಕರ ಸಮ್ಮುಖದಲ್ಲಿ ನಡೆಯುತ್ತಿಲ್ಲ ಎಂದು ಹೇಳಿದರು.

ಮನೆ ಮನೆಗಳಿಗೆ ಗ್ಯಾಸ್‌ ಸಂಪರ್ಕ ನೀಡುವ ಕಾಮಗಾರಿಗಳಲ್ಲಿ ಗುಣಮಟ್ಟದ ಸಾಮಗ್ರಿ ಬಳಸುತ್ತಿಲ್ಲ. ರಸ್ತೆ ಅಗೆಯುವ ಬದಲು ಹಾರಿಜೆಂಟಲ್‌ ಡ್ರಿಲ್ಲಿಂಗ್‌ ಮೂಲಕ ಮಾಡಿದ್ದರೆ ಬಡಾವಣೆಯಲ್ಲಿನ ಚಿಕ್ಕ ರಸ್ತೆಗಳಲ್ಲಿ ಓಡಾಡಲು ತೊಂದರೆಯಾಗುತ್ತಿರಲಿಲ್ಲ. ಬಡಾವಣೆ ಧೂಳುಮಯ ಆಗುತ್ತಿರಲಿಲ್ಲ. ತುಮಕೂರು ನಗರ ಧೂಳುಮಯವಾಗಿದೆ. ಯಾವ ರಸ್ತೆಯಲ್ಲೂ ನಾಗರಿಕರು ಓಡಾಡಲು ಆಗುತ್ತಿಲ್ಲ. ಚಳಿಗಾಲದಲ್ಲಿ ಅಸ್ತಮಾ ರೋಗಿಗಳು ಜಾಸ್ತಿಯಾಗುತ್ತಿದ್ದಾರೆ. ಜ್ವರ, ಕೆಮ್ಮಿನಿಂದ ಬಳಲುತ್ತಿದ್ದಾರೆ. ನಗರದ ಫ‌ುಟ್‌ಪಾತ್‌ಗಳಲ್ಲಿ ಕೆಲ ಪಾಲಿಕೆ ಸದಸ್ಯರು ಅಂಗಡಿ ಬಾಡಿಗೆ ನೀಡಿದ್ದಾರೆ. ಕೆಲವರು ತಮ್ಮ ಹೆಸರಿಗೆ ಹರಾಜು ಮಾಡಿಕೊಂಡು ಅಧಿಕ ಮೊತ್ತಕ್ಕೆ ಬೇರೆಯ ವರಿಗೆ ಬಾಡಿಗೆ ನೀಡಿದ್ದಾರೆ ಎಂದು ಕಿಡಿಕಾರಿದರು.

ಅಮಾನಿಕೆರೆ ಏರಿ ದುರಸ್ತಿ ಕಳಪೆ: ನೀರು ಕೊಳವೆ ಮಾರ್ಗ ಹಾಕುತ್ತಿರುವ ಸ್ಥಳಗಳಲ್ಲಿ ಮುಂಜಾಗ್ರತೆ ಕ್ರಮತೆಗೆದುಕೊಳ್ಳದೆ ಹಳ್ಳ ತೆಗೆದಿದ್ದು, ಮುಂದಾಗುವ ಅವಘಡಗಳಿಗೆ ನಗರಪಾಲಿಕೆ, ನಗರ ನೀರು ಸರಬರಾಜು ಮಂಡಳಿ ಹೊಣೆಗಾರರಾಗಬೇಕಾಗುತ್ತದೆ. ಮಹಾತ್ಮ ಗಾಂಧಿ ಕ್ರೀಡಾಂಗಣ ನವೀಕರಣ ಮಾಡಿ ಹಾಗೆ ಉಳಿಸಬೇಕಾಗಿತ್ತು. ಅಲ್ಲಿ ಮಾಡುತ್ತಿರುವ ಖರ್ಚಿಗೆ ಬೇರೆಡೆ 20 ಎಕರೆ ಜಾಗ ಖರೀದಿಸಿ ಎಲ್ಲಾ ಕ್ರೀಡೆಗಳಿಗೆ ಅವಕಾಶ ಕಲ್ಪಿಸ ಬಹುದಿತ್ತು. ನಗರದ ಅಮಾನಿಕೆರೆ ಏರಿ ದುರಸ್ತಿ ಕಳಪೆ ಯಾಗಿದೆ ಎಂದು ದೂರಿದರು.

100 ಕೋಟಿ ರೂ. ಮೊತ್ತದ ರಿಂಗ್‌ರಸ್ತೆ ಕಾಮಗಾರಿ ಪ್ರದೇಶದಲ್ಲಿ ಕೆರೆ ಅಚ್ಚುಕಟ್ಟು ಪ್ರದೇಶವಾಗಿದ್ದು,ತೇವಾಂಶ ಭರಿತವಾಗಿರುವುದರಿಂದ ವೈಜ್ಞಾನಿಕವಾಗಿ ಕಾಮಗಾರಿ ಮಾಡಬೇಕಾಗಿದ್ದು, ಅದರಂತೆ ಮಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಸಮಸ್ಯೆ ಉಂಟಾಗುತ್ತದೆ. ಬುಗುಡನಹಳ್ಳಿ ಕೆರೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಹೂಳೆತ್ತದೇ ಬಿಲ್‌ ಮಾಡುತ್ತಿದ್ದಾರೆ.ಯಾವುದೇ ಕಾರಣಕ್ಕೂ ಬಿಲ್‌ ಸಂದಾಯ ಮಾಡ ಬಾರದು ಎಂದು ಆಗ್ರಹಿಸಿದರು.

ಬಿಜೆಪಿ ಮುಖಂಡರಾದ ಎಂ.ಬಿ ನಂದೀಶ್‌, ಕೆ.ಪಿ ಮಹೇಶ್‌, ರಂಗನಾಯಕ, ಜಯಸಿಂಹರಾವ್‌, ನಂಜುಂಡಪ್ಪ, ಆಟೋ ನವೀನ್‌, ಬನಶಂಕರಿ ಬಾಬು, ಚಂದ್ರಪ್ಪ, ಮಧನ್‌ಸಿಂಗ್‌ ಮೊದಲಾದವರು ಇದ್ದರು.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.