ಮರ ಕಿತ್ತು ಸಸಿ ನೆಡುವ ಅರಣ್ಯಾಧಿಕಾರಿಗಳು!

ರಾಮಪ್ಪನಕೆರೆ ಸುತ್ತಮುತ್ತಲ ನೂರಾರು ಎಕರೆ ಅರಣ್ಯದಲ್ಲಿ ಮರಗಳು ನಾಶ | ಆರೋಪ ತಳ್ಳಿ ಹಾಕಿದ ಅಧಿಕಾರಿಗಳು

Team Udayavani, Feb 17, 2021, 4:55 PM IST

ಮರ ಕಿತ್ತು ಸಸಿ ನೆಡುವ ಅರಣ್ಯಾಧಿಕಾರಿಗಳು!

ಹುಳಿಯಾರು: ಹೋಬಳಿಯ ದಸೂಡಿ ಸಮೀಪದ ರಾಮಪ್ಪನಕೆರೆ ಸುತ್ತಮುತ್ತಲ ನೂರಾರು ಎಕರೆಅರಣ್ಯದಲ್ಲಿ ಅರಣ್ಯಾಧಿಕಾರಿಗಳೇ ಮರಗಳನ್ನು ಕಡಿದು ಅದೇ ಸ್ಥಳದಲ್ಲಿ ಪುನಹ ಅರಣ್ಯೀಕರಣ ಮಾಡಲು ಹೊರಟಿದ್ದಾರೆ ಎಂದು ಗಾಣಧಾಳು ಗ್ರಾಮಸ್ಥರು ಆರೋಪಿಸಿದ್ದಾರೆ.

ಪ್ರಾಣಿ ಪಕ್ಷಿಗಳಿಗೆ ಹಣ್ಣು ಸಿಗುತ್ತಿತ್ತು: ಬುಕ್ಕಾಪಟ್ಟಣ ವಲಯ ಅರಣ್ಯ ಪ್ರದೇಶಕ್ಕೆ ಸೇರಿದ ದಸೂಡಿ ಸರ್ಕಾರಿಸರ್ವೆ ನಂಬರ್‌ 100, 101, 104, 106 ರಲ್ಲಿ ಸುಮಾರು290 ಎಕರೆ ಅರಣ್ಯದಲ್ಲಿ ಈ ಹಿಂದೆ ಜಾಣೆ, ಕಮರಸೇರಿದಂತೆ ಅನೇಕಗಿಡಗಳನ್ನು ಅರಣ್ಯ ಇಲಾಖೆನೆಟ್ಟು 5-6 ವರ್ಷ ಟ್ಯಾಂಕರ್‌ಗಳಲ್ಲಿ ನೀರುಣಿಸಿಬೆಳೆಸಿತ್ತು. ಆದರೆ, ಈಗ ಈ ಎಲ್ಲಾ ಮರಗಳುಹೆಮ್ಮರವಾಗಿ ಬೆಳೆದು ಪ್ರಾಣಿ ಪಕ್ಷಿಗಳಿಗೆ ನೆರಳು, ಹಣ್ಣು ನೀಡುತ್ತಿರುವ ಸಂದರ್ಭದಲ್ಲಿ ನಿರ್ದಾಕ್ಷಿಣ್ಯವಾಗಿ ಕಡಿದು ಧರೆಗುರುಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಾವಿರಾರು ಮರಗಳು ನಾಶ: ಮುಂಬೈ, ಕರ್ನಾಟಕ ಹಾಗೂ ಗೋವಾ ರಾಜ್ಯಗಳಲ್ಲಿ ಹಾದು ಹೋಗುವರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಹಾಳಾಗಿರುವಅರಣ್ಯ ನಾಶದ ಪರ್ಯಾಯವಾಗಿ ಅರಣ್ಯ ಬೆಳೆಸಲುಬುಕ್ಕಾಪಟ್ಟಣ ಅರಣ್ಯ ಇಲಾಖೆಗೆ ಲಕ್ಷಾಂತರ ರೂ.ಬಿಡುಗಡೆಯಾಗಿದೆ. ಈ ಹಣವನ್ನು ಖರ್ಚು ಮಾಡುವ ಸಲುವಾಗಿ ಈಗಾಗಲೇ ಸರ್ವೆ ನಂಬರ್‌104ರಲ್ಲಿ ಹಿಟಾಚಿ ಯಂತ್ರದಿಂದ ಸಾವಿರಾರುಮರಗಳನ್ನು ನೆಲಕ್ಕೆ ಉರುಳಿಸಿದ್ದಾರೆ ಎಂದು ಚಿತ್ರ ಸಹಿತ ಗ್ರಾಪಂ ಸದಸ್ಯ ಗುರುವಾಪುರ ಶ್ರೀನಿವಾಸ್‌ ಆರೋಪಿಸಿದ್ದಾರೆ.

ಜನಪ್ರತಿನಿಧಿಗಳು ಮತ್ತು ಮೇಲಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕಠಿಣ ಕ್ರಮ ಕೈಗೊಳ್ಳದಿದ್ದರೆ,ಉಳಿದಿರುವ ಮರಗಳನ್ನೂ ಕಡಿದು ನೆಲಸಮಮಾಡುತ್ತಾರೆ. ಹೀಗಾಗಿ ಎಚ್ಚೆತ್ತು ಇಂತಹ ಕೃತ್ಯನಡೆಸಿರುವ ಬುಕ್ಕಾಪಟ್ಟಣ ವಲಯ ಅರಣ್ಯ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮರ ಉ‌ರುಳಿಸಿ ಸಸಿ ನೆಡುವುದು ಸರಿಯೇ? :

ಬುಕ್ಕಾಪಟ್ಟಣ ಅರಣ್ಯ ಪ್ರದೇಶಲ್ಲಿ ಅರಣ್ಯೀಕರಣಗೊಳಿಸಲು ಸಾಕಷ್ಟು ಅರಣ್ಯ ಪ್ರದೇಶವಿದ್ದರೂ ಮರಗಳನ್ನು ಕಡಿದು ಪುನಃ ಅದೇ ಸ್ಥಳದಲ್ಲಿ ನೆಡಲು ಹೊರಟಿರುವುದರ ಹಿಂದಿರುವ ರಹಸ್ಯವಾದರೂ ಏನು. ಅರಣ್ಯೀಕರಣ ಮಾಡುವ ಮೊದಲು ಸ್ಥಳೀಯ ಸಭೆ ನಡೆಸಬೇಕಿದೆ. ಆದರೆ, ಬುಕ್ಕಾಪಟ್ಟಣ ವಲಯ ಅರಣ್ಯಾಧಿಕಾರಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ. ಈಗಾಗಲೇ ಹುಲುಸಾಗಿ ಬೆಳೆದಿರುವ ಮರಗಳನ್ನು ತೆರವುಗೊಳಿಸಿ ಮತ್ತೆ ಗಿಡಗಳನ್ನು ನೆಡಲು ತೀರ್ಮಾನಿಸಿರುವುದು ಆಕ್ಷೇಪಾರ್ಹ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಹಿಟಾಚಿ ಓಡಾಡುವಾಗ ಮುರಿದಿವೆ :

ಕುಂದಾಪುರ, ಹೊನ್ನಾವರದ ಮಾರ್ಗದಲ್ಲಿ ಅರಣ್ಯ ಜಾಗ ಬಿಟ್ಟುಕೊಡಲಾಗಿತ್ತು. ಅದಕ್ಕೆ ಪರ್ಯಾಯವಾಗಿ ಜಿಲ್ಲೆಯಲ್ಲಿ 300 ಹೆಕ್ಟೇರ್‌ ಅರಣ್ಯೀಕರಣ ಮಾಡಲು 2010ರಲ್ಲಿ ನಿರ್ಧರಿಸಿ ದಸೂಡಿ ಭಾಗದ 120 ಹೆಕ್ಟೇರ್‌ ಅನ್ನು ಆಯ್ಕೆ ಮಾಡಲಾಗಿತ್ತು. ಈಗ ಅನುಮೋದನೆ ದೊರೆತಿದ್ದು ಹೊಸ ಸಸಿ ನೆಡಲು ಟ್ರಂಚ್‌ ತೆಗೆಯಲು ಹಿಟಾಚಿ ಬಳಸಲಾಗಿತ್ತು. ಟ್ರಂಚ್‌ ತೆಗೆಯಲು ಹಿಟಾಚಿ ಓಡಾಡುವಾಗ ಕೆಲ ಉದಯದ ಗಿಡಗಳು ಮುರಿದಿವೆಯೇ ವಿನಃ ಉದ್ದೇಶ ಪೂರ್ವಕವಾಗಿ ಗಿಡಗಳನ್ನು ಕೀಳಲಾಗಿಲ್ಲ. ಇದನ್ನು ಗಮನಿಸಿ ಕೆಲಸ ನಿಲ್ಲಿಸಿದ್ದು ಹಿಟಾಚಿ ಸಹ ಅಲ್ಲಿಯೇ ನಿಲ್ಲಿಸಲಾಗಿದೆ. ಪಂಚಾಯ್ತಿಯವರು ಬಯಲು ಸ್ಥಳದಲ್ಲಿ ಕೂಲಿಯವರಿಂದ ಕೆಲಸ ಮಾಡಿಸಿ ಸಸಿ ನೆಡಲುತಿಳಿಸಿದ್ದಾರೆ. ಮೇಲಧಿಕಾರಿಗಳ ಅನುಮತಿಪಡೆದು ಮುಂದಿನ ಹೆಜ್ಜೆ ಇಡಲಾಗುವುದು ಎಂದು ಬುಕ್ಕಾಪಟ್ಟಣ ವಲಯ ಅರಣ್ಯಾಧಿಕಾರಿ ಮಲ್ಲಿಕಾರ್ಜುನಯ್ಯ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.