ಮೇಲ್ದರ್ಜೆಗೇರುವುದೇ ಹುಳಿಯಾರು ಸರ್ಕಾರಿ ಆಸ್ಪತ್ರೆ ?


Team Udayavani, Feb 15, 2021, 9:05 PM IST

ಮೇಲ್ದರ್ಜೆಗೇರುವುದೇ ಹುಳಿಯಾರು ಸರ್ಕಾರಿ ಆಸ್ಪತ್ರೆ ?

ಹುಳಿಯಾರು: ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳ ಗಡಿ ಗ್ರಾಮಗಳ ಲಕ್ಷಾಂತರ ಜನ ಸಾಮಾನ್ಯರಿಗೆ ಐದು ದಶಕಗಳಿಂದ ಆರೋಗ್ಯ ಸೇವೆ ಒದಗಿಸುತ್ತಿರುವ ಹುಳಿಯಾರು ಪ್ರಾಥಮಿಕಆರೋಗ್ಯ ಕೇಂದ್ರ ಸಮುದಾಯ ಆರೋಗ್ಯಕೇಂದ್ರವಾಗಿ ಮೇಲ್ದರ್ಜೆಗೇರುವುದು ಯಾವಾಗ ಎನ್ನುವ ಪ್ರಶ್ನೆ ಕಳೆದ ದಶಕಗಳಿಂದಲೂ ಕೇವಲ ಪ್ರಶ್ನೆಯಾಗಿಯೇ ಉಳಿದಿದೆ.

ಈಗ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಇತ್ತ ಗಮನ ಹರಿಸಿರುವುದು ಸಾರ್ವಜನಿಕವಲಯದಲ್ಲಿ ಆಶಾಭಾವನೆ ಚಿಗುರೊಡೆದಿದೆ. ಹುಳಿಯಾರು ಪಟ್ಟಣ ರಾಜ್ಯದಲ್ಲಿಯೇ ಅತೀವೇಗವಾಗಿ ಬೆಳೆಯುತ್ತಿರುವ ಹೋಬಳಿ ಕೇಂದ್ರಗಳಲ್ಲಿ ಒಂದಾಗಿದೆ. ಪ್ರಮುಖ ವ್ಯಾಪಾರ ಕೇಂದ್ರವಾಗಿ ಹೊರಹೊಮ್ಮಿ ಪ್ರತಿದಿನ ಸಾವಿರಾರು ಜನರು ಬಂದುಹೋಗುವ ಸ್ಥಳವಾಗಿದೆ. ಹಾಗಾಗಿ ಸಹಜವಾಗಿಯೇ ಇಲ್ಲಿನ ಆಸ್ಪತ್ರೆಗೆ ಹಿಂದೆಂದಿಗಿಂತಲೂ ಕಳೆದ ಐದಾರು ವರ್ಷಗಳಿಂದ ಹೊರ ರೋಗಿಗಳು ದಾಖಲಾಗು ತ್ತಿರುವ ಕಾರಣ ಇಲ್ಲಿನ ವೈದ್ಯಕೀಯ ಸಿಬ್ಬಂದಿ ಮೇಲೆ ಬೀಳುತ್ತಿರುವ ಒತ್ತಡವನ್ನು ಕಂಡ ಜನತೆ ಮೇಲ್ದರ್ಜೆಗೇರುವ ಜರುರತ್ತಿನ ಬಗ್ಗೆ ನಿರೀಕ್ಷೆಯಿಟ್ಟು ಕೊಂಡಿದ್ದಾರೆ. ಆದರೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯವೋ ಅಥವಾ ಜನಪ್ರತಿನಿಧಿಗಳ ಮೌನವೋ ಏನೋ ಇಲ್ಲಿನ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಬೇಡಿಕೆ ಇನ್ನೂ ಈಡೇರಿಲ್ಲ. ಹೋಗಲಿ ಇಲ್ಲಿನ ರೋಗಿಗಳ ದಾಖಲಿಗೆ ಅಗತ್ಯವಾದ ಸಮರ್ಪಕ ಸಿಬ್ಬಂದಿ, ಔಷಧಿಸೇರಿದಂತೆ ಕನಿಷ್ಠ ಮೂಲಭೂತ ಸೌಲಭ್ಯವೂ ಸಹ ಇಲ್ಲದಾಗಿದ್ದು ಇಲ್ಲೊಂದು ಸರ್ಕಾರಿ ಆಸ್ಪತ್ರೆ ಇದೆಯೆಂಬುದೇ ಜನರು ಮರೆಯುವಂತ್ತಾಗಿದೆ. ಹಾಗಾಗಿಯೇ ಆಸ್ಪತ್ರೆ ಮೇಲ್ದರ್ಜೆಗೇರಿಸುವಂತೆ ಅನೇಕ ಧರಣಿ, ಪ್ರತಿಭಟನೆಗಳು ಸಹ ನಡೆದಿದೆ.

ಕಾಯಂ ವೈದ್ಯರಿಲ್ಲ: ಇಲ್ಲಿ ಎರಡು ರಾಷ್ಟೀಯ ಹೆದ್ದಾರಿ ಮೂರು ಜಿಲ್ಲೆಗಳ ಆಸ್ಪತ್ರೆಗಳಿದ್ದರೂ  ಸಹಅಲ್ಲಿನ ವೈದ್ಯರು ಕೇಂದ್ರ ಸ್ಥಾನದಲ್ಲಿರದ ಕಾರಣ ರೋಗಿಗಳ ದಂಡು ಹುಳಿಯಾರು ಆಸ್ಪತ್ರೆ ಕಡೆಸಹಜವಾಗಿ ಮುಖಮಾಡುತ್ತಾರೆ. ಇಲ್ಲಿ ಗುತ್ತಿಗೆ ಆಧಾರದ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ.

ಸಿಬ್ಬಂದಿ ಸಮಸ್ಯೆ: ಒಬ್ಬರು ಎಂಬಿಬಿಎಸ್‌ ವೈದ್ಯ ಸೇರಿದಂತೆ ಲ್ಯಾಬ್‌ ಟೆಕ್ನಿಷಿಯನ್‌, ಸ್ಟಾಪ್‌ ನರ್ಸ್‌ ಗಳುಹಾಗೂ ಡಿ ಗ್ರೂಫ್ ನೌಕರರು ಸೇರಿದಂತೆ ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿದೆ. ಹಾಗಾಗಿ ಕಫಾ, ಪರೀಕ್ಷೆ, ಮಲೇರಿಯ, ಟೈಫಾಯಿಡ್‌ ಸೇರಿದಂತೆ ತುರ್ತು

ಅಗತ್ಯ ಪರೀಕ್ಷಾ ಸೌಲಭ್ಯ ಇಲ್ಲದಾಗಿದೆ. ಸಿಬ್ಬಂದಿಯ ಕೊರತೆಯಿಂದ ಹೆರಿಗೆಗೆ ಬರುವವರೇ ಇಲ್ಲದಾಗಿ ದ್ದಾರೆ. ಇನ್ನೂ ಔಷಧಿಗಾಗಿ ವಾರ್ಷಿಕ ಬರುವ ಅನುದಾನ ತೀರಾ ಕಡಿಮೆಯಿದ್ದು ನಿತ್ಯ ಬರುವ ಸಾವಿರಾರು ಮಂದಿ ರೋಗಿಗಳಿಗೆ ಏನಕ್ಕೂ ಸಾಲದಾಗುತ್ತಿದೆ.ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿಹುಳಿಯಾರು ಆಸ್ಪತ್ರೆಯ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಹುಳಿಯಾರು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ಅನುದಾನ ಒದಗಿಸುವಂತೆಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು ಸಾರ್ವಜನಿಕರಲ್ಲಿ ಹೊಸ ಭರವಸೆ ಮೂಡಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.