ಕಾಂಗ್ರೆಸ್ ಒಳಜಗಳಕ್ಕೂ, ನನಗೂ ಸಂಬಂಧವಿಲ್ಲ: ಬಿಎಸ್ವೈ
Team Udayavani, Sep 17, 2018, 6:50 AM IST
ಅರಸೀಕೆರೆ/ತುಮಕೂರು: “ಕಾಂಗ್ರೆಸ್ನಲ್ಲಿನ ಒಳಜಗಳಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ. ನಾವು ಆಪರೇಷನ್ ಕಮಲಕ್ಕೆ ಕೈ ಹಾಕುವುದಿಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭಾನುವಾರ ಭೇಟಿ ನೀಡಿ ಡಾ.ಶಿವಕುಮಾರ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ತಮ್ಮಲ್ಲಿರುವ ಒಳಜಗಳವನ್ನು ಸರಿಪಡಿಸಿಕೊಳ್ಳಲಾಗದೆ ವಿನಾಕಾರಣ ಬಿಜೆಪಿಯತ್ತ ಬೊಟ್ಟು ಮಾಡಿ ತೋರಿಸುತ್ತಿದ್ದಾರೆ. ಬಿಜೆಪಿಗೆ ಕಾಂಗ್ರೆಸ್ನಿಂದ ಯಾರು ಬರುತ್ತಾರೆ, ಯಾರು ಹೋಗುತ್ತಾರೆ ಎನ್ನುವ ಬಗ್ಗೆ ಮಾಹಿತಿಯಿಲ್ಲ. ಜಾರಕಿಹೊಳೆ ಸಹೋದರರ ನೇತೃತ್ವದಲ್ಲಿ ಅವರ ತಂಡ ಬಿಜೆಪಿ ಸೇರುವ ವಿಚಾರದ ಬಗ್ಗೆಯೂ ನನಗೆ ಏನೂ ಗೊತ್ತಿಲ್ಲ. ಈ ಬಗ್ಗೆ ಇದುವರೆಗೂ ನಾನು ಒಂದೇ ಒಂದು ಶಬ್ದ ಸಹ ಮಾತನಾಡಿಲ್ಲ. ಅದೇನಿದ್ದರೂ ಕಾಂಗ್ರೆಸ್ ಒಳಜಗಳ ಎಂದು ಹೇಳಿದರು.
ಬಳಿಕ ಅರಸೀಕೆರೆಯಲ್ಲಿ ಮಾತನಾಡಿ, ಅಪರೇಷನ್ ಕಮಲಕ್ಕೆ ಕೈ ಹಾಕಲು ರಿಯಲ್ ಎಸ್ಟೇಟ್ ದಂಧೆಕೋರರು, ಮೀಟರ್ ಬಡ್ಡಿ ದಂಧೆಕೋರರು ಸೇರಿದಂತೆ ಕಿಂಗ್ಪಿನ್ಗಳ ಬಳಕೆ ಮಾಡಲಾಗುತ್ತಿದೆ ಎಂಬ ಮುಖ್ಯಮಂತ್ರಿ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದರು. ಕುಮಾರಸ್ವಾಮಿಯವರ ಹೇಳಿಕೆ ಬೇಜವಾªರಿತನದಿಂದ ಕೂಡಿದೆ. ಆ ರೀತಿಯ ಮಾಹಿತಿಗಳಿದ್ದರೆ ಅಂತಹವರನ್ನು ಬಂಧಿಸಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್