ಭೂಸ್ವಾಧೀನ ಕಾಯ್ದೆ ಜಾರಿಯಾದರೆ ಅನ್ಯಾಯ


Team Udayavani, Mar 3, 2019, 7:47 AM IST

bhoo-kayde.jpg

ತುಮಕೂರು: ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಅಂಗೀಕರಿಸಿರುವ ಭೂಸ್ವಾಧೀನ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿದರೆ ಅದು ರೈತರು, ಆದಿವಾಸಿಗಳು ಮತ್ತು ಕೃಷಿ ಕೂಲಿಕಾರರ ಪಾಲಿಗೆ ಮರಣ ಶಾಸನವಾಗಲಿದೆ. ಬ್ರಿಟಿಷರ ಶಾಸನದ ಮುಂದುವರಿದ ಭಾಗವಾಗುತ್ತದೆ ಎಂದು ಅಖೀಲ ಭಾರತ ಕಿಸಾನ್‌ ಸಂಘರ್ಷ ಸಮನ್ವಯ ಸಮಿತಿ ಮುಖಂಡ ಎ.ಗೋವಿಂದರಾಜು ಆಪಾದಿಸಿದರು.

ನಗರದ ಟೌನ್‌ಹಾಲ್‌ ವೃತ್ತದಲ್ಲಿ ಶನಿವಾರ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಅಖೀಲಿ ಭಾರತ ಕಿಸಾನ್‌ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ರಾಜ್ಯ ಸರ್ಕಾರ ಅಂಗೀಕರಿಸಿರುವ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್‌ ವ್ಯವಸ್ಥೆಯಲ್ಲಿ ನ್ಯಾಯಯುತ ಪರಿಹಾರ ಹಾಗೂ ಪಾರದರ್ಶಕತೆ ಹಕ್ಕು ವಿಧೇಯಕದ ಪ್ರತಿಯನ್ನು ದಹನ ಮಾಡಿ ಪ್ರತಿಭಟನೆ ನಡೆಸಿ ಮಾತನಾಡಿದರು.

ಕೈಗಾರಿಕೆಗಳು, ಬಂಡವಾಳ ಶಾಹಿಗಳು ಮತ್ತು ಕಾರ್ಪೊರೆಟ್‌ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸರ್ಕಾರ ಈ ಕಾಯ್ದೆಯನ್ನು ತರಾತುರಿಯಲ್ಲಿ ಅಂಗೀಕರಿಸಿದೆ. 2013ರ ಭೂಸ್ವಾಧೀನ ಕಾಯ್ದೆ ಪ್ರಕಾರ ಭೂಸ್ವಾಧೀನಪಡಿಸಿಕೊಳ್ಳಲು ರೈತರ 80ರಷ್ಟು ಒಪ್ಪಿಗೆ ಬೇಕಾಗಿತ್ತು. ಫ‌ಲವತ್ತಾದ ಮತ್ತು ನೀರಾವರಿ ಭೂಮಿ ಸ್ವಾಧೀನಪಡಿಸಿಕೊಳ್ಳಬಾರದು ಎಂದು ಆಗ್ರಹಿಸಿದರು.

ಚರ್ಚೆ ಇಲ್ಲದೇ ಅಂಗೀಕಾರ: ಎಐಕೆಎಸ್‌ಸಿಸಿ ಸಂಚಾಲಕ ಸಿ.ಯತಿರಾಜು ಮಾತನಾಡಿ, ಭೂಸ್ವಾಧೀನ ತಿದ್ದುಪಡಿಕಾಯ್ದೆಯನ್ನು ಯಾವುದೇ ಚರ್ಚೆ ಇಲ್ಲದೆ ಅಂಗೀಕರಿಸಲಾಗಿದೆ. ಈ ಕಾಯ್ದೆಯಿಂದ ರೈತರಿಗೆ ಸಿಗುತ್ತಿದ್ದ ಅಲ್ಪಸ್ವಲ್ಪ ಪರಿಹಾರವೂ ಸಿಗದಂತೆ ಮಾಡಲಾಗಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರ ಅನ್ಯಾಯ ಮಾಡಿದೆ. ಭೂಸ್ವಾಧೀನ ಮಾಡಿಕೊಳ್ಳುವ ಸಂಬಂಧ ಇದ್ದ ಎಲ್ಲಾ ಮಾನದಂಡಗಳನ್ನು ಸಂಪೂರ್ಣ ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿದರು.

ಭೂಮಿ ಕಬಳಿಸಲು ಸಂಚು: ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ಸಿ.ಅಜ್ಜಪ್ಪ ಮಾತನಾಡಿ, ಯಡಿಯೂರಪ್ಪ ಸಿ.ಡಿ. ಹಗರಣ ಬೆಳಕಿಗೆ ಬರುತ್ತಿದ್ದಂತೆಯೇ ಭೂಸ್ವಾಧೀನ ತಿದ್ದುಪಡಿ ವಿಧೇಯಕ ಅಂಗೀಕರಿಸಲಾಗಿದೆ. ಇದು ಸರಿಯಾದ ಕ್ರಮವಲ್ಲ. ಈ ಕಾಯ್ದೆಯನ್ನು ತಂದು ರೈತರ ಭೂಮಿ ಕಬಳಿಸಲು ಸಂಚು ನಡೆಯುತ್ತಿದೆ. ಇದು ನಿಲ್ಲಬೇಕು. ಇದರ ಜೊತೆಗೆ ಬಗರ್‌ ಹುಕುಂ ಸಾಗುವಳಿದಾರರಿಗೆ ಸೂಕ್ತ ಪರಿಹಾರ ಒದಗಿಸಬೇಕು.

ಇದು ರೈತರ ಜಮೀನುಗಳನ್ನು ಯಾವುದೇ ಒಪ್ಪಿಗೆಯಿಲ್ಲದೆ ಭೂಸ್ವಾಧೀನದಿಂದ ಸಮಾಜ ಹಾಗೂ ಪರಿಸರದ ಮೇಲಾಗುವ ದುಷ್ಪರಿಣಾಮಗನ್ನಾಗಲೀ ಮತ್ತು ದೇಶದ ರಾಜ್ಯದ ಆಹಾರ ಭದ್ರತೆ ಹಾಗೂ ಆಹಾರದ ಸ್ವಾವಲಂಬನೆಯ ಮೇಲಾಗುವ ದುಷ್ಪರಿಣಾಮಗಳನ್ನಾಗಲೀ ಪರಿಗಣಿಸದೇ ಪುನರ್ವಸತಿ ಕ್ರಮಗಳನ್ನು ದುರ್ಬಲಗೊಳಿಸುವ ಹಾಗೂ ಬೇಕಾಬಿಟ್ಟಿ ದರಕ್ಕೆ ಸ್ವಾಧೀನ ಮಾಡುವ ದುರುದ್ದೇಶ ಹೊಂದಿದೆ ಎಂದು ದೂರಿದರು.

ದ್ರೋಹ: ಎಐಕೆಎಸ್‌ಸಿಸಿ ಕಾರ್ಯದರ್ಶಿ ಬಿ.ಉಮೇಶ್‌ ಮಾತನಾಡಿ, ರೈತರ ಸಮಸ್ಯೆ ಮತ್ತು ಸಂಕಷ್ಟುಗಳು ಗೊತ್ತು ಎಂದು ಹೇಳುವ ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿವೇಶನದ ಕೊನೆಯ ದಿನ ರೈತರು, ಆದಿವಾಸಿಗಳು ಮತ್ತು ಕೃಷಿ ಕೂಲಿಕಾರರಿಗೆ ದ್ರೋಹ ಬಗೆಯುವ ಕೆಲಸ ಮಾಡಿದ್ದಾರೆ. ಐದು ರಾಜ್ಯಗಳಲ್ಲಿ ಚುನಾವಣೆ ಎದುರಿಸಿದ ಬಿಜೆಪಿ ಗತಿ ಏನಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. 2019ರ ಲೋಕಸಭಾ ಚುನಾವಣೆ ಹತ್ತಿರವಿದೆ. ಇದನ್ನು ಮನಗಾಣಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಯಾಗಿಲ್ಲ. ಜನರಿಗೆ ನಿವೇಶನ ಸಿಗುತ್ತಿಲ್ಲ. ರೈತರನ್ನು ಕತ್ತಲಲ್ಲಿಟ್ಟು ಅವರ ಹಕ್ಕುಗಳನ್ನು ಪರಿಹಾರಗಳನ್ನು ಕಸಿಯಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ರೈತ ಮುಖಂಡ ರವೀಶ್‌, ಪಂಡಿತ್‌ ಜವಾಹರ್‌, ಸಿಪಿಎಂ ಕಾರ್ಯದರ್ಶಿ ಎನ್‌.ಕೆ.ಸುಬ್ರಮಣ್ಯ, ಪ್ರಾಂತ ರೈತ ಸಂಘದ ಮುಖಂಡ ನೌಷಾದ್‌ ಸೆಹಗನ್‌, ಸಿದ್ದಪ್ಪ ಮೊದಲಾದವರು ಹಾಜರಿದ್ದರು.

ಟಾಪ್ ನ್ಯೂಸ್

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.