ನಾಮಫ‌ಲಕದಲ್ಲಿ ಚಿಕ್ಕನಾಯಕನಹಳ್ಳಿ ಹೆಸರು ಕಡೆಗಣನೆ

ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಬಸ್‌ ಡಿಪೋ, ರಾ.ಹೆ.ಪ್ರಾಧಿಕಾರ, ಜಿಲ್ಲಾಡಳಿತ ವಿರುದ್ಧ ಆಕ್ರೋಶ

Team Udayavani, Nov 10, 2021, 5:16 PM IST

ನಾಮಫ‌ಲಕದಲ್ಲಿ ಚಿಕ್ಕನಾಯಕನಹಳ್ಳಿ ಹೆಸರು ಕಡೆಗಣನೆ

ಚಿಕ್ಕನಾಯಕನಹಳ್ಳಿ: ಚಿಕ್ಕನಾಯಕನಹಳ್ಳಿ ತಾಲೂಕನ್ನು ನಿರಂತರವಾಗಿ ಸರ್ಕಾರ, ಸರ್ಕಾರಿ ಇಲಾಖೆ ಉದಾಸೀನ ಮಾಡಿಕೊಂಡು ಬರುತ್ತಿವೆ. ಪ್ರಸಿದ್ಧ ಕವಿ, ನಾಯಕರ ತವರು ಕ್ಷೇತ್ರವಾಗಿದ್ದರೂ, ಚಿಕ್ಕನಾಯಕನಹಳ್ಳಿ ಹೆಸರನ್ನು ಬಳಸುವಲ್ಲಿ ಸರ್ಕಾರಿ ಬಸ್‌ ಡಿಪೋ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲಾಖೆ ಹಾಗೂ ಜಿಲ್ಲಾಡಳಿತ ಆಸಕ್ತಿ ತೋರುತ್ತಿಲ್ಲ ಎಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕನಾಯಕನಹಳ್ಳಿ ಒಂದು ಅರೆ ಮಲೆನಾಡು ಹೋಲುವ ಪ್ರಕೃತಿ ಸೌಂದರ್ಯ ಹೊಂದಿದೆ. ಇಲ್ಲಿನ ತೆಂಗು ಸುಪ್ರಸಿದ್ಧವಾದದ್ದು, ಪಂಪ ಪ್ರಶಸ್ತಿ ವಿಜೇತ ತೀ.ನಂ ಶ್ರೀಕಂಠಯ್ಯನವರು ಆಡಿ, ಬೆಳೆದು ವಿದ್ಯಾಭ್ಯಾಸ ಮಾಡಿದ ತಾಲೂಕು, ಇಲ್ಲಿನ ಕಬ್ಬಿಣದ ಅದಿರಿಗೆ ವಿಶ್ವವ್ಯಾಪ್ತಿ ಬೇಡಿಕೆ ಇದೆ.

ಇದನ್ನೂ ಓದಿ:- ಬಿಟ್ ಕಾಯಿನ್ ಹಗರಣ ಮುಚ್ಚಿಹಾಕಲು ರಾಷ್ಟ್ರೀಯ ಪಕ್ಷಗಳ ಬಿರುಸಿನ ಯತ್ನ: ಹೆಚ್.ಡಿಕೆ

ಇಂತಹ ನೂರಾರು ವಿಶೇಷ ಹಾಗೂ ವಿಶಿಷ್ಟತೆ ಹೊಂದಿರುವ ಚಿಕ್ಕನಾಯಕನಹಳ್ಳಿ ಹೆಸರನ್ನು ನಮೂದಿಸುವಲ್ಲಿ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆ ಉದಾಸೀನ ಮಾಡುತ್ತಿರುವುದು ಅತ್ಯಂತ ಖಂಡನೀ ಯವಾಗಿದ್ದು, ಅನೇಕ ಬಾರಿ ವಿವಿಧ ಸಂಘಟನೆ ಹಾಗೂ ಪತ್ರಿಕೆಗಳು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ.

ಬಸ್‌ ಬೋರ್ಡ್‌ಗಳಲ್ಲಿ ಹೆಸರಿಲ್ಲ: ಚಿಕ್ಕನಾಯಕನ ಹಳ್ಳಿ ಪಟ್ಟಣದಿಂದ ಆಯ್ದು ಹೋಗುವ ಬಹುತೇಕ ಬಸ್‌ಗಳ ನಾಮಫ‌ಲಕದಲ್ಲಿ ಚಿಕ್ಕನಾಯಕನಹಳ್ಳಿ ಹೆಸರು ಇರುವುದಿಲ್ಲ. ಕೆ.ಬಿ ಕ್ರಾಸ್‌ ಬಳಿ ನಿರ್ಮಾಣವಾಗುತ್ತಿರು ರಸ್ತೆ ಕಾಮಗಾರಿಯ ಲ್ಲಿನ ನೂತನ ನಾಮಫ‌ಲಕದಲ್ಲಿ ಚಿಕ್ಕನಾಯಕನಹಳ್ಳಿ ಹೆಸರು ಬದಲು ಹುಳಿಯಾರು ಎಂದು ನಮೂದಿಸ ಲಾಗಿದೆ. ಚಿಕ್ಕನಾಯಕನಹಳ್ಳಿ ದಾಟಿ ಹೋಗದೆ ಹುಳಿಯಾರಿಗೆ ಹೋಗಲು ಹೇಗೆ ಸಾಧ್ಯ ಎಂಬ ಆಕ್ರೋಶವನ್ನು ಸಾರ್ವಜನಿಕರು ವ್ಯಕ್ತಪಡಿಸುತ್ತಿದ್ದಾರೆ.

ಹೆಸರಿಗಷ್ಟೇ ತಾಲೂಕು: ಚಿಕ್ಕನಾಯಕನಹಳ್ಳಿಯನ್ನು ಸರ್ಕಾರ ಮೊದಲಿನಿಂದಲೂ ಉದಾಸೀನ ಮಾಡಿಕೊಂಡು ಬರುತ್ತಿವೆ. ಇತ್ತಿಚೀನ ದಿನಗಳಲ್ಲಿ ತಾಲೂಕಿಗೆ ಹೇಮಾವತಿ ನೀರು ಬಂದಿರುವುದು ಬಿಟ್ಟರೆ, ಸರ್ಕಾರ ಅಂತಹ ಹೇಳಿಕೊಳ್ಳುವ ಯಾವುದೇ ಅಭಿವೃದ್ಧಿಯೋಜನೆಗಳನ್ನು ನೀಡಿಲ್ಲ. ವಿದ್ಯಾರ್ಥಿಗಳು ಓದಲು ಯಾವುದೇ ತಾಂತ್ರಿಕ ಕಾಲೇಜುಗಳಿಲ್ಲ, ತಾಲೂಕಿನಲ್ಲಿ ಒಂದು ಉದ್ಯೋಗ ನೀಡುವ ಕಾರ್ಖಾನೆಗಳಿಲ್ಲ. ಇಂತಹ ಪರಿಸ್ಥಿತಿ ತಾಲೂಕಿಗೆ ಇರುವುದರಿಂದ ತಾಲೂಕನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಅನುಮಾನವು ಕಾಡುತ್ತಿದೆ.

ದೊಡ್ಡ ಹೆಸರು: ಚಿಕ್ಕನಾಯಕನಹಳ್ಳಿ ಹೆಸರು ದೊಡ್ಡದಾಗಿದ್ದು ಬಳಸಲು, ಬರೆಯಲು ತೊಂದರೆಯಾಗಬಹುದು ಎಂಬ ಕಾರಣದಿಂದಲೂ ಬಹುತೇಕ ಕಡೆ ಚಿಕ್ಕನಾಯಕನಹಳ್ಳಿಯನ್ನು ನಿರ್ಲಕ್ಷ್ಯ ಮಾಡುತ್ತಿರಬಹುದು. ಏನೇ ಇರಲಿ, ಎಲ್ಲ ತಾಲೂಕಿನ ಹೆಸರನ್ನು ನೇರವಾಗಿ ಬಳಸುವ ಇಲಾಖೆ ಚಿಕ್ಕನಾಯಕನಹಳ್ಳಿ ಹೆಸರನ್ನು ಬಳಸದೇ ಇರುವುದು ನಿಜಕ್ಕೂ ವಿಷಾದನೀಯ.

“ಚಿಕ್ಕನಾಯಕನಹಳ್ಳಿ ಅನೇಕ ವಿಷಯಗ ಳಿಂದ ಪ್ರಸಿದ್ಧಿ ಪಡೆದುಕೊಂಡಿದೆ. ಆದರೆ, ಹೆಸರನ್ನು ಬಸ್‌ ನಾಮಫ‌ಲಕದಲ್ಲಿ ಬಳಸದಿರುವುದು ನಿಜಕ್ಕೂ ಬೆಸರದ ಸಂಗತಿ. ರಾಷ್ಟ್ರೀಯ ಹೆದ್ದಾರಿ ನಾಮಫ‌ಲಕದಲ್ಲಿ ಚಿಕ್ಕನಾಯಕನಹಳ್ಳಿ ಹೆಸರು ಇಲ್ಲ. ಸಂಬಂಧಪಟ್ಟ ಅಧಿಕಾರಿಗಳು ಕ್ರಮಕೈಗೊಳ್ಳಬೇಕು.” – ಹರ್ಷ, ರೈತ ಮೋರ್ಚಾ ಕಾರ್ಯದರ್ಶಿ

 – ಚೇತನ್‌

ಟಾಪ್ ನ್ಯೂಸ್

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.