ಅಕ್ರಮ ಮದ್ಯ ಮಾರಾಟಕ್ಕಿಲ್ಲ ಕಡಿವಾಣ


Team Udayavani, Mar 8, 2022, 4:24 PM IST

ಅಕ್ರಮ ಮದ್ಯ ಮಾರಾಟಕ್ಕಿಲ್ಲ ಕಡಿವಾಣ

ತಿಪಟೂರು: ತಾಲೂಕಿನಾದ್ಯಂತ ಮೂಲೆ ಮೂಲೆಗಳ ಹಳ್ಳಿಗಳೆಲ್ಲೆಲ್ಲಾ ಅಕ್ರಮ ಮದ್ಯಮಾರಾಟ ರಾಜಾರೋಷವಾಗಿ ನಡೆಯುತ್ತಿದ್ದರೂ ಕಂಡೂ ಕಾಣದಂತಿರುವ ಅಬಕಾರಿಹಾಗೂ ಪೊಲೀಸ್‌ ಅಧಿಕಾರಿಗಳವಿರುದ್ಧ ತಾಲೂಕಿನ ಬಹುತೇಕಮಹಿಳಾ ಸಂಘಟನೆಗಳು,ಮಹಿಳಾ ಸ್ವಸಹಾಯ ಸಂಘಗಳ ಮುಖಂಡರು ಈಇಲಾಖೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೋವಿಡ್‌-19ನಿಂದ ಬದುಕು ನಡೆಸುವುದೇ ದುಸ್ತರವಾಗಿರುವಇಂತಹ ಸಮಯದಲ್ಲಿ ಒಂದೊಂದು ಗ್ರಾಮದಲ್ಲಿ 2, 3 ಅಂಗಡಿ, ಮನೆಗಳಲ್ಲಿ ಅಕ್ರಮವಾಗಿಮದ್ಯ ಮಾರುತ್ತಿರುವುದರಿಂದ ಬಡ, ಕೂಲಿಹಾಗೂ ಮಧ್ಯಮ ಕುಟುಂಬಗಳು ಬೀದಿ ಪಾಲಾಗುತ್ತಿರುವ ಬಗ್ಗೆ ಅಬಕಾರಿ, ಪೊಲೀಸ್‌ಇಲಾಖೆಗಳಿಗೆ ತಿಳಿಸಿದರೂ ನಿಯಂತ್ರಣ ಆಗದಿರುವುದು ಸಂಶಯಕ್ಕೆ ಕಾರಣವಾಗಿದೆ.

ಆರ್ಥಿಕ ಸಂಕಷ್ಟದಲ್ಲಿ ಕುಟುಂಬಗಳು: ಕೋವಿಡ್‌-19ನಿಂದಾಗಿ ಕೂಲಿ ಕೆಲಸಗಳೇವಿರಳವಾಗಿದೆ. ಆದರೂ ವಾರದಲ್ಲಿ ಸಿಗುವಒಂದೆರಡು ಕೂಲಿ ಕೆಲಸಮಾಡಿಕೊಂಡು ಜೀವನನಡೆಸುತ್ತಾರೆ. ಕೂಲಿ ಹಣವನ್ನೇಕುಡಿತಕ್ಕೆ ಖರ್ಚು ಮಾಡುತ್ತಿದ್ದು,ಕುಟುಂಬ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸ ಕಷ್ಟಕರವಾಗುತ್ತಿದೆ ಎಂದುಮಹಿಳೆಯರು ಅಳಲಾಗಿದೆ.

ಕೆಲ ಬಾರ್‌ಗಳವರು ಹುಡುಗರನ್ನುಇಟ್ಟುಕೊಂಡು ಹಳ್ಳಿಗಳಲ್ಲಿ ಮಾರುವವರಿಗೆ ರಾತ್ರಿ ವೇಳೆ ಅಕ್ರಮವಾಗಿ ಮದ್ಯ ಸರಬರಾಜು ಮಾಡುತ್ತಿದ್ದಾರೆ. ಹಳ್ಳಿಗಳಲ್ಲಿ ಮಾರುವವರು ಪ್ರತಿ ಪ್ಯಾಕೆಟ್‌ಗೆ 20-25 ರೂ. ಹೆಚ್ಚಿನ ಲಾಭಇಟ್ಟುಕೊಂಡು ಮಾರಾಟ ಮಾಡುತ್ತಿರುವಬಗ್ಗೆ ಸ್ಥಳೀಯ ಪೊಲೀಸ್‌ ಠಾಣೆಗಳಿಗೆ ಹಾಗೂ ಅಬಕಾರಿ ಅಧಿಕಾರಿಗಳಿಗೆ ಮಾಹಿತಿ ಇದ್ದರೂನಿಯಂತ್ರಣ ಮರೀಚಿಕೆಯಾಗಿದೆ.

ಹಳ್ಳಿಗಳನ್ನು ಉಳಿಸಿಕೊಡಿ: ತಾಲೂಕಿನ ಬಹುತೇಕ ಹಳ್ಳಿಗಳಲ್ಲಿನ ಅಕ್ರಮ ಮದ್ಯ ಮಾರಾಟವನ್ನು ಕೂಡಲೇ ಜಿಲ್ಲಾಧಿಕಾರಿಗಳು,ಜಿಲ್ಲಾ, ತಾಲೂಕು ಅಬಕಾರಿ ಅಧಿಕಾರಿಗಳಮೇಲೆ ಹಾಗೂ ಅಕ್ರಮ ಮದ್ಯದಂಗಡಿಗಳವಿರುದ್ಧ ಕಠಿಣ ಕಾನೂನು ಕ್ರಮ ತೆಗೆದು ಕೊಂಡು ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟದಂಧೆಯನ್ನು ನಿಲ್ಲಿಸಬೇಕೆಂದು ಮಹಿಳಾ ಸಂಘಟನೆಯವರು ಒತ್ತಾಯಿಸಿದ್ದಾರೆ.

35 ರೂ. ರಾಜಾ ಪ್ಯಾಕೆಟ್‌ 55-60ಕ್ಕೆ ಮಾರಾಟ :

ಎಂಎಸ್‌ಐಎಲ್‌ ಮಳಿಗೆಯಲ್ಲಿ ಮಾರಾಟವಾಗುವ ಒಂದು ರಾಜಾಪ್ಯಾಕೆಟ್‌ ಎಣ್ಣೆಗೆ 35 ರೂ. ಇದ್ದರೆ, ಹಳ್ಳಿಗಳಲ್ಲಿ ಅಕ್ರಮವಾಗಿ ಮಾರಾಟವಾಗುವ ಇದೇ ಪ್ಯಾಕೆಟ್‌ 55ರಿಂದ 60ರೂ. ತನಕ ಮಾರಾಟ ಮಾಡಲಾಗುತ್ತಿದೆ. ಮನೆ ಮುಂದೆ, ಗ್ರಾಮಗಳಲ್ಲಿಯೇ ಸಿಗುತ್ತಲ್ಲ ಎಂಬ ಮನೋಭಾವನೆಯಿಂದ ಮದ್ಯವ್ಯಸನಿಗಳು ದುಪ್ಪಟ್ಟು ಹಣ ನೀಡಿ ಖರೀದಿಸುತ್ತಾರೆ.

ನಗರ ಅಥವಾ ಹಳ್ಳಿಗಳಲ್ಲಿಪರವಾನಿಗೆ ಇಲ್ಲದೆ ಮದ್ಯಮಾರಾಟ ಮಾಡುವುದುಅಪರಾಧವಾಗಿದ್ದು, ತಾಲೂಕಿನಹಳ್ಳಿಗಳಲ್ಲಿ ಅಕ್ರಮ ಮದ್ಯಮಾರಾಟ ನಡೆಯುತ್ತಿರುವವಿಷಯ ನಮ್ಮ ಇಲಾಖೆಯಗಮನಕ್ಕೂ ಬಂದಿದೆ. ನಮ್ಮ ಕೆಲಅಧಿಕಾರಿಗಳೇ ಇವರಿಗೆ ಕುಮ್ಮಕ್ಕುನೀಡಿ ದಾಳಿ ಮಾಡುವಂತೆ ನಟಿಸಿಮತ್ತೆ ಬಿಟ್ಟು ಕಳಿಸಿ ಮಾರಲು ದಾರಿಸುಗಮಗೊಳಿಸು ತ್ತಿದ್ದಾರೆ. ನಮ್ಮಹಾಗೂ ಪೊಲೀಸ್‌ ಅಧಿಕಾರಿಗಳುಲಂಚದಾಸೆಗೆ ಬಿದ್ದು ಅಕ್ರಮಮಾರಾಟಗಾರರಿಗೇ ರಕ್ಷಣೆಒದಗಿಸಿ ಹಳ್ಳಿಗಳನ್ನು ಕುಡುಕರ ತಾಣಗಳಾಗಿಸುತ್ತಿರುವುದು ನೋವಿನ ಸಂಗತಿ.-ಹೆಸರೇಳಲಿಚ್ಚಿಸದ ಅಬಕಾರಿ ಅಧಿಕಾರಿ, ತಿಪಟೂರು

– ಬಿ.ರಂಗಸ್ವಾಮಿ, ತಿಪಟೂರು

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

4-Pavagada

Pavagada: ಸಿಡಿಲಿನ ಪರಿಣಾಮ ಹೊತ್ತಿ ಉರಿದ ದನದ ಕೊಟ್ಟಿಗೆ; ಸ್ಥಳದಲ್ಲಿಯೇ ಹಸು ಸಜೀವ ದಹನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.