2018ರ ಚುನಾವಣೆಯಲ್ಲಿ ಜೆಡಿಎಸ್ಗೆ 18 ಸೀಟು
Team Udayavani, Sep 18, 2017, 6:50 AM IST
ಕುಣಿಗಲ್: “ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಜ್ಯಾತ್ಯತೀತ ವಿರೋಧಿಯಾಗಿದ್ದಾರೆ.
ಹೀಗಾಗಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಕೇವಲ 18-20 ಸೀಟುಗಳನ್ನು ಮಾತ್ರ
ಪಡೆಯಲಿದೆ’ ಎಂದು ಶಾಸಕ ಜಮೀರ್ ಅಹಮದ್ ಭವಿಷ್ಯ ನುಡಿದಿದ್ದಾರೆ.
ತಾಲೂಕಿನ ಹುಲಿಯೂರು ದುರ್ಗದಲ್ಲಿ ಮಾತನಾಡಿದ ಅವರು, “ರಾಜ್ಯಸಭೆ ಚುಣಾವಣೆ ವೇಳೆ ಅಡ್ಡ ಮತದಾನ ಮಾಡಲು ಕುಮಾರಸ್ವಾಮಿಯವರೇ ನನಗೆ ತಿಳಿಸಿದ್ದರು. ಆದರೂ, ನಾನು ಅಡ್ಡ ಮತನಾದ ಮಾಡಲಿಲ್ಲ.
ರಾಜಕೀಯವಾಗಿ ಮುಗಿಸುವ ಸಲುವಾಗಿ ಸಂಚು ರೂಪಿಸಿ ನನ್ನನ್ನು ಪಕ್ಷದಿಂದ ಹೊರ ಹಾಕುವ ಏಕೈಕ ಉದ್ದೇಶದಿಂದ ಆರೋಪ ಮಾಡಲಾಗುತ್ತಿದೆ. ನನ್ನ ಮಾತನ್ನು ಒಪ್ಪದಿದ್ದರೆ ನಾನು ಕುರಾನ್ ಮೇಲೆ ಪ್ರಮಾಣ ಮಾಡುತ್ತೇನೆ.
ಕುಮಾರಸ್ವಾಮಿ ಅವರು ಮನೆ ದೇವರ ಮೇಲೆ ಪ್ರಮಾಣ ಮಾಡಲು ಸಿದಟಛಿರಿದ್ದಾರೆಯೇ?’ ಎಂದು ಸವಾಲು ಹಾಕಿದರು. ಜನತೆಯ ಆಶೀರ್ವಾದ ಇರುವ ತನಕ ಯಾರೂ ನಮ್ಮನ್ನು ಮುಗಿಸಲು ಸಾಧ್ಯವಿಲ್ಲ ಎಂದು ಗುಡುಗಿದ ಅವರು, ಮುಂದಿನ ಚುನಾವಣೆಯಲ್ಲಿ ಮುಸಲ್ಮಾನರ ಶಕ್ತಿ ಏನು ಎಂಬುದನ್ನು ಕುಮಾರಸ್ವಾಮಿಗೆ ತೋರಿಸಬೇಕು ಎಂದು ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್