![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಗೆ ಅಪಾರ ನಷ್ಟ
ಧರೆಗುರುಳಿದ ಮರಗಳಿಂದ ಸಂಚಾರ ಅಸ್ತವ್ಯಸ್ತ • ರಸ್ತೆಯಲ್ಲಿ ಕೊಳಚೆ ನೀರು ••ಪಾದಚಾರಿಗಳ ಪರದಾಟ • ನೆಲಕ್ಕುರುಳಿದ ತೆಂಗು ಅಡಕೆ, ಬಾಳೆ
Team Udayavani, May 2, 2019, 12:16 PM IST
![tumkur-2..](https://www.udayavani.com/wp-content/uploads/2019/05/tumkur-2..-620x383.jpg)
ತುಮಕೂರು ನಗರದಲ್ಲಿ ಚರಂಡಿ ನೀರು ರಸ್ತೆಯಲ್ಲಿ ಹರಿದ ಪರಿಣಾಮ ಪಾದಚಾರಿಗಳು, ವಾಹನ ಸವಾರರು ತೊಂದರೆ ಅನುಭವಿಸಿದರು.
ತುಮಕೂರು: ಬಿಸಿಲಿನ ಬೇಗೆಯಿಂದ ಬಸವಳಿದು ಹೋಗಿದ್ದ ಕಲ್ಪತರು ನಾಡಿನ ಜನರಿಗೆ ಸಂತಸ ಉಂಟಾಗುವಂತೆ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆ ಧಾರಕಾರವಾಗಿ ಮಂಗಳವಾರ ಸಂಜೆಯಿಂದ ರಾತ್ರಿಯಿಡೀ ಸುರಿದಿದೆ. ವರುಣನ ಆರ್ಭಟದ ಜೊತೆಗೆ ಗುಡುಗು, ಸಿಡಿಲು ಬಿರುಗಾಳಿಯಿಂದ ಕೂಡಿದ್ದ ಬಾರಿ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿ ರೈತರ ತೆಂಗು, ಬಾಳೆ, ಅಡಿಕೆ ಮರಗಳು ಧರೆಗುರುಳಿ ಲಕ್ಷಾಂತರ ನಷ್ಟ ಉಂಟಾಗಿದೆ.
ಮಂಗಳವಾರ ಸಂಜೆಯಿಂದಲೇ ಮೋಡ ಮುಸುಕಿದ ವಾತಾವರಣ ಉಂಟಾಗಿ ನಂತರ 4 ಗಂಟೆಯ ವೇಳೆಗೆ ಮಿಂಚು ಗುಡಿಗಿನಿಂದ ತುಂತುರು ಮಳೆಯೊಂದಿಗೆ ಆರಂಭವಾಯಿತು. ನಂತರ ಮಳೆಯ ಆರ್ಭಟ ತೀವ್ರಗೊಂಡು ಬಿರುಗಾಳಿ, ಗುಡುಗು, ಸಿಡಿಲು ಹಾಗೂ ಬಾರಿ ಗಾಳಿಗೆ ಜಿಲ್ಲೆಯ ಹಲವು ಕಡೆ ಮರಗಳು, ವಿದ್ಯುತ್ ಕಂಬಗಳು ಧರೆ ಗುರುಳಿದವು. ಸುಮಾರು 8 ಗಂಟೆಗೂ ಹೆಚ್ಚುಕಾಲ ಸುರಿದ ಈ ಧಾರಾಕಾರ ಮಳೆಯಿಂದ ನಗರದ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗ ಲಾರದೇ, ರಸ್ತೆಯ ತುಂಬ ಮಳೆಯ ನೀರು ಹರಿದ ಪರಿಣಾಮ ಪಾದಚಾರಿಗಳು ವಾಹನ ಸವಾರರು ಕೆಲಹೊತ್ತು ರಸ್ತೆಗಳಲ್ಲಿ ಸಂಚರಿಸುವುದೇ ಕಷ್ಟಕರವಾಗಿ ಹೋಗಿತ್ತು.
ರಸ್ತೆಯಲ್ಲೇ ಹರಿದ ನೀರು: ನಗರದ ವಾಣಿಜ್ಯ ಪ್ರದೇಶವಾಗಿರುವ ಎಂ.ಜಿ. ರಸ್ತೆಯಲ್ಲಿ ಒಳಚರಂಡಿ ಯಿಂದ ಕೊಳಚೆ ನೀರು ರಸ್ತೆಯಲ್ಲಿ ಹರಿಯಿತು. ಇದರ ಜೊತೆಗೆ ಇಲ್ಲಿಯ ಚರಂಡಿ
ಗಳನ್ನು ಸ್ವಚ್ಛಪಡಿಸದ ಹಿನ್ನೆಲೆಯಲ್ಲಿ ನೀರು ಚರಂಡಿಗಳಲ್ಲಿ ಸರಾಗವಾಗಿ ಹೋಗಲು ಅವಕಾಶ ವಿಲ್ಲ. ಇದರಿಂದ ರಸ್ತೆಯ ಮಧ್ಯದಲ್ಲಿ ಹಳ್ಳದಲ್ಲಿ ನೀರು ಹೋಗುವಂತೆ ಮೊಣ ಕಾಲುದ್ದ ನೀರು ಹರಿದುಹೋಗುತ್ತಿತ್ತು.
ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು: ನಗರದಲ್ಲಿ ಮಂಗಳ ವಾರ ಬಿದ್ದ ಬಾರಿ ಮಳೆಯಿಂದ ಬಹುತೇಕ ತಗ್ಗು ಪ್ರದೇಶಗಳು ಜಲಾವೃತವಾಗಿದ್ದವು. ನಗರದ ಕೆಲವು ಬಡಾವಣೆಗಳಾದ ಸಿದ್ಧಗಂಗಾ ಬಡಾವಣೆ, ಸೋಮೇಶ್ವರ ಪುರಂ, ಸದಾಶಿವನಗರ ಸೇರಿದಂತೆ ಡ್ರೈನೇಜ್ ವ್ಯವಸ್ಥೆ ಸರಿಯಾಗಿ ಇಲ್ಲದೇ ಇರುವುದ ರಿಂದ ಕೆಲವು ಮನೆಗಳಿಗೂ ಮಳೆ ನೀರು ನುಗ್ಗಿ ಸಂಕಷ್ಟ ಅನುಭವಿಸಿದ್ದಾರೆ.
ವಿದ್ಯುತ್ ಸಂಪರ್ಕ ಕಡಿತ: ಜಿಲ್ಲೆಯಾಂದ್ಯತ ಸುರಿದ ಬಾರೀ ಬಿರುಗಾಳಿ ಮಳೆಯ ಹಿನ್ನೆಲೆಯಲ್ಲಿ ವಿವಿಧ ಕಡೆಗಳಲ್ಲಿ ಮರಗಳು, ಕಂಬಗಳು ನೆಲಕ್ಕೆ ಉರುಳಿದ ಪರಿಣಾಮ ನಗರವೂ ಸೇರಿದಂತೆ ಹಲವು ಕಡೆಗಳಲ್ಲಿ ವಿದ್ಯುತ್ ಕಡಿತ ಉಂಟಾಗಿತ್ತು.
ಧರೆಗುರುಳಿದ ಮರ, ಕಂಬಗಳು: ಜಿಲ್ಲೆಯಲ್ಲಿ ಸುರಿದ ಬಿರುಗಾಳಿ ಮಳೆಗೆ ಬರಗಾಲದಲ್ಲಿಯೂ ಕಷ್ಟ ಪಟ್ಟು ಬೆಳೆದ ಬಾಳೆ, ಅಡಕೆ, ತೆಂಗಿನ ಮರಗಳು ನೆಲಕ್ಕೆ ಉರುಳಿವೆ. ಜಿಲ್ಲೆಯ ತಿಪಟೂರು ತಾಲೂಕಿನ ಗೊರ ಗುಂಡನಹಳ್ಳಿಯ ರೈತ ಶಿವಕುಮಾರ್ ಎಂಬುವವರು ಬೆಳೆದಿದ್ದ, ಬಾಳೆ ತೋಟ ಬಿರುಗಾಳಿಗೆ ನೆಲ ಸಮವಾಗಿದೆ.
ಸುಮಾರು 2 ಎಕರೆ ವಿಸ್ತೀರ್ಣದ ಬಾಳೆ ತೋಟದಲ್ಲಿ ಕೊಯ್ಲಿನ ಹಂತಕ್ಕೆ ಬಾಳೆ ಬಂದಿದ್ದ ವೇಳೆಗೆ ನೆಲಸಮ ವಾಗಿದ್ದು, ರೈತನಿಗೆ ಭಾರೀ ನಷ್ಟ ಉಂಟಾಗಿದೆ. ಅದೇ ರೀತಿಯಲ್ಲಿ ಹೊಳವನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದುಗ್ಗೇನಹಳ್ಳಿಗೆ ಗಾಳಿ ಮಳೆಗೆ ತೋಟದ ಮನೆಯ ಶೀಟುಗಳು ಹಾರಿ ಹೋಗಿ ಅಲ್ಲಿಯೂ ಬಾಳೆ ತೋಟ ನಾಶವಾಗಿದೆ.
ತುಮಕೂರು ತಾಲೂಕು ಸೇರಿದಂತೆ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಇದೇ ರೀತಿ ಬಿರುಗಾಳಿ ಸಹಿತ ಧಾರಕಾರ ಮಳೆಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಭೀಕರ ಬರಗಾಲದಲ್ಲಿಯೂ ಲಕ್ಷಾಂತರ ರೂ. ಖರ್ಚು ಮಾಡಿ ಕೊಳವೆಬಾವಿ ಕೊರಸಿ ಈ ಬೋರ್ವೆಲ್ಗಳ ಆಶ್ರಯದಲ್ಲಿ ತಮ್ಮ ತೋಟಗಳನ್ನು ಉಳಿಸಿಕೊಂಡದ್ದ, ರೈತರಿಗೆ ಈ ಬಿರುಗಾಳಿ ಮಳೆ ನಷ್ಟ ಉಂಟುಮಾಡಿದೆ. ಜಿಲ್ಲೆಯಲ್ಲಿ ಈ ಮಳೆಯಿಂದ ರೈತರಿಗೆ ಉಂಟಾಗಿರುವ ನಷ್ಟವನ್ನು ಅಂದಾಜಿಸಿ ರೈತರಿಗೆ ಸೂಕ್ತ ಪರಿಹಾರ ನೀಡುವತ್ತಾ, ಜಿಲ್ಲಾಡಳಿತ ಮುಂದಾಗ ಬೇಕಾಗಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.