ತಿಪಟೂರಲ್ಲಿ ಅಸಮರ್ಪಕ ಸಾರಿಗೆ ವ್ಯವಸ್ಥೆ

ಜನರ ಪಡಿಪಾಟಲು • ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳು ಸಮಯಕ್ಕೆ ತಲುಪಲಾಗದ ಸ್ಥಿತಿ

Team Udayavani, Jun 24, 2019, 12:27 PM IST

tk-tdy-1..

ತಿಪಟೂರು ತಾಲೂಕಿನ ಬೈರನಾಯಕನಹಳ್ಳಿ ಮಾರ್ಗದಲ್ಲಿ ಸಮಯಕ್ಕೆ ಸರಿಯಾಗಿ ಕೆ.ಎಸ್‌.ಆರ್‌. ಟಿ.ಸಿ ಬಸ್‌ ಸೌಲಭ್ಯವಿಲ್ಲದ ಕಾರಣ ಖಾಸಗಿ ಬಸ್‌ಗಳನ್ನು ಅವಲಂಬಿತರಾಗಿರುವ ವಿದ್ಯಾರ್ಥಿಗಳು.

ತಿಪಟೂರು: ತಾಲೂಕಿನಾದ್ಯಂತ ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ ಸಮರ್ಪಕವಾಗಿ ಇಲ್ಲದಿರುವುದರಿಂದ ಜನರ ಪಡಿಪಾಟಲು ಹೇಳತೀರದಾಗಿದೆ.

ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಹಾಗೂ ಕೆಲಸ ಕಾರ್ಯಗಳಿಗೆ ಬಂದು ಹೋಗುವ ರೈತರು, ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ಜನ ಪ್ರತಿನಿಧಿಗಳು ಮತ್ತು ತಾಲೂಕು ಸಾರಿಗೆ ಘಟಕದ ವ್ಯವಸ್ಥಾಪಕರಿಗೆ ಹಲವು ಬಾರಿ ಮನವಿ ಸಲ್ಲಿಸಿ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ.

ವಿದ್ಯಾರ್ಥಿಗಳಿಗೆ ತೊಂದರೆ: ತಾಲೂಕಿನ ಪ್ರಮುಖ ಮಾರ್ಗಗಳಾದ ತಾಲೂಕಿನ ಹೊನ್ನವಳ್ಳಿ, ನೊಣವಿನ ಕೆರೆ, ಕಿಬ್ಬನಹಳ್ಳಿ, ಕಸಬಾ ಹೋಬಳಿಗಳಿಂದ ನಿತ್ಯ ಸಾವಿರಾರು ವಿದ್ಯಾರ್ಥಿಗಳು ಶೈಕ್ಷಣಿಕ ನಗರಿ ತಿಪಟೂರಿನ ವಿವಿಧ ಶಾಲಾ-ಕಾಲೇಜುಗಳಿಗೆ ಹೋಗು ತ್ತಾರೆ. ಆದರೆ ಶಾಲಾ-ಕಾಲೇಜುಗಳ ಸಮಯಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ ಇಲ್ಲದೆ ಸಮಯಕ್ಕೆ ಸರಿಯಾಗಿ ತಲುಪಲಾಗುತ್ತಿಲ್ಲ. ಇದರಿಂದ ಹಾಜರಾತಿ ಕೊರತೆಯಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ತೊಂದರೆಯಾಗುತ್ತಿದೆ. ಬೈಕ್‌, ಆಟೋ, ಲಾರಿಗಳ ಮೂಲಕ ಶಾಲಾ-ಕಾಲೇಜುಗಳಿಗೆ ಹೋಗಿ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ಹಾಲ್ಕುರಿಕೆ, ಹೊನ್ನವಳ್ಳಿ, ಕೊನೇಹಳ್ಳಿ, ಬಿದರೆಗುಡಿ, ತಡಸೂರು, ಕೆರೆಗೋಡಿ-ರಂಗಾಪುರ, ದಸರೀಘಟ್ಟ, ಆಲದಳ್ಳಿ, ಕೆ.ಬಿ.ಕ್ರಾಸ್‌, ನೊಣವಿನಕೆರೆ ಸೇರಿ ವಿವಿಧ ಭಾಗಗಳಲ್ಲಿ ಸಾರಿಗೆ ವ್ಯವಸ್ಥೆ ಅಧ್ವಾನವಾಗಿದೆ.

ಮನೆ ಸೇರಲು ಪರದಾಟ: ತಿಪಟೂರಿನಲ್ಲೆ ಕೆಎಸ್‌ಆರ್‌ಟಿಸಿ ಡಿಪೋ ಇದ್ದರೂ ತಾಲೂಕಿನಾದ್ಯಂತ ಸಮಯಕ್ಕೆ ಸರಿಯಾಗಿ ಬಸ್‌ಗಳು ಸಂಚರಿಸುತ್ತಿಲ್ಲ. ಬೆಳಗ್ಗೆ 7ರಿಂದ 10ಗಂಟೆಯವರೆಗೆ ಬಸ್‌ ವ್ಯವಸ್ಥೆ ಸಮರ್ಪಕವಾಗಿಲ್ಲ. ಸಂಜೆ 4ರಿಂದ 7ಗಂಟೆಯವರೆಗೂ ತಿಪಟೂರಿನಿಂದ ಬಸ್‌ಗಳಿಲ್ಲದೆ ವಿದ್ಯಾರ್ಥಿಗಳು, ಸಾರ್ವಜನಿಕರು ಮನೆ ಸೇರಲು ಪರದಾಡಬೇಕು. ಸಮಸ್ಯೆ ಅರಿತು ಸಾರಿಗೆ ಅಧಿಕಾರಿಗಳು ಬಸ್‌ಗಳ ವೇಳಾಪಟ್ಟಿ ಪರಿಷ್ಕರಿಸುವ ಗೋಜಿಗೆ ಹೋಗುತ್ತಿಲ್ಲ. ಕೆಲ ಎಕ್ಸ್‌ಪ್ರೆಸ್‌ ಬಸ್‌ಗಳು ಬಿದರೆಗುಡಿ, ಕಿಬ್ಬನಹಳ್ಳಿ ಕ್ರಾಸ್‌, ನೊಣವಿನಕೆರೆ ಸೇರಿದಂತೆ ವಿವಿಧ ಮಾರ್ಗಗಳ ನಿಲ್ದಾಣದಲ್ಲಿ ನಿಲುಗಡೆ ಇದ್ದರೂ ವಿದ್ಯಾರ್ಥಿಗಳಿರು ವುದನ್ನು ಗಮನಿಸಿ ನಿಲ್ಲಿಸದೇ ಓಡಿಸುತ್ತಾರೆ.

 

● ಬಿ. ರಂಗಸ್ವಾಮಿ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.