ಚಿಗ್ಗಾವಿ ಗ್ರಾಮದಲ್ಲಿ ಹಣ-ಆಸ್ತಿಗಾಗಿ ತಂದೆಯಿಂದಲೇ ಮಗನಿಗೆ ಹಿಂಸೆ


Team Udayavani, Oct 26, 2021, 4:37 PM IST

ಚಿಗ್ಗಾವಿ ಗ್ರಾಮದಲ್ಲಿ ಹಣ-ಆಸ್ತಿಗಾಗಿ ತಂದೆಯಿಂದಲೇ ಮಗನಿಗೆ ಹಿಂಸೆ

ತಿಪಟೂರು: ಮಕ್ಕಳಿಗೆ ಶಿಕ್ಷಣ ನೀಡಿ ಆಸ್ತಿ ಮಾಡಿ ಅವರ ಭವಿಷ್ಯ ಹಸನು ಮಾಡಬೇಕೆನ್ನುವುದು ತಂದೆ ತಾಯಿ ಆಸೆ ಮತ್ತು ಆಕಾಂಕ್ಷೆಯಾಗಿರುತ್ತದೆ. ಆದರೆ, ಇಲ್ಲೊಬ್ಬ ತಂದೆ ಮಗನಿಗೆ ಆಸ್ತಿ ಕೊಡಬೇಕಾಗುತ್ತದೆ ಎಂದು ಹೆತ್ತ ಮಗನನ್ನೇ ಚಿತ್ರಹಿಂಸೆ ನೀಡಿ ಅವನಿಗೆ ಬುದ್ಧಿ ಭ್ರಮಣೆ ಎಂಬ ಪಟ್ಟಕಟ್ಟಿ ಗೃಹಬಂಧನದಲ್ಲಿರಿಸಿದ್ದ ಅಮಾನವೀಯ ಘಟನೆ ತಾಲೂಕಿನ ನೊಣವಿನಕೆರೆ ಹೋಬಳಿ ನೆಲ್ಲಿಕೆರೆ ಗ್ರಾಪಂ ವ್ಯಾಪ್ತಿಯ ಚಿಗ್ಗಾವಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ವಾಸಿ ಸೋಮಶೇಖರಯ್ಯ ಎಂಬುವವರ ಮಗ ಮಂಜುನಾಥ್‌ (23) ಗೃಹ ಬಂಧನಲ್ಲಿದ್ದ ವ್ಯಕ್ತಿ. ಇವರಿಗೆ ಒಬ್ಬ ಮಗ, ಒಬ್ಬ ಮಗಳಿದ್ದು, ಮಗಳನ್ನು ಬೆಂಗಳೂರಿನ ನಿವಾಸಿಗೆ ವಿವಾಹ ಮಾಡಲಾಗಿದೆ. ಮಗಳ ಮೇಲಿನ ವ್ಯಾಮೋಹ ಹೊಂದಿದ ಸೋಮಶೇಖರಯ್ಯನಿಗೆ ಮಗ ಮಜು ನಾಥ್‌ನನ್ನು ಕಂಡರೆ ಆಗುತ್ತಿರಲಿಲ್ಲವಂತೆ. ಇತ್ತೀಚಿಗೆ ಕೊಬ್ಬರಿ ಮಾರಿ ಬಂದ 3 ಲಕ್ಷ ರೂ. ಹಣವನ್ನು ಅಳಿಯನಿಗೆ ಕೊಡುತ್ತೇನೆಂದು ಹೇಳಿದ್ದಕ್ಕೆ ಮಗ ನನ್ನ ಖರ್ಚಿಗೆ ಎರಡು ಸಾವಿರ ಹಣ ಕೊಡು ಎಂದು ಕೇಳಿದ್ದಾನೆ.

ಅದಕ್ಕೆ ತಂದೆ ನೀನು ಹಣ ವ್ಯಯ ಮಾಡುತ್ತೀಯ. ನನ್ನ ಇಡೀ ಆಸ್ತಿಯನ್ನು ಮಗಳು – ಅಳಿಯನಿಗೆ ಕೊಡುತ್ತೇನೆ ಎಂದು ತಂದೆ- ತಾಯಿ ಸೇರಿಕೊಂಡು ಮಂಜುನಾಥ್‌ ಕಣ್ಣಿಗೆ ಖಾರದಪುಡಿ ಎರಚಿ, ದೊಣ್ಣೆಯಿಂದ ಬಡಿದು ಕಿವಿ ಮತ್ತು ಕೈ ಕಾಲುಗಳಿಗೆ ಗಾಯ ಮಾಡಿದ್ದಾರೆ. 3-4 ದಿನಗಳಿಂದ ಆಹಾರ ನೀಡದೆ ಸರಪಳಿಯಿಂದ ಕಟ್ಟಿಹಾಕಿದ್ದಾರೆ.

ಅವನ ಕೂಗಾಟ ಹೊರಕ್ಕೆ ಕೇಳಿಸಬಾರದೆಂದು ಕಿಟಕಿಗೆ ಕಬ್ಬಿಣದ ತಗಡನ್ನು ಹೊಡೆದಿದ್ದಾರೆನ್ನಲಾಗಿದ್ದು, ಅವನಿಗೆ ಬುದ್ಧಿ ಭ್ರಮಣೆಯಾಗಿದೆ ಎಂದು ಎಲ್ಲರಿಗೂ ಹೇಳಿಕೊಂಡು ಬಂದಿದ್ದಾರೆ.

ಸ್ಥಳಕ್ಕೆ ನ್ಯಾಯಾಧೀಶರ ಭೇಟಿ: ಕಾನೂನು ಸೇವಾ ಸಮಿತಿಯಿಂದ ತಾಲೂಕಿನಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದು, ಅದರಂತೆ ಅ.23ರಂದು ನೆಲ್ಲಿಕೆರೆ ಗ್ರಾಮದಲ್ಲಿ ಕಾರ್ಯಕ್ರಮ ನಡೆಸುತ್ತಿದ್ದ ವೇಳೆ ಹಿರಿಯ ಸಿವಿಲ್‌ ನ್ಯಾಯಾಧೀಶ ನೂರುನ್ನೀಸಾ ಅವರಿಗೆ ಸಾರ್ವಜನಿಕರು ನೀಡಿದ ದೂರಿನನ್ವಯ ನ್ಯಾಯಾಧೀಶರು ಸ್ಥಳಕ್ಕೆ ಭೇಟಿ ನೀಡಿ, ಯುವಕನನ್ನು ಗೃಹ ಬಂಧನದಿಂದ ಮುಕ್ತಗೊಳಿಸಿದ್ದಾರೆ. ಸ್ವತಃ ನ್ಯಾಯಾಧೀಶರೇ ಯುವಕನನ್ನು ಸರಪಳಿಯಿಂದ ಬಿಡಿಸಿ ಹೊರಕರೆದುಕೊಂಡು ಬಂದು, ನೀರು ಕುಡಿಸಿ ಅವನಿಗಾಗುತ್ತಿದ್ದ ನೋವು, ಸಂಕಷ್ಟವನ್ನು ಕೇಳಿನಿನಗೆ ನ್ಯಾಯ ದೊರಕಿಸಿಕೊಡುತ್ತೇವೆಂದು ಭರವಸೆ ನೀಡಿ ತನಿಖೆ ಕೈಗೊಂಡರು.

ಯುವಕನ ತಂದೆಗೆ ತರಾಟೆ: ಕುಪಿತರಾದ ನ್ಯಾಯಧೀಶರು ಯುವಕನ ತಂದೆ ಸೋಮಶೇಖರಯ್ಯ ಅವರನ್ನು ತರಾಟೆಗೆ ತೆಗೆದುಕೊಂಡು ಸ್ವಂತ ಮಗನನ್ನೇ ಬುದ್ಧಿ ಭ್ರಮಣೆ ಎಂದುಕಟ್ಟಿಹಾಕುವುದು ಯಾವ ನ್ಯಾಯ. ಮಾನವೀಯತೆ ಇಲ್ಲದ ನಿನ್ನ ವಿರುದ್ಧ ಕ್ರಮ ಜರುಗಿಸಬೇಕಿದೆಎಂದು ನೊಣವಿನಕೆರೆ ಎಎಸ್‌ಐ ಅವರನ್ನು ಸ್ಥಳಕ್ಕೆ ಕರೆಸಿ, ಸೋಮಶೇಖರಯ್ಯ ವಿರುದ್ಧ ಕೊಲೆ,ಬೆದರಿಕೆ 307 ಸೆಕ್ಷನ್‌ ಜಾರಿ ಮಾಡಿ, ಕಸ್ಟಡಿಗೆ ತೆಗೆದುಕೊಳ್ಳುವಂತೆ ತಿಳಿಸಿದರು. ನಂತರ ಯುವಕನನ್ನು ಹೆಚ್ಚಿನ ಚಿಕಿತ್ಸೆಗೆಂದು ತುಮಕೂರು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.