ಕುಣಿಗಲ್: ಚಿಕ್ಕಕೆರೆ ಕೋಡಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಅಪರಿಚಿತ ವ್ಯಕ್ತಿ ಸಾವು
Team Udayavani, Aug 9, 2022, 12:11 PM IST
ಕುಣಿಗಲ್: ಕುಣಿಗಲ್ ಪಟ್ಟಣದ ಚಿಕ್ಕಕೆರೆ ಕೋಡಿ ನೀರಿನಲ್ಲಿ ಅಪರಿಚಿತ ವ್ಯಕ್ತಿಯೋರ್ವ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ತಾಲೂಕಿನ ಕಸಬಾ ಹೋಬಳಿ ಹೇರೂರು ಗ್ರಾಮದ ಬಳಿ ನಡೆದಿದೆ.
ಮೃತ ವ್ಯಕ್ತಿ ಹೆಸರು ವಿಳಾಸ ತಿಳಿದು ಬಂದಿಲ್ಲ. 22 ವರ್ಷದ ಬಳಿಕ ಕೆರೆ ಕೋಡಿಯಾಗಿದ್ದು ನಾಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಈ ವೇಳೆ ವ್ಯಕ್ತಿಯು ನಾಲೆಯಲ್ಲಿ ಕಾಲು ಜಾರಿ ಬಿದ್ದಿರ ಬಹುದೆಂದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ವ್ಯಕ್ತಿಯು ನೀರಿನಲ್ಲಿ ತೇಲಿಕೊಂಡು ಹೋಗಿ ಹೇರೂರು ಸಮೀಪದ ವಿಮಾಲ ಶಂಕರ್ ಅವರ ತೋಟದ ದಡದ ಬಳಿ ಶವವಾಗಿ ಪತ್ತೆಯಾಗಿದ್ದು, ಮೃತ ದೇಹ ಗುರುತು ಸಿಗದಂತ್ತಾಗಿದೆ. ಮೃತನ ಸಂಬಂಧಿಕರು ಯಾರಾದರೂ ಇದ್ದಲ್ಲಿ ಕುಣಿಗಲ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಪೊಲೀಸರು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್