ಗಾಂಜಾ ಸೊಪ್ಪು ಸಾಗಣೆ: ಇಬ್ಬರ ಬಂಧನ
Team Udayavani, Sep 29, 2021, 9:34 PM IST
ಕೊರಟಗೆರೆ: ತುಂಬಾಡಿ ಟೋಲ್ ಪ್ಲಾಜಾ ಸಮೀಪದ ಪೆಟ್ಟಿಗೆ ಅಂಗಡಿ ಮುಂಭಾಗ ನಿಂತಿದ್ದ ದ್ವಿಚಕ್ರ ವಾಹನದ ಮೇಲೆ ಕೊರಟಗೆರೆ ಅಬಕಾರಿ ನಿರೀಕ್ಷಕಿ ಶ್ರೀ ಲತಾ ನೇತ್ರತ್ವದ ಅಬಕಾರಿ ಪೋಲೀಸರ ತಂಡ ದಾಳಿ ನಡೆಸಿ ಇಬ್ಬರು ಆರೋಪಿಗಳಿಂದ 70 ಸಾವಿರ ಮೌಲ್ಯದ 600ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿರುವ ಘಟನೆ ಬುಧವಾರ ನಡೆದಿದೆ.
ತಾಲ್ಲೂಕಿನ ಕಸಬಾ ಹೋಬಳಿ ತುಂಬಾಡಿ ಗ್ರಾಪಂ ವ್ಯಾಪ್ತಿಯ ದಾಸರಹಳ್ಳಿ ಸಮೀಪದ ಟೋಲ್ ಪ್ಲಾಜಾದ ಬಸ್ ನಿಲ್ದಾಣದ ಇರುವ ಪೆಟ್ಟಿಗೆ ಅಂಗಡಿ ಮುಂಭಾಗ ನಿಂತಿದ್ದ ದ್ವಿಚಕ್ರ ವಾಹನ ಮೇಲೆ ದಾಳಿ ನಡೆಸಿದಾಗ ಸುಮಾರು 70 ಸಾವಿರ ಮೌಲ್ಯದ 600 ಗ್ರಾಂನಷ್ಟು ಸೊಪ್ಪು, ಹೂವು ಬೀಜ ಹಾಗೂ ತೆನೆ ಮಿಶ್ರಿತ ಒಣ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಮಧುಗಿರಿ ತಾಲ್ಲೂಕು ಕಾಟಗಾನಹಟ್ಟಿಯ ಶಿವಣ್ಣ ಮತ್ತು ಕೊರಟಗೆರೆ ತಾಲ್ಲೂಕು ವೀರನಗರದ ವಾಸಿಯಾದ ಯಲ್ಲಪ್ಪ ಬಂಧಿತ ಆರೋಪಿಗಳು. ಆರೋಪಿಗಳನ್ನು ಬಂಧಿಸಿ ಎನ್ ಡಿಪಿಎಸ್ ಕಾಯ್ದೆ ಯಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಹಾನಗಲ್ ಉಪ ಚುನಾವಣೆ : ಮುಖಂಡರ ಜೊತೆ ಡಿಕೆಶಿ ಚರ್ಚೆ
ದಾಳಿಯ ವೇಳೆ ಅಬಕಾರಿ ನಿರೀಕ್ಷಕಿ ಶ್ರೀ ಲತಾ, ಉಪ ನಿರೀಕ್ಷಕಿ ವೈಷ್ಣವಿ ಕುಲಕರ್ಣಿ, ಸಿಬ್ಬಂದಿಗಳಾದ ದಾದಪೀರ್, ರಂಗಧಾಮಯ್ಯ, ಮಲ್ಲಿಕಾರ್ಜುನ್, ಮಂಜುಳ, ಮಧು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ