![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಯೂರಿಯಾ, ಗೊಬ್ಬರಕ್ಕೆ ಹೆಚ್ಚಿದ ಬೇಡಿಕೆ
Team Udayavani, Sep 13, 2020, 4:45 PM IST
![ಯೂರಿಯಾ, ಗೊಬ್ಬರಕ್ಕೆ ಹೆಚ್ಚಿದ ಬೇಡಿಕೆ](https://www.udayavani.com/wp-content/uploads/2020/09/tk-tdy-1-7-620x372.jpg)
ತುರುವೇಕೆರೆ: ತಾಲೂಕಿನಲ್ಲಿ ಯೂರಿಯಾ, ಗೊಬ್ಬರದ ಅಭಾವ ಇದ್ದು, ಅಷ್ಟಿಷ್ಟು ದಾಸ್ತಾನು ಮಾಡಿಕೊಂಡಿರುವ ಪಟ್ಟಣದ ಅಂಗಡಿಯ ಮುಂದೆ ರೈತರು ಮುಗಿಬಿದ್ದ ಖರೀದಿಸುತ್ತಿದ್ದ ದೃಶ್ಯ ಕಂಡು ಬಂತು.
ತಾಲೂಕಾದ್ಯಂತ ಉತ್ತಮ ಮಳೆ ಸುರಿಯುತ್ತಿರುವುದರಿಂದ ರಾಗಿ, ಅವರೆ, ತೊಗರಿ ಸೇರಿದಂತೆ ಇತರೆ ಬೆಳೆಗಳಿಗೆ ಯೂರಿಯಾ, ಗೊಬ್ಬರದ ಅಗತ್ಯತೆ ಹೆಚ್ಚಿದೆ. ಆದ್ದರಿಂದ ರೈತರು ತಮ್ಮ ಬೆಳೆಗಳಿಗೆ ಯೂರಿಯಾ ಸಿಗುವುದಿಲ್ಲ ಎಂಬ ಆತಂಕದಲ್ಲಿ ಬೆಳಗ್ಗೆ ಪಟ್ಟಣಕ್ಕೆ ಆಗಮಿಸಿ, ಗೊಬ್ಬರದ ಅಂಗಡಿ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಯೂರಿಯಾ, ಗೊಬ್ಬರ ಸಿಕ್ಕಂತಹರೈತರು ತಮ್ಮ ಬೈಕ್ನಲ್ಲಿ ಎರಡು ಮೂರು ಮೂಟೆ ತೆಗೆದುಕೊಂಡು ತೆರಳುತ್ತಿದ್ದು, ಕೆಲವರಿಗೆ ಸಿಗದಂತಾಗಿದೆ.
ಗೊಬ್ಬರ ಅಂಗಡಿ ಮಾಲಿಕರು ಅಂಗಡಿ ಮುಂದೆಜಮಾವಣೆಯಾದ ರೈತರಿಗೆ ಹಣ ಪಡೆದು ಚೀಟಿ ನೀಡಿ ಗೋಡೌನ್ಗಳಲ್ಲಿ ತೆಗೆದುಕೊಳ್ಳುವಂತೆ ಹೇಳಿ ಕಳುಹಿಸುತ್ತಿದ್ದರು.270 ರೂ.ನ ಒಂದು ಮೂಟೆಗೆ 300 ರೂ. ತೆಗೆದುಕೊಳ್ಳುತ್ತಿದ್ದಾರೆ ಎಂದು ರೈತರು ಆರೋಪಿಸಿದರು.
ಎಲ್ಲಿ ಎಷ್ಟು ಗೊಬ್ಬರ ಲಭ್ಯ: ತಾಲೂಕಿನ ದಂಡಿನಶಿವರ, ಸಂಪಿಗೆ ಸಹಕಾರ ಸಂಘ ತಲಾ 25 ಮೆಟ್ರಿಕ್ ಟನ್, ಪಟ್ಟಣದ ಟಿಎಪಿಸಿಎಂಎಸ್ 54 ಮೆಟ್ರಿಕ್ ಟನ್, ಅಯ್ಯಪ್ಪ ಸ್ವಾಮಿ ಪರ್ಟಿಲೈಸರ್ 49.9 ಎಂ.ಟಿ., ಜವರೇಗೌಡ ಫರ್ಟಿಲೈಸರ್ 20 ಎಂ.ಟಿ., ಮಾಯಸಂದ್ರ ಸಹಕಾರ ಸಂಘ 19.80 ಮೆಟ್ರಿಕ್ಟನ್ ಸೇರಿ ತಾಲೂಕಿನಲ್ಲಿ ಒಟ್ಟು 169 ಮೆಟ್ರಿಕ್ ಟನ್ ಗೊಬ್ಬರ ಲಭ್ಯವಿದೆ.
ತಾಲೂಕಿನಲ್ಲಿ ಯೂರಿಯಾ ಅಭಾವ ಇಲ್ಲ, ರೈತರು ಆತಂಕ ಪಡುವ ಅಗತ್ಯವಿಲ್ಲ. ಯೂರಿಯಾ ಸಿಗುವುದಿಲ್ಲ ಎಂದು ರೈತರು ಹೆಚ್ಚು ಬೆಲೆ ಕೊಟ್ಟು ಕೊಳ್ಳಬೇಡಿ, ಒಂದು ಮೂಟೆಗೆ 270 ರೂ.ಮಾತ್ರ ನೀಡಬೇಕು. ರೈತರು ಹೆಚ್ಚು ಹಣ ಪಡೆಯುವ ಅಂಗಡಿ ಬಗ್ಗೆ ದೂರು ನೀಡಿದ್ರೆ ಕ್ರಮಕೈಗೊಳ್ಳುತ್ತೇವೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಮೋದ್ ಹೇಳಿದ್ದಾರೆ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.