ತುಮಕೂರು ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಅರಣ್ಯ ನಾಶ   


Team Udayavani, Feb 3, 2021, 9:48 PM IST

forest

ತುಮಕೂರು: ಇತ್ತೀಚೆಗೆ ಮೋಜಿಗಾಗಿ ಅರಣ್ಯಕ್ಕೆ ಬೆಂಕಿ ಹಚ್ಚುವುದು, ಪ್ರಾಣಿಗಳನ್ನು ಭೇಟೆಯಾಡಲು ರಾತ್ರಿ ವೇಳೆ ಬೆಂಕಿ ಹಾಕುವುದು ಹೆಚ್ಚಾಗಿದ್ದು, 2020 ಜನವರಿಯಿಂದ ಇಲ್ಲಿಯವರೆಗೆ ಕಾಡಿಗೆ ಬೆಂಕಿ ಹಚ್ಚುವ ಪ್ರಕರಣಗಳು 246 ಪ್ರಕರಣಗಳು ವರದಿಯಾಗಿವೆ.

ಸಾಮಾನ್ಯವಾಗಿ ಜಿಲ್ಲೆಯಲ್ಲಿ ನವೆಂಬರ್‌ ನಲ್ಲಿ ಮಳೆ ನಿಂತು ಹೋಗಿ, ಚಳಿಗಾಲ ಆರಂಭಾವಾಗುತ್ತದೆ. ಈ ಸಮಯದಲ್ಲಿ ಗುಡ್ಡಗಳಿಗೆ ಬೆಂಕಿ ಬೀಳುವುದು ಸಾಮಾನ್ಯ, ಈಗಾಗಲೇ ಅಲ್ಲಲ್ಲಿ ಬೆಟ್ಟಗುಡ್ಡಗಳಿಗೆ ಹೋದವರು ಬೆಂಕಿ ಹಚ್ಚುತ್ತಿರುವುದು ಕಂಡು ಬರುತ್ತಿರುವುದು ಒಂದೆಡೆಯಾದರೆ, ರಾತ್ರಿ ವೇಳೆ ಮೊಲ ಸೇರಿದಂತೆ ಇತರೆ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಹೋದವರು ಒಂದು ಭಾಗಕ್ಕೆ ಬೆಂಕಿ ಹಚ್ಚಿ ಇನ್ನೊಂದು ಭಾಗದಲ್ಲಿ ಬಲೆಹಾಕಿ ಪ್ರಾಣಿಗಳನ್ನು ಹಿಡಿದು ತರುವುದು ಇನ್ನೊಂದೆಡೆಯಾಗಿದೆ. ಇದಲ್ಲದೆ ಮಳೆಗಾಲದಲ್ಲಿ ದನಕರುಗಳಿಗೆ ಹೊಸ ಚಿಗುರು ಹುಲ್ಲುಬೇಕೆಂದರೆ ಮಳೆ ನಿಂತು ಕೆಲವು ದಿನಗಳಲ್ಲಿ ಬೆಟ್ಟಗುಡ್ಡ ಕಾಡಿನಲ್ಲಿ ಬಿಸಿಲಿನ ಝಳಕ್ಕೆ ಒಣಗುವ ಹುಲ್ಲಿಗೆ ಬೆಂಕಿ  ಹಚ್ಚಿದರೆ ಹುಲ್ಲು ಸುಟ್ಟುಹೋಗಿ ಮಳೆಗಾಲದಲ್ಲಿ ಮಳೆಬಿದ್ದಾಗ ಹೊಸ ಹುಲ್ಲು ಚೆನ್ನಾಗಿ ಬಂದು ದನಕರುಗಳಿಗೆ ಒಳ್ಳೆಯ ಮೇವು ಸಿಗುತ್ತದೆ ಎನ್ನುವ ಕಾರಣವನ್ನೂ ಮುಂದುಡುವುದಿದೆ.

ಜಿಲ್ಲೆಯಲ್ಲಿ 2020ರಿಂದ ಇಲ್ಲಿಯವರೆಗೆ 264 ಬೆಂಕಿ ಪ್ರಕರಣಗಳು ದಾಖಲಾಗಿವೆ. ದೇವರಾಯನದುರ್ಗದ ನಾಮದ ಚಿಲುಮೆ  ಸೇರಿದಂತೆ ತುಮಕೂರು ತಾಲೂಕಿನಲ್ಲಿ 15 ಸಾವಿರಕ್ಕೂ ಹೆಚ್ಚು ಅರಣ್ಯ ಪ್ರದೇಶವಿದ್ದು, ಕಳೆದ ವರ್ಷ ಬಿದ್ದ ಬೆಂಕಿಯಿಂದ 200  ಎಕರೆಗೂ ಹೆಚ್ಚು ಪ್ರದೇಶ ಅರಣ್ಯ ನಾಶವಾಗಿರುವುದು ಇಲಾಖೆಯ ಅಂಕಿ ಅಂಶಗಳಿಂದ ತಿಳಿದುಬಂದಿದೆ.

ತಿಳಿವಳಿಕೆ ಕೊರತೆ: ತಾಲೂಕಿನ ಪ್ರಸಿದ್ಧ ಪ್ರವಾಸಿ ಕೇಂದ್ರ ದೇವರಾಯನದುರ್ಗದ ಬೆಟ್ಟವೂ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಬೆಂಕಿ ಪ್ರಕರಣಗಳು ಕಂಡು ಬಂದಿದೆ. ಈ ಭಾಗದ ಅರಣ್ಯದಲ್ಲಿ ಕಾಡ್ಗಿಚ್ಚು ಉಂಟಾಗುವುದಿಲ್ಲ. ಆದರೆ ಜನರ ತಿಳಿವಳಿಕೆ ಕೊರತೆಯಿಂದ ಅರಣ್ಯದಲ್ಲಿ ಬೆಂಕಿ ಹಚ್ಚಿ ಅಮೂಲ್ಯ ಸಂಪತ್ತನ್ನು ನಾಶ ಮಾಡುತ್ತಿದ್ದಾರೆ. ಸರ್ಕಾರ ಪ್ರತಿವರ್ಷ ಅರಣ್ಯ ಸಂಪತ್ತನ್ನು ಉಳಿಸಲು ಗಿಡ ಮರ ಬೆಳೆಸಲೆಂದು ಕೋಟ್ಯಂತರ ರೂ ಹಣವನ್ನು ಖರ್ಚು ಮಾಡುತ್ತಿದೆ. ಸ್ವಾಂತಂತ್ರÂ ಬಂದಾಗಿನಿಂದಲೂ ಪ್ರತಿವರ್ಷ ಗಿಡ ಮರ ಪೋಷಿಸಲು ಕೋಟಿ ಕೋಟಿ ಹಣ ಬಿಡುಗಡೆಯಾಗಿದೆ. ಅರಣ್ಯಕ್ಕಾಗಿ ಖರ್ಚು ಮಾಡಿರುವ ಹಣ ಲೆಕ್ಕ ನೋಡಿದರೆ ಎಲ್ಲಡೆ ಅರಣ್ಯ ಸಂಪತ್ತು ಹೆಚ್ಚಬೇಕಾಗಿತ್ತು. ಆದರೆ, ಇದರ ವಿರುದ್ಧ ಪ್ರತಿಕೂಲ ಪರಿಣಾಮ ಬೀರಿದೆ.

 ಇದನ್ನೂ ಓದಿ :ಅಂಡಮಾನ್‌ ಕೋವಿಡ್ ಮುಕ್ತ ಪ್ರದೇಶ? ಹೊಸದಾಗಿ ದೃಢವಾಗದ ಸೋಂಕು ಪ್ರಕರಣ

ಜನರಲ್ಲಿ ತಿಳಿವಳಿಕೆ ಮೂಡಿಸುವುದರ ಜತೆಗೆ ಸಿಬ್ಬಂದಿಯನ್ನು ಹೆಚ್ಚು ನಿಯೋಜಿಸಿ ಕಾಡನಲ್ಲಿ ಬೆಂಕಿ ಹಚ್ಚುವವರ ವಿರುದ್ಧ ಕಟ್ಟುನಿಟ್ಟಿನ  ಕ್ರಮ ಕೈಗೊಳ್ಳಬೇಕಿದೆ. ಶಿಸ್ತು ಕ್ರಮ ಜರುಗಿಸದಿದ್ದರೆ ಅರಣ್ಯ ನಾಶ ನಿರಂತರವಾಗುತ್ತದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.