ಹೊರಗಿನಿಂದ ಬಂದವರಿಗೇ ಸೋಂಕು ಹೆಚ್ಚು


Team Udayavani, May 24, 2020, 6:49 AM IST

horragiida

ತುಮಕೂರು: ಕಲ್ಪತರು ನಾಡಿನಲ್ಲಿ ಕೋವಿಡ್‌ 19  ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಲೇ ಇದೆ. ಪೊಲೀಸರ ಹದ್ದಿನ ಕಣ್ಣು ತಪ್ಪಿಸಿ ಹೊರ ರಾಜ್ಯದಿಂದ ಜಿಲ್ಲೆಗೆ ಕಳ್ಳದಾರಿಯಲ್ಲಿ ಬರು ತ್ತಲೇ ಇದ್ದಾರೆ. ನಗರದಲ್ಲಿದ್ದ ಸೋಂಕು ಹಳ್ಳಿ  ಗಳತ್ತ ಮುಖ ಮಾಡಿದೆ. ಇನ್ನು ಸಮು ದಾಯದಲ್ಲಿ ಹರಡಿದರೆ ಏನು ಗತಿ ಎನ್ನುವ ಆತಂಕ ಜಿಲ್ಲೆಯ ಜನರಲ್ಲಿ ಹೆಚ್ಚಿದೆ.

ಹಳ್ಳಿಗಳತ್ತ ಕೋವಿಡ್‌ 19 ಮುಖ: ಹೊರ ರಾಜ್ಯ, ಜಿಲ್ಲೆಯಿಂದ ಬರುವವರ ಮೇಲೆ ಪೊಲೀಸರು ಹದ್ದಿನ  ಕಣ್ಣಿಟ್ಟಿದ್ದಾರೆ. ಜಿಲ್ಲೆಯ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಆದರೂ ಜಿಲ್ಲೆಗೆ ಹೊರ ರಾಜ್ಯಗಳಿಂದ ಜಿಲ್ಲೆಗೆ ಗಡಿ ನುಸುಳಿ ಹಳ್ಳಿಗಳ ಮೂಲಕ ತಮ್ಮ ಗ್ರಾಮಗಳಿಗೆ ಬರುತ್ತಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕು ಕಾಣಿಸಿ  ಕೊಂಡಿರುವುದು ರೋಗ ಹರಡುತ್ತಿರುವುದು ಬೇರೆ ಭಾಗದಿಂದ ಜಿಲ್ಲೆಗೆ ಬಂದಿರುವವರಿಂದಲೇ ಆಗಿದ್ದು, ಈಗ ಮೂಲ ನಿವಾಸಿಗಳಿಗೆ ಸೋಂಕು ಕಾಣಿಸಿ ಕೊಳ್ಳುತ್ತಿದೆ, ಇದರ ಜೊತೆಗೆ ಸೋಂಕಿನ ಸಂಪರ್ಕದಲ್ಲಿ ಇದ್ದವರಿಗೆ ಕೋವಿಡ್‌ 19  ತನ್ನ ಕಬಂದ ಬಾಹು ಚಾಚಿದೆ.

ದಿಢೀರನೇ ಸೋಂಕು ಹೆಚ್ಚು: ಸೋಂಕು ಪ್ರಕರಣಗಳು ಕಡಿಮೆ ಇದ್ದ ಜಿಲ್ಲೆಯಲ್ಲಿ ಈಗ ದಿಢೀರನೆ ಹೆಚ್ಚುತ್ತಿರುವುದು ಪ್ರತಿದಿನ ಹೊರ ರಾಜ್ಯಗಳಿಂದ ಜಿಲ್ಲೆಗೆ ಬಂದವರಿಗೆ ಸೋಂಕು  ಕಾಣಿಸಿ ಕೊಳ್ಳುತ್ತಿರುವುದು ಜಿಲ್ಲೆಯ ಜನರ ಆತಂಕಕ್ಕೆ  ಕಾರಣವಾಗಿದೆ.

ಮುಂಬೈ ನಂಟು: ಮುಂಬೈನಿಂದ ಬಂದಿದ್ದ ಪಿ-1401, 28 ವರ್ಷದ ಮಹಿಳೆ, 1402, 30 ವರ್ಷದ ಮಹಿಳೆ, ಪಿ-1403, 10 ವರ್ಷದ ಹುಡುಗ, ಪಿ-1404, 12 ವರ್ಷದ ಹುಡುಗಿ ಗೆ ಕಾಣಿಸಿ ಕೊಂಡಿತ್ತು. ಇವರೆಲ್ಲರೂ ಮುಂಬೈ  ನಿಂದ ಬಂದವರೇ  ಆಗಿದ್ದರು. ಈಗ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ತುಮಕೂರಿನ ಖಾದರ್‌ ನಗರ ನಿವಾಸಿ ಲಾರಿ ಚಾಲಕ ಪಿ.1561 ಮುಂಬೈಗೆ ಹೋಗಿ ಬಂದು ಮನೆ ಸೇರಿದ್ದ ಆತನನ್ನು ಪತ್ತೆ ಹಚ್ಚಿ ಪರೀಕ್ಷಿಸಿದಾಗ ಕೋವಿಡ್‌ 19 ಇರುವುದು ದೃಢವಾಗಿದೆ.  ಇನ್ನೂ 1,243 ಜನರ ಮಾದರಿ ವರದಿ ಲ್ಯಾಬ್‌ ನಿಂದ ಬರಬೇಕಾಗಿದ್ದು, ಈ ವರದಿಯಲ್ಲಿ ಇನ್ನೂ ಎಷ್ಟು ಜನರಿಗೆ ಸೋಂಕು ಇದೆಯೋ ಎನ್ನುವ ಆತಂಕ ಜಿಲ್ಲೆಯ ಜನರನ್ನು ಕಾಡುತ್ತಿದೆ.

ಆಂಧ್ರದಿಂದ 133 ಮಂದಿ ಆಗಮನ: ಈವರೆಗೂ ಹೊರ ರಾಜ್ಯಗಳಿಂದ 462 ಮಂದಿ ಜಿಲ್ಲೆಗೆ ಬಂದಿದ್ದು, ಇವರಲ್ಲಿ ಆಂಧ್ರಪ್ರದೇಶದಿಂದಲೇ ಅತಿ ಹೆಚ್ಚು 133 ಮಂದಿ, ಮಹಾರಾಷ್ಟ್ರದಿಂದ 113, ತಮಿಳು ನಾಡಿನಿಂದ 103 ಜನರು  ಬಂದಿದ್ದಾರೆ. ಹೊರ ರಾಜ್ಯದಿಂದ ಬಂದವರೆಲ್ಲರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸ ಲಾಗಿದ್ದು, ವರದಿ ಬರಬೇಕಾಗಿದೆ. ಹೊರ ರಾಜ್ಯಗಳಿಂದ ಬಂದವರನ್ನು ಕ್ವಾರಂಟೈನ್‌ ಮಾಡಲಾಗಿದೆ . ಈ ವರೆಗೆ 8,417 ಜನರ  ಗಂಟಲು ದ್ರವ ಪರೀಕ್ಷೆ ನಡೆದಿದೆ, ಅದರಲ್ಲಿ 7,112 ಜನರ ವರದಿ ನೆಗೆಟಿವ್‌ ಎಂದು ಬಂದಿದೆ, ಈಗ 2,049 ಜನರನ್ನು ಹೋಂ ಕ್ವಾರಂಟೈನ್‌ ಮಾಡಲಾಗಿದ್ದು, 900 ಜನ ಐಸೋಲೇಷನ್‌ ನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.

ನಗರದ ಪಿಎಚ್‌ ಕಾಲೋನಿಯನ್ನು ನಿಯಂತ್ರಿತ ವಲಯ ಕಂಟೈನ್ಮೆಂಟ್‌ ಜೋನ್‌ ನಿಂದ ತೆರವುಗೊಳಿಸಲಾಗಿದೆ. ಕಳೆದ 28 ದಿನಗಳಿಂದ ಪಿಎಚ್‌ ಕಾಲೋನಿಯಲ್ಲಿ ಯಾವುದೇ ಕೋವಿಡ್‌-19 ಪ್ರಕರಣ ವರದಿಯಾಗದೆ ಇರುವುದರಿಂದ ಈ  ಕ್ರಮ ಕೈಗೊಳ್ಳಲಾಗಿದೆ.
-ಡಾ.ಕೆ.ರಾಕೇಶ್‌ಕುಮಾರ್‌, ಜಿಲ್ಲಾಧಿಕಾರಿ

* ಚಿ.ನಿ.ಪುರುಷೋತ್ತಮ್

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.