ಹೊರ ಜಿಲ್ಲೆಯವರು ಬಂದ್ರೆ ಮಾಹಿತಿ ನೀಡಿ

ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್‌ ಮನವಿ

Team Udayavani, Apr 18, 2020, 1:38 PM IST

ಹೊರ ಜಿಲ್ಲೆಯವರು ಬಂದ್ರೆ ಮಾಹಿತಿ ನೀಡಿ

ತುಮಕೂರು: ಜಿಲ್ಲೆಯಲ್ಲಿ ಕೋವಿಡ್‌-19ರ ಸೋಂಕಿತ ಶಿರಾ ತಾಲೂಕಿನ ಪಿ-84 ಸಂಪೂರ್ಣ ಗುಣಮುಖರಾಗಿದ್ದು ಈಗ ಯಾವುದೇ ಸೋಂಕಿತ ಪ್ರಕರಣ  ಜಿಲ್ಲೆಯಲ್ಲಿ ಇಲ್ಲ. ಜನರು ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದರ ಜೊತೆಗೆ ಬೆಂಗಳೂರು ಸೇರಿದಂತೆ ಬೇರೆ ಜಿಲ್ಲೆಗಳಿಂದ ಯಾರಾದರೂ ತಮ್ಮ ಮನೆಗೆ ಬಂದಿದ್ದರೆ ತಿಳಿಸಿ ಕೋವಿಡ್ -19 ಹರಡದಂತೆ ಜಾಗೃತಿ ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ಕುಮಾರ್‌ ಮನವಿ ಮಾಡಿದ್ದಾರೆ. ಉದಯವಾಣಿಯೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಇಂದಿರಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದ ಕೋವಿಡ್ -19 ವೈರಸ್‌ ಸೋಂಕಿತ ಪಿ-84 ವ್ಯಕ್ತಿಯು ಸಂಪೂರ್ಣ ಗುಣಮುಖರಾಗಿ ಜಿಲ್ಲೆಗೆ ವಾಪಸ್‌ ಬಂದಿದ್ದು, ಅವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಿಸಲು ತಿಳಿಸಲಾಗಿದೆ ಎಂದರು. ಈ ಸಂಬಂಧ ಶಿರಾ ನಗರಕ್ಕೆ ಭೇಟಿ ನೀಡಿ ಅವರ ಸಂಬಂಧಿಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಮುಂದಿನ 14 ದಿನಗಳವರೆಗೂ ಹೋಂ ಕ್ವಾರೆಂಟೈನ್‌ ಮಾಡಲಾಗಿದ್ದು, 2 ಬಾರಿಯೂ ಅವರ ಸಂಬಂಧಿಕರದ್ದು ನೆಗೆಟಿವ್‌ ಬಂದಿದ್ದು, ಅವರನ್ನು ಮನೆಗೆ ಕಳುಹಿಸಲಾಗಿದೆ ಎಂದು ಹೇಳಿದರು.

ಈ ಹಿಂದೆ ತಬ್ಲೀ ಜಮಾತ್‌ಗೆ ತೆರಳಿರುವವರ ಮಾದರಿಗಳನ್ನು ಕಳುಹಿಸಲಾಗಿದೆ. ಅಲ್ಲದೇ ಮೇ 3ರವರೆಗೆ ಲಾಕ್‌ಡೌನ್‌ ವಿಸ್ತರಿಸಿದ್ದು, ಸಾರ್ವಜನಿಕರು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಜಿಲ್ಲೆಗೆ ಬೆಂಗಳೂರು ಸೇರಿದಂತೆ ಬೇರೆ ಜಿಲ್ಲೆಗಳಿಂದ ಯಾರಾದರೂ ಬಂದಿದ್ದರೆ ಮಾಹಿತಿ ನೀಡಬೇಕು ಎಂದು ನುಡಿದರು. ನಗರವೂ
ಸೇರಿದಂತೆ ವಿವಿಧ ಕಡೆಗಳಲ್ಲಿ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಸಾರ್ವಜನಿಕರು ಇದಕ್ಕೆ ಸಹ ಕಾರ ನೀಡಬೇಕು, ಬೇರೆ ಜಿಲ್ಲೆಯಿಂದ ಬಂದವರಿಗೆ ಪರೀಕ್ಷೆ ಮಾಡಬೇಕು, ಜೊತೆಗೆ ಅವರನ್ನು 14 ದಿನ ಗಳ ವರೆಗೂ ಹೋಂ ಕ್ವಾರೆಂಟೈನ್‌ನಲ್ಲಿ ಇರಿಸಿ ಅವರ ರಕ್ತ ಮತ್ತು ಗಂಟಲು ಸ್ರಾವ ಪರೀಕ್ಷೆ ಮಾಡಿಸಿ ಕೊಳ್ಳಬೇಕು ಎಂದರು.

ಬೇರೆ ಜಿಲ್ಲೆಯಿಂದ ಬಂದವರಲ್ಲಿ ಸೋಂಕಿತ ವ್ಯಕ್ತಿ ಇದ್ದರೆ ಈಗ ಯಾವುದೇ ಸೋಂಕು ಪ್ರಕರಣ ಇಲ್ಲದ ಜಿಲ್ಲೆ ಯಲ್ಲಿ ಹೆಚ್ಚುವ ಸಾಧ್ಯತೆ ಇದೆ, ಆದ್ದರಿಂದ ಸಾರ್ವಜನಿಕರ ಮೇ 3 ರ ವರೆಗೂ ಮನೆಯಲ್ಲಿಯೇ ಇತುವಂತೆ ಮನವಿ ಮಾಡಿದರು. ಜಿಲ್ಲೆಗೆ ಬಂದಿರುವ 480 ಮಂದಿಯನ್ನು ತೀವ್ರ ನಿಗಾವಣೆಯಲ್ಲಿಡಲಾಗಿದ್ದು, ಈ ಪೈಕಿ 49 ಮಂದಿ ಯನ್ನು ಹೋಂ ಕ್ವಾರೆಂಟೈನ್‌ನಲ್ಲಿ ಇರಿಸಲಾಗಿದೆ. ಅವರು ಮನೆಯಿಂದ ಹೊರಬರಬಾರ ದೆಂದು ಸೂಚಿಸಲಾಗಿದೆ.  ಒಟ್ಟು 274 ಮಂದಿಯನ್ನು ಐಸೋಲೇಷನ್‌ನಲ್ಲಿ ಇಡಲಾಗಿದ್ದು, 321 ಜನರ 28 ದಿನ ಹೋಂ ಕ್ವಾರೆಂಟೈನ್‌ ಅವಧಿ ಪೂರ್ಣ ಗೊಂಡಿದೆ. ಈ ವರೆಗೂ 556 ಜನರ
ಗಂಟಲುಸ್ರಾವ ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, 384 ಮಾದರಿಗಳು ನೆಗೆಟಿವ್‌ ಎಂದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ರಾಕೇಶ್‌ ಕುಮಾರ್‌ ತಿಳಿಸಿದರು.

ಟಾಪ್ ನ್ಯೂಸ್

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

HD Revanna granted bail in domestic worker abuse case

HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

7-uv-fusion

Cleanliness: ಪ್ರವಾಸಿ ತಾಣ ನಮ್ಮ ಆಸ್ತಿ: ಸ್ವಚ್ಛವಾಗಿರಿಸೋಣ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

HD Revanna granted bail in domestic worker abuse case

HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

9-uv-fusion

Kind: ಕರುಣೆ ಎಂಬ ಒಡವೆ ತೆಗೆಯದಿರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.