ಪಾಲಿಕೆ ಆಡಳಿತ ಜನ ಸ್ನೇಹಿ ಮಾಡುವ ಗುರಿ


Team Udayavani, Feb 28, 2021, 1:17 PM IST

ಪಾಲಿಕೆ ಆಡಳಿತ ಜನ ಸ್ನೇಹಿ ಮಾಡುವ ಗುರಿ

ತುಮಕೂರು: ಕಳೆದ ಹನ್ನೊಂದು ವರ್ಷಗಳ ಬಳಿಕ ತುಮಕೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಪಡೆದಿದೆ, ನೂತನ ಮೇಯರ್‌ ಆಗಿ ಅವಿರೊಧವಾಗಿ ಆಯ್ಕೆಯಾಗಿರುವ ಬಿ.ಜಿ.ಕೃಷ್ಣಪ್ಪ ಶಾಸಕರ ಕಚೇರಿಯಲ್ಲಿ ಉದಯ ವಾಣಿಯೊಂದಿಗೆ ತಮ್ಮ ಮನದ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

15 ವರ್ಷದ ಬಳಿಕ ಬಿಜೆಪಿಗೆ ಅಧಿಕಾರ:

ಪಾಲಿಕೆಯಲ್ಲಿ ಹತ್ತು ಹದಿನೈದು ವರ್ಷಗಳಿಂದ ನಮ್ಮ ಬಿಜೆಪಿ ಪಕ್ಷ ಕ್ಕೆ ಅಧಿಕಾರ ದೊರೆತ್ತಿರಲಿಲ್ಲ, ಈ ಬಾರಿ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ದೊರೆಯಿತು ಸರ್ಕಾರ ಮೀಸಲಾತಿ ಹೊರಡಿಸಿತು ನಾನು ಒಬ್ಬನೇ ಇದ್ದುದರಿಂದ ಅವಿರೊಧವಾಗಿ ಆಯ್ಕೆ ಆಗುವ ಅವಕಾಶ ಬಂದಿತು, ಇದನ್ನು ತಪ್ಪಿಸಲು ಕೆಲವರು ನ್ಯಾಯಾಲಯದ ಮೊರೆ ಹೋದರು. ನ್ಯಾಯಾಲಯದಲ್ಲಿ ನನಗೇ ಜಯ ಸಿಕ್ಕಿತು. ನಾವು ಉಪಮೇಯರ್‌ ಸ್ಥಾನಕ್ಕೆ ಸ್ಪರ್ಧೆ ಮಾಡದೇ ಅವಿರೋಧವಾಗಿ ಆಯ್ಕೆಯಾಗಲು ಸಹಕರಿಸಿದ್ದೇವೆ. ಚುನಾವಣೆಯಲ್ಲಿ ಎಲ್ಲ ಸದಸ್ಯರು ಬಾಗವಹಿಸಿದ್ದರು. ಚುನಾವಣೆ ಮುಗಿಯಿತು. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ನಗರದ ಅಭಿವೃದ್ಧಿಯ ಕಡೆ ಗಮನ ಹರಿಸಬೇಕು ಎಂದು ಕೊಂಡಿದ್ದೇನೆ ಎಂದು ಬಿ.ಜಿ.ಕೃಷ್ಣಪ್ಪ ತಿಳಿಸಿದರು.

 ನೀವು ಮೇಯರ್‌ ಆಗಿದ್ದೀರಿ ನಿಮ್ಮ ಮುಂದಿನ ಯೋಜನೆಗಳೇನು..?

ತುಮಕೂರು ಮಹಾನಗರ ಪಾಲಿಕೆಯಲ್ಲಿ ದಶಕಗಳ ನಂತರ ಬಿಜೆಪಿಗೆ ಅಧಿಕಾರ ಲಭಿಸಿದೆ ಉತ್ತಮ ಆಡಳಿತ ನೀಡಬೇಕು. ಎಲ್ಲಾ ಸದಸ್ಯರ ವಿಶ್ವಾಸ ಪಡೆದು ನಮ್ಮ ಪಕ್ಷದ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್‌ ಮತು ಸಂಸ  ದರಾದ ಜಿ.ಎಸ್‌.ಬಸವರಾಜ್‌ ಅವರ ಸಹಕಾರ ಪಡೆದು ಉತ್ತಮ ಕಲಸ ಮಾಡಬೇಕು ಎಂದು ಕೊಂಡಿದ್ದೇನೆ.

ಪಾಲಿಕೆಯಲ್ಲಿ ಜನ ಕೆಲಸ ಆಗುವುದಿಲ್ಲ ಮಧ್ಯವರ್ತಿಗಳ ಹಾವಳಿ ಹೆಚ್ಚುತ್ತಿದೆ ಎನ್ನುವ ಮಾತಿದೆ ಇದನ್ನು ಹೇಗೆ ನಿಯಂತ್ರಿಸುವಿರಿ..?

ಪಾಲಿಕೆಗೆ ತಮ್ಮ ಕೆಲಸ ಕಾರ್ಯಗಳಿಗೆ ಬರುವ ಜನರಿಗೆ ತೊಂದರೆಯಾಗಬಾರದು ಇಲ್ಲಿ ಸಣ್ಣ ಕೆಲಸಗಳಿಗೆ ಬಂದು ಕೆಲಸ ಆಗದೇ ಹೋಗುತ್ತಿರುವುದು ನನ್ನ ಗಮನದಲ್ಲಿದೆ. ಮುಂದೆ ಆ ರೀತಿ ಆಗಬಾರದು ಎನ್ನುವುದು ನನ್ನ ಉದ್ದೇಶ. ಜನರ ಕೆಲಸ ಬೇಗ ಆಗಬೇಕು ಆ ರೀತಿ ಕ್ರಮಕೈಗೊಳ್ಳುತ್ತೇವೆ ಜನಸ್ನೇಹಿ ಆಡಳಿತ ನೀಡಬೇಕು ಎನ್ನುವುದು ನನ್ನ ಗುರಿ.

ನಿಮ್ಮ ಮೊದಲ ಉದ್ದೇಶ ಏನು..?

ನಾನು ಈ ಹಿಂದೆ ಹೇಳಿರುವಂತೆ ನನ್ನ ಮೊದಲ ಉದ್ದೇಶ ಸರಳೀಕರಣ ಆಡಳಿತ, ನಾನು ಮೇಯರ್‌ ಆದ ತಕ್ಷಣ ಕಲವು ನಾಗರಿಕರು ಹೇಳುತ್ತಿದ್ದರು. ಅವರಿಗೆ ತಿಳಿಸಿದೆ ನೀವು ಕಾದು ನೋಡಿ ಎಂದು ಹೇಳಿದ್ದೇನೆ, ನಾನು ಉತ್ತಮ ಆಡಳಿತ ನೀಡಿದರೆನನಗೆ, ನಮ್ಮ ಶಾಸಕರಿಗೆ ಸಂಸದರಿಗೆ ಹೆಸರು ಬರುತ್ತದೆ ಮುಂದೆ ಅನುಕೂಲವಾಗಲಿದೆ ಆದ್ದರಿಂದ ಆರೀತಿ ಕೆಲಸ ಮಾಡಬೇಕು ಎಂದು ಕೊಂಡಿದ್ದೇನೆ.

ನಗರದಲ್ಲಿ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಯಾವರೀತಿ ಕ್ರಮ ಕೈಗೊಳ್ಳುತ್ತೀರಿ..?

ನಗರದಲ್ಲಿ ಸ್ವತ್ಛತೆಗೆ ಮೊದಲ ಆದ್ಯತೆ ನೀಡುತ್ತೇನೆ. ಸ್ವಚ್ಛ ತುಮಕೂರು ಆಗಬೇಕು ಈಗಾಗಲೇ ನಮ್ಮ ನಗರ ಸ್ವಚ್ಛತೆಯಲ್ಲಿ ಉತ್ತಮ ಹೆಸರು ಪಡೆದಿದೆ, ಅದು ಮುಂದುವರೆಯಬೇಕು. ವಿಶೇಷವಾಗಿ ಹಸಿರೀಕರಣ ಆಗಬೇಕು ಅದಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ.

ಮೇಯರ್‌ ಆಗೆಂದು ಆಶೀರ್ವದಿಸಿದ್ದ ಶ್ರೀಗಳು :  ನಾನು ಪಾಲಿಕೆಯ ಸದಸ್ಯ ಸ್ಥಾನಕ್ಕೆ ಚುನಾವಣೆ

ನಿಲ್ಲಲು ನಿರ್ಧರಿಸಿದೆ ಆ ವೇಳೆಯಲ್ಲಿ ನಾನು ಸಿದ್ಧಗಂಗಾ ಮಠದ ಹಿರಿಯ ಶ್ರೀಗಳಾದ ಕರ್ನಾಟಕ ರತ್ನ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಆಶೀರ್ವಾದ ಪಡೆಯಲು ಹೋದಾಗ ಶ್ರೀಗಳು ಮೇಯರ್‌ ಆಗಬೇಕು ಎಂದು ಆಶೀರ್ವಾದ ಮಾಡಿದ್ದರು. ಅದು ಇಂದು ನನಗೆ ನೆರವೇರಿದೆ ಎಂದು ಮೇಯರ್‌ ಬಿ.ಜಿ.ಕೃಷ್ಣಪ್ಪ ಸಂತಸ ವ್ಯಕ್ತ ಪಡಿಸುತ್ತಾ ನುಡಿದರು.

ನಗರದ ಮೂಲಭೂತ ಸೌಲಭ್ಯಕ್ಕೆ ಹೆಚ್ಚು ಒತ್ತು :  ನಗರದಲ್ಲಿ ವಾಸಿಸುವ ಜನರಿಗೆ ಅಗತ್ಯವಾಗಿ ಬೇಕಾಗಿರುವ ಕುಡಿಯುವ ನೀರು, ಸ್ವತ್ಛತೆ, ಬೀದಿ ದೀಪದ ಅಳವಡಿಕೆ ಸೇರಿದಂತೆ ಅಗತ್ಯ ಮೂಲಸೌಲಭ್ಯ ಕಲ್ಪಸಲು ಹೆಚ್ಚು ಒತ್ತು ನೀಡುತ್ತೇನೆ.ಪಾಲಿಕೆಯ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆತೆಗೆದುಕೊಂಡು ಶಾಸಕರು, ಸಂಸದರು ಇತರೆ ಮುಖಡರ ಸಲಹೆಗಳನ್ನು ಪಡೆದು ನಗರದ ಜನರಿಗೆ ಸ್ಪಂದಿಸಿ ಕೆಲಸ ಮಾಡುತ್ತೇನೆ ಎಂದು ನೂತನ ಮೇಯರ್‌ ಬಿ.ಜಿ.ಕೃಷ್ಣಪ್ಪ ತಿಳಿಸಿದರು.

 

ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.