ವೃದ್ಧರು ಇಂದಿಗೂ ಪಿಂಚಣಿ ಪಡೆಯದಿರುವುದು ಬೇಸರ
Team Udayavani, Feb 5, 2019, 7:09 AM IST
ಮಧುಗಿರಿ: ಕಳೆದ ಅವಧಿಯಲ್ಲಿ ಕ್ಷೇತ್ರ ದಲ್ಲಿ ಎಲ್ಲ ಸಾಧನೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದು, ಆದರೆ, ಗ್ರಾಮಗಳಲ್ಲಿರುವ 80 ವರ್ಷದ ವೃದ್ಧರು ಇಂದಿಗೂ ಪಿಂಚಣಿ ಪಡೆಯದಿರುವುದು ಬೇಸರ ತರಿಸಿದೆ ಎಂದು ಶಾಸಕ ಎಂ.ವಿ. ವೀರಭದ್ರಯ್ಯ ಅಸಮಾಧಾನ ವ್ಯಕ್ತ ಪಡಿಸಿದರು.
ತಾಲೂಕಿನ ಮಿಡಿಗೇಶಿ ಹೋಬಳಿಯ ನೆರಳೇಕೆರೆ ಗ್ರಾಪಂ ವ್ಯಾಪ್ತಿಯ ವೀರಾಪುರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಲೋಕಾರ್ಪಣೆಮಾಡಿ ನೂರಾರು ವೃದ್ಧರಿಗೆ ಪಿಂಚಣಿ ಆದೇಶಪತ್ರ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್ ವಿತರಿಸಿ ಮಾತನಾಡಿದರು.
ಹಿಂದಿನ ಅವಧಿಯಲ್ಲಿ ಸಮಗ್ರ ಸಾಧನೆ ಮಾಡಿದ್ದೇವೆಂಬ ಅಧಿಕಾರಿಗಳು ಇಲ್ಲಿನ ಗ್ರಾಮದ ಹಲವಾರು ವೃದ್ಧರಿಗೆ ಅವಧಿ ಮೀರಿದರೂ ಪಿಂಚಣಿ ನೀಡಿಲ್ಲ ಎಂದು ಹಿಂದಿನ ಆಡಳಿತ ವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಅಧಿಕಾರಿ ಗಳಿಂದ ಕೂಬಿಂಗ್ ಮಾಡಿಸಿ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗ ದಂತೆ ಕ್ರಮವಹಿಸುತ್ತೇನೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖಂಡ ತುಂಗೋಟಿ ರಾಮಣ್ಣ, ಗ್ರಾಪಂ ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷ ಶಿವಣ್ಣ, ತಾಪಂ ಸದಸ್ಯೆ ಪುಟ್ಟತಾಯಮ್ಮ, ದಲಿತ ಮುಖಂಡ ಶಿವಣ್ಣ, ಹೋಬಳಿ ಅಧ್ಯಕ್ಷ ಡಾ.ಶಿವಕುಮಾರ್, ಆಹಾರ ನಿರೀಕ್ಷಕ ಕೃಷ್ಣಮೂರ್ತಿ, ಶಿವಕುಮಾರ್ ವೀರಾ ಪುರ, ಪಾಪಣ್ಣ, ರಘು, ದ¿ನಂದ್, ಪಿಡಿಒ ಶಿವಕುಮಾರ್, ಹಾಗೂ ಗ್ರಾಮಸ್ಥರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ
Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!
Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು
ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್ ಹೆಗಡೆಗೆ ಟಿಕೆಟ್ ತಪ್ಪಿದೆ: ಸೋಮಣ್ಣ
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು