ವಿಲೀನ ಚರ್ಚೆ: ತೆನೆ ಇಳಿಸುವ ಮುನ್ಸೂಚನೆಯೇ?


Team Udayavani, Dec 22, 2020, 3:48 PM IST

ವಿಲೀನ ಚರ್ಚೆ: ತೆನೆ ಇಳಿಸುವ ಮುನ್ಸೂಚನೆಯೇ?

ತುಮಕೂರು: ಜಿಲ್ಲೆಯಲ್ಲಿ ಈ ವರೆಗೆ ಜೆಡಿಎಸ್‌ನಿಂದ ಅಧಿಕಾರ ನಡೆಸಿದ ಕೆಲವರು ಈಗ ತೆನೆಇಳಿಸಿ ಕೈಹಿಡಿಯಲು ತೆರೆಮರೆ ಕಸರತ್ತು ಆರಂಭಿಸಿದ್ದಾರೆ. ರಾಜ್ಯರಾಜಕಾರಣದಲ್ಲಿ ಜೆಡಿಎಸ್‌ ಬಿಜೆಪಿ ಜತೆ ವಿಲೀನ, ಹೊಂದಾಣಿಕೆ, ಹೀಗೆ ಬಿನ್ನ ವಿಭಿನ್ನ ಹೇಳಿಕೆಗಳು ಕೇಳಿಬರುತ್ತಿವೆ. ಈಗ ಹೊಂದಾಣಿಕೆಯಿಲ್ಲ ಪಕ್ಷ ಸಂಘ ಟನೆಗೆ ಒತ್ತು ನೀಡುತ್ತೇವೆ ಎನ್ನುವ ಕುಮಾರಸ್ವಾಮಿಯವರ ಹೇಳಿಕೆ, ಈ ರೀತಿಯ ವಿಷಯಗಳು ಬರುತ್ತಲೆ ಜೆಡಿಎಸ್‌ನಲ್ಲಿ ಭಿನ್ನರಾಗಗಳು ಕೇಳಲಾರಂಭಿಸಿವೆ.

ಒಂದು ಕಾಲದಲ್ಲಿ ಜೆಡಿಎಸ್‌ ಭದ್ರಕೋಟೆಯಾಗಿದ್ದ ತುಮಕೂರು ಜಿಲ್ಲೆಯಲ್ಲಿ ಈಗ ಜೆಡಿಎಸ್‌ ತನ್ನ ಪ್ರಾಬಲ್ಯವನ್ನು ಕಳೆದು ಕೊಳ್ಳುತ್ತಿದೆಯಾ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಜೆಡಿಎಸ್‌ನ ಪ್ರಭಾವಿಗಳು ಜೆಡಿಎಸ್‌ಮನೆಯಿಂದ ಒಂದು ಕಾಲು ಹೊರಗೆ ಇಟ್ಟಿದ್ದಾರೆ ಎನ್ನುವ ವಿಷಯ ಈಗ ಜಿಲ್ಲೆಯ ಚರ್ಚಾ ವಿಷಯವಾಗಿದೆ.

ಈ ಹಿಂದೆ ಜಿಲ್ಲೆಯ 11 ವಿಧಾನಸಭಾ ಸ್ಥಾನಗಳ ಪೈಕಿ 9ಸ್ಥಾನಗಳನ್ನುಪಡೆದು ಬೀಗಿದ್ದ ಜೆಡಿಎಸ್‌. ತುಮಕೂರು ಲೋಕಸಭಾ ಕ್ಷೇತ್ರದಿಂದ  ಹಿಂದುಳಿದ ವರ್ಗದ ಸಿ.ಎನ್‌.ಭಾಸ್ಕರಪ್ಪ

ಅವರನ್ನು ನಿಲ್ಲಿಸಿ ಗೆಲ್ಲಿಸಿ ಲೋಕಸಭೆಗೆ ಕಳುಹಿಸಿ ತನ್ನ ಶಕ್ತಿ ಪ್ರದರ್ಶಿಸಿದ್ದ ಜೆಡಿಎಸ್‌ ಈಗ ತನ್ನ ಪ್ರಭಾವವನ್ನುಜಿಲ್ಲೆಯಲ್ಲಿ ಕಳೆದು ಕೊಳ್ಳುತ್ತಿದೆಯೇ ಎನ್ನುವ ಅನುಮಾನ ಆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿಯೇ ಮೂಡುತ್ತಿದೆ.

ಜಾತ್ಯತೀತ ಜನತಾದಳ ಬಡವರ ಪಕ್ಷ. ಜನಸಾಮಾ ನ್ಯರ ರೈತರ ಪಕ್ಷ ಎನ್ನುತ್ತಿದ್ದವರು. ಆ ಪಕ್ಷದಿಂದಲೇ ತಮ್ಮ ರಾಜಕೀಯ ಅಸ್ತಿತ್ವವನ್ನು ಪಡೆದುಕೊಂಡಿರುವ ಅನೇಕರಿಗೆ ಈಗ ಈ ಪಕ್ಷ ಬೇಸರ ವೆನಿಸಿದೆ. ಜೆಡಿಎಸ್‌ನಲ್ಲಿ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ನಾಯಕತ್ವದ ಕೊರತೆ ಎದುರಾಗಿದೆ. ಎನ್ನುವ ಮಾತು ಆ ಪಕ್ಷದ ಮುಖಂಡರಿಂದಲೇ ಕೇಳಿ ಬರುತ್ತಿದ್ದು, ನಾವು ಇದೇ ಪಕ್ಷದಲ್ಲಿ ಇದ್ದರೆ ನಾಳೆ ನಮ್ಮ ರಾಜಕೀಯ ಭವಿಷ್ಯಕ್ಕೆಕೊಡಲಿ ಪೆಟ್ಟು ಬೀಳಲಿದೆ ಎನ್ನುವ ಅಭಿಪ್ರಾಯವನ್ನು ತೆಳೆದು ಹಲವು ಮುಖಂಡರು ಜೆಡಿಎಸ್‌ ಪಕ್ಷ ಬಿಟ್ಟು ಕಾಂಗ್ರೆಸ್‌ಗೆ ಹಾರಲು ಒಳಗೊಳಗೇ ತಯಾರಿ ನಡೆಸಿದ್ದಾರೆ ಎನ್ನುವುದು ಬಹಿರಂಗವಾಗುತ್ತಿದೆ.

ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಎಸ್‌.ಆರ್‌.ಶ್ರೀನಿವಾಸ್‌ ಜಿಲ್ಲೆಯ ಹಿರಿಯ ಕಾಂಗ್ರೆಸ್‌ ಮುಖಂಡ ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್‌ಅಧಕ್ಷ ಕೆ.ಎನ್‌.ರಾಜಣ್ಣ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿರು ವುದು ಮುಂದೆ ಜಿಲ್ಲೆಯಲ್ಲಿ ರಾಜಕೀಯ ದೃವೀಕರಣಕ್ಕೆ ಸಾಕ್ಷಿಯಾಗಲಿದೆ ಎನ್ನುವ ಮಾತುಗಳುಕೇಳಿಬರುತ್ತಿವೆ.

ದೇವೇಗೌಡರ ಸೋಲಿನಿಂದಲೇ ಹಿನ್ನಡೆ: ಜೆಡಿಎಸ್‌ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಎಚ್‌.ಡಿ.ದೇವೇ ಗೌಡರು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಅನುಭಿಸಿದರು. ಅಲ್ಲಿಂದಲೇ ಜಿಲ್ಲೆಯಲ್ಲಿ ಜೆಡಿಎಸ್‌ ಪ್ರಾಬಲ್ಯಕ್ಕೆ  ಧಕ್ಕೆಯಾಯಿತು. ಇದರಿಂದ ಜೆಡಿಎಸ್‌ ನಾಯಕರಲ್ಲಿ ಅಸಮಧಾನ ಪ್ರಾರಂಭವಾಯಿತು. ಜೆಡಿಎಸ್‌ ಮುಖಂಡರ ನಡುವೆ ಆಂತರೀಕ ಮನಸ್ತಾಪಗಳು ಹೆಚ್ಚಿದವು. ನಂತರ ಎದುರಾದ ಶಿರಾ ಉಪಚುನಾವಣೆ ಮತ್ತು ಆಗ್ನೇಯ ಪದವೀದರರ ಕ್ಷೇತ್ರದ ಸೋಲು ಈಚುನಾವಣೆಯಲ್ಲಿ ಕೆಲವು ಜೆಡಿಎಸ್‌ ಮುಖಂಡರು ನಡೆದುಕೊಂಡ ರೀತಿ ಪಕ್ಷದ ವರಿಷ್ಠರಿಗೆ ಅಸಮಧಾನ ಉಂಟಾಯಿತು.

ಉಪಚುನಾವಣೆಯಲ್ಲಿಯೂ ಜೆಡಿಎಸ್‌ ಸೋಲು ಮುಖಂಡರಿಗೆ ಮುಂದೆ ಜೆಡಿಎಸ್‌ನಲ್ಲಿ ಭವಿಷ್ಯವಿಲ್ಲ ಎಂದು ಕಾಂಗ್ರೆಸ್‌ ಕಡೆಗೆ ಒಲವು‌ ತೋರಲು ಕಾರಣವಾಗಿದೆ. ಕಾಂಗ್ರೆಸ್‌ ಪಕ್ಷ ಸೇರುವ ಸೂಚನೆ ಎನ್ನುವಂತೆ ಕಾಂಗ್ರೆಸ್‌ ಮುಖಂಡರ ಮನೆಯಲ್ಲಿ ಜೆಡಿಎಸ್‌ ಶಾಸಕ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಪಕ್ಷದ ಮುಖಂಡರ ವಿರುದ್ಧ ವಾಗ್ಧಾಳಿ ಮಾಡುತ್ತಾರೆ ಎಂದರೆ ಅವರು ಜೆಡಿಎಸ್‌ನಿಂದ ಒಂದುಕಾಲು ಹೊರ ಹಾಕಿದ್ದಾರೆ ಎನ್ನುವುದು ಸ್ಪಷ್ಟ.

ಒಟ್ಟಾರೆ ಯಾಗಿ ಜಿಲ್ಲೆಯಲ್ಲಿ ಪ್ರಭಲವಾಗಿ ಬೇರು ಬಿಟ್ಟಿದ್ದ ಜೆಡಿಎಸ್‌ ಬೇರು ಅಲುಗಾಡುತ್ತಿದೆ. ಕಾಂಗ್ರೆಸ್‌ ಪಕ್ಷ ತನ್ನ ಸ್ಥಾನ ಗಟ್ಟಿ ಮಾಡಿಕೊಳ್ಳಲು ತೆರೆಮರೆ ಕಸರತ್ತು ನಡೆಸುತ್ತಿದ್ದಾರೆ. ಜೆಡಿಎಸ್‌ ನ ಕೆಲವು ಶಾಸಕರು ಮಾಜಿ ಶಾಸಕರು ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ ಕಾದು ನೋಡಿ ಜಿಲ್ಲೆಯಲ್ಲಿ ರಾಜಕೀಯ ದೃವೀಕರಣ ಆಗಲಿದೆ ಎನ್ನುವ ಭಿವಿಷ್ಯವನ್ನು ಕೆ.ಎನ್‌ ರಾಜಣ್ಣ ನುಡಿದಿದ್ದಾರೆ. 2023ರ ವೇಳೆಗೆ ಜಿಲ್ಲೆಯ ಮತ್ತು ರಾಜ್ಯದ ರಾಜಕಾರಣದಲ್ಲಿ ಯಾವ ರೀತಿ ಬದಲಾವಣೆಆಗುತ್ತವೆ ಎನ್ನುವುದೇಈಗಕು ತೂಹಲವಾಗಿದೆ.

ನಾನು ಮಾನಸಿಕವಾಗಿ ರಾಜಕಾರಣದಲ್ಲಿಯೇ ಇಲ್ಲ. ಇನ್ನು ಎರಡೂವರೆ ವರ್ಷ ನಮ್ಮ ಅಧಿಕಾರವಿದೆ. ಈಗ ನಾನು ಜೆಡಿಎಸ್‌ ತೊರೆಯುವುದಿಲ್ಲ. ಮುಂದಿನ ನಿರ್ಧಾರ ನಮ್ಮ ಕಾರ್ಯಕರ್ತರ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳುವೆ. ಬಿಜೆಪಿ ಜೊತೆ ಹೊಂದಾಣಿಕೆ ನನಗೆ ಇಷ್ಟ ಇಲ್ಲ. ನಾನು ಅಧಿಕಾರಕ್ಕೆ ಆಸೆ ಪಡುವವನಲ್ಲ.

ಬಿಜೆಪಿ ಜೊತೆ ವಿಲೀನ ಇಲ್ಲ. ಹೊಂದಾಣಿಕೆ ನನಗೆ ಏನೂ ಗೊತ್ತಿಲ್ಲ. ನಮ್ಮ ಪಕ್ಷದ ವರಿಷ್ಠರು ಏನು ತೀರ್ಮಾನ ಮಾಡುತ್ತಾರೆ ಅದಕ್ಕೆ ಬದ್ಧ. ಅಂತಹ ಸಂದರ್ಭ ಬಂದರೆ ಕಾರ್ಯಕರ್ತರ ಬೆಂಬಲಿಗರ ಅಭಿಪ್ರಾಯ ಪಡೆದು ಮುಂದಿನ ಅಡಿಯಿಡುತ್ತೇನೆ. – ಸಿ.ಬಿ.ಸುರೇಶ್‌ ಬಾಬು ಮಾಜಿ ಶಾಸಕ

ನಮ್ಮ ಪಕ್ಷದಿಂದಯಾರೂ ಪಕ್ಷ ಬಿಟ್ಟುಕಾಂಗ್ರೆಸ್‌ ಪಕ್ಷಕ್ಕೆ ಹೋಗುತ್ತಿಲ್ಲ. ಬಿಜೆಪಿ ಜತೆ ವಿಲೀನ ಮತ್ತುಹೊಂದಾಣಿಕೆ ಇಲ್ಲ. ಪಕ್ಷ ಸಂಘಟನೆ ಮಾಡುತ್ತೇವೆ ಎಂದು ನಮ್ಮ ನಾಯಕರಾದಕುಮಾರಣ್ಣ ಅವರೇ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಪಕ್ಷ ಬಲಿಷ್ಠವಾಗಿದೆಯಾರೂ ಪಕ್ಷ ಬಿಡುವುದಿಲ್ಲ. ಆರ್‌.ಸಿ.ಆಂಜನಪ್ಪ. ಜೆಡಿಎಸ್‌ ಜಿಲ್ಲಾಧ್ಯಕ್ಷರು

ರಾಜ್ಯದಲ್ಲಿ ಬಿಜೆಪಿ ಜತೆ ಜೆಡಿಎಸ್‌ ಹೊಂದಾಣಿಕೆ ಅಥವಾ ವಿಲೀನಕ್ಕೆಸಂಬಂಧಿಸಿದಂತೆಕುಮಾರಸ್ವಾಮಿ ಈಗಾಗಲೇ ಸ್ಪಷ್ಟಪಡಿಸಿದ್ದು, ವರಿಷ್ಠರುಕೈಗೊಳ್ಳುವಯಾವುದೇ ತೀರ್ಮಾನಕ್ಕೆ ನಾನು ಬದ್ಧರಾಗಿರುತ್ತೇನೆ. ಎಂ.ವಿ.ವೀರಭದ್ರಯ್ಯ,ಮಧುಗಿರಿ ಶಾಸಕ

ಬೇರೆ ಪಕ್ಷ ಸೇರುತ್ತೇನೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ಆ ರೀತಿ ಹೇಳಿಕೆಕೊಡುವಷ್ಟು ಎತ್ತರಕ್ಕೆ ನಾನು ಬೆಳೆದಿಲ್ಲ. ನಮ್ಮ ನಾಯಕರ ತೀರ್ಮಾನಕ್ಕೆ ನಾನುಬದ್ದ. ಜಿಲ್ಲೆಯಲ್ಲಿ ವಾಸಣ್ಣಅವರೂ ನಮ್ಮ ಪಕ್ಷದ ನಾಯಕರ ನಡುವೆ ತೊಂದರೆ ಇದ್ದರೆ ನಾವು ಕುಳಿತು ಬಗೆಹರಿಸಿಕೊಳ್ಳುತ್ತೇವೆ.– ಬಿ.ಎಂ.ಕಾಂತರಾಜ್‌, ಬೆಮೆಲ್‌ ವಿಧಾನ ಪರಿಷತ್‌ ಸದಸ್ಯ

 

ಚಿ.ನಿ.ಪುರುಷೋತ್ತಮ್‌

 

ಟಾಪ್ ನ್ಯೂಸ್

1-sadas

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್‌ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdsad

Kunigal ;ಅಬಕಾರಿ, ಪೊಲೀಸರಿಂದ ಲಕ್ಷಾಂತರ ರೂ.ಮೌಲ್ಯದ ನಕಲಿ ಮದ್ಯ ನಾಶ

1-sasadas

Pavagada ; ಹಾವು ಕಡಿದು ಅರು‌ ವರ್ಷದ ಬಾಲಕ ಸಾವು: ಆಸ್ಪತ್ರೆ ಎದುರು ಪ್ರತಿಭಟನೆ

4-kinigal

Kunigal: ಮನೆ ಬೀಗ ಹೊಡೆದು ಕಳ್ಳತನ

police

Kunigal; ಜೂಜು ಅಡ್ಡೆ ಮೇಲೆ‌‌ ಪೊಲೀಸರ ದಾಳಿ: ನಾಲ್ವರ ಬಂಧನ

death

Kunigal: ವಿದ್ಯುತ್ ಸ್ಪರ್ಶಗೊಂಡು ರೈತ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

1-sadas

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್‌ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.