ಕೆಂಪೇಗೌಡ ರಥಯಾತ್ರೆಯಲ್ಲಿ ಒಗ್ಗೂಡಿದ ಜೆಡಿಎಸ್‌ ನಾಯಕರು


Team Udayavani, Oct 31, 2022, 6:54 PM IST

ಕೆಂಪೇಗೌಡ ರಥಯಾತ್ರೆಯಲ್ಲಿ ಒಗ್ಗೂಡಿದ ಜೆಡಿಎಸ್‌ ನಾಯಕರು

ಮಧುಗಿರಿ: ತಾಲೂಕಿನಲ್ಲಿ ನಡೆದ ನಾಡ ಪ್ರಭು ಕೆಂಪೇಗೌಡರ ರಥಯಾತ್ರೆಯಲ್ಲಿ ಜೆಡಿಎಸ್‌ನ ಭಿನ್ನಮತೀಯ ನಾಯಕರೆಲ್ಲ ಒಂದಾಗಿದ್ದು, ಬಡವನಹಳ್ಳಿಯಲ್ಲಿ ರಥಯಾತ್ರೆಯು ಜೆಡಿಎಸ್‌ನ ಜೈತ್ರ ಯಾತ್ರೆಯಾಗಿ ಪರಿಣಮಿಸಿದ್ದು, ಜೆಡಿಎಸ್‌ನ ಕಾರ್ಯಕರ್ತರೆಲ್ಲ ಹರ್ಷದಿಂದ ಕುಣಿದು ಕುಪ್ಪಳಿಸಿದರು.

ತಾಲೂಕಿನಲ್ಲಿ ಸರ್ಕಾರದ ವತಿಯಿಂದ ಕೆಂಪೇಗೌಡರ ಪುತ್ಥಳಿ ಅನಾವರಣಕ್ಕಾಗಿ ಮೃತ್ತಿಗೆ ಸಂಗ್ರಹ ಮಾಡಲು ಆಗಮಿಸಿದ್ದು, ಕಳೆದರೆಡು ದಿನಗಳಿಂದ ವಿವಿಧೆಡೆ ಸಂಚರಿಸಿ ಭಾನುವಾರ ಬಡವನಹಳ್ಳಿ ತಲುಪಿತ್ತು. ಇಲ್ಲಿಯವರೆಗೂ ಶಾಸಕ ಎಂ.ವಿ.ವೀರಭದ್ರಯ್ಯ ರಥವನ್ನು ಬರಮಾಡಿಕೊಂಡು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ನಂತರ ವಿವಿಧೆಡೆ ಹಲವಾರು ಬಾರಿ ಭೇಟಿ ನೀಡಿದ್ದು ಭಾನುವಾರದಂದು ದೊಡ್ಡೇರಿ ಯಲ್ಲಿ ಸೇರಿದ್ದ ಬೃಹತ್‌ ಜನಸಾಗರದಲ್ಲಿ ರಥಯಾತ್ರೆಯನ್ನು ಬರಮಾಡಿಕೊಂಡರು. ಇದೇ ವೇಳೆ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿ ಯಂದೇ ಬಿಂಬಿಸಿದ್ದ ಕೆಎಎಸ್‌ ಅಧಿಕಾರಿ ಎಲ್‌ .ಸಿ.ನಾಗರಾಜು ಹಾಗೂ ಅವರ ಬೆಂಬಲಿಗರು, ಜೊತೆಯಾಗಿಯೇ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂಭ್ರಮಿಸಿದರು. ಇದನ್ನು ಊಹಿಸದ ಜೆಡಿಎಸ್‌ ಕಾರ್ಯಕರ್ತರು ಕುಣಿದು ಕುಪ್ಪಳಿಸಿದ್ದು ಒಂದಾದರೆ, ಜಯ ನಮ್ಮದೇ ಎಂದು ಘೋಷಣೆ ಕೂಗಿದ್ದು, ಇಬ್ಬರನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರೆಸಿದು,ª ಜೊತೆಯಾಗಿಯೇ ರಥಯಾತ್ರೆ ಯಲ್ಲಿ ಭಾಗವಹಿಸಿದರು.

ಇದೇ ವೇಳೆ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಸ್ಥಳೀಯ ಅಭ್ಯರ್ಥಿ ತುಮುಲ್‌ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್‌ (ಕೆಸಿಆರ್‌), ಬಿಜೆಪಿ ಟಿಕೆಟ್‌ ಆಕಾಂಕ್ಷಿ ಆಡಿಟರ್‌ ಮಧು, ಕಾಂಗ್ರೆಸ್‌ ವಕ್ತಾರ ಮುರಳೀಧರ ಹಾಲಪ್ಪ ಕೂಡ ಜನಾಂಗದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಚ್ಚರಿಯೆಂಬಂತೆ ಮಾಜಿ ಶಾಸಕ ಕೆ.ಎನ್‌. ರಾಜಣ್ಣನವರ ಪುತ್ರ ಪರಿಷತ್‌ ಸದಸ್ಯ ಆರ್‌. ರಾಜೇಂದ್ರ ಕೂಡ ರಥಯಾತ್ರೆಯಲ್ಲಿ ಭಾಗವಹಿಸಿದ್ದು, ಕೆಂಪೇಗೌಡರ ರಥಯಾತ್ರೆಗೆ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಜನಾಂಗದ ಹಲವರು ಒಕ್ಕಲಿಗ ಜನಾಂಗದ ಅಧಿನಾಯಕ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಭಾವಚಿತ್ರ ವಿಲ್ಲದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಒಗ್ಗಟ್ಟಾದ ಜೆಡಿಎಸ್‌? ರಥಯಾತ್ರೆಯಲ್ಲಿ ಜೆಡಿಎಸ್‌ ಭಿನ್ನಮತದ ನಾಯಕರು ಒಗ್ಗಟ್ಟಾಗಿದ್ದು, ಎಲ್ಲವೂ ಸರಿಯಾಗಿದೆ ಎಂಬ ಭಾವನೆಯಲ್ಲಿ ಕಾರ್ಯಕರ್ತರಿದ್ದಾರೆ. ಇದಕ್ಕೆ ಇಂಬು ನೀಡುವಂತೆ ಬಡವನಹಳ್ಳಿಯಲ್ಲಿ ಇಬ್ಬರೂ ನಾಯಕರು ಹಾಗೂ ಬೆಂಬಲಿಗರು ಒಟ್ಟಾಗಿರುವುದು ಕಂಡು ಬಂದಿತು.

ಕೆಂಪೇಗೌಡರು ಹಿಂದಿನ ಬೆಂಗಳೂರಿನ ನಿರ್ಮಾತೃ. ದೇವೇಗೌಡರು ಆಧುನಿಕ ಬೆಂಗಳೂರಿನ ಕನಸು ಕಂಡ ಕನಸುಗಾರ. ಇವರ ದೂರದೃಷ್ಟಿಯ ಫ‌ಲವೇ ಫ್ಲೈ ಓವರ್‌ ರಸ್ತೆ, ಮೆಟ್ರೋ ಹಾಗೂ 4ನೇ ಹಂತದ ಕಾವೇರಿ ಕುಡಿಯುವ ನೀರಿನ ಯೋಜನೆ ಹಾಗೂ ನೂತನ ಕೈಗಾರಿಕಾ ನೀತಿಯಿಂದ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಗೌಡರೇ ಕಾರಣ. -ಎಂ.ವಿ.ವೀರಭದ್ರಯ್ಯ, ಶಾಸಕರು, ಮಧುಗಿರಿ

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.