ಪವತಿ ಖಾತೆ ಕೆಲಸ ಆಂದೋಲನವಾಗಲಿ: ಡೀಸಿ


Team Udayavani, Nov 20, 2022, 4:42 PM IST

ಪವತಿ ಖಾತೆ ಕೆಲಸ ಆಂದೋಲನವಾಗಲಿ: ಡೀಸಿ

ಮಧುಗಿರಿ: ಜಿಲ್ಲಾದ್ಯಂತ ರೈತರ ಪವತಿ ಖಾತೆಯ ಕೆಲಸ ಆಂದೋಲನದ ರೂಪ ಪಡೆದು ಶೀಘ್ರವಾಗಿ ಇತ್ಯರ್ಥ ಮಾಡಲು ಅಧಿಕಾರಿಗಳು ಪ್ರಾಮಾಣಿಕ ಕೆಲಸ ಮಾಡುವಂತೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್‌ ತಿಳಿಸಿದರು.

ತಾಲೂಕಿನ ಗಿಡದಾಗಲಹಳ್ಳಿಯಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಂದಾಯ ಇಲಾಖೆಯಲ್ಲಿ ಪವತಿ ಖಾತೆ ಕಾರ್ಯಕ್ಕೆ ಚುರುಕು ನೀಡಬೇಕು. ಜಿಲ್ಲೆಯಾದ್ಯಂತ ಕಂದಾಯ ಗ್ರಾಮವಾಗಿಸಲು 502 ಬೇಚಾರ್‌ ಗ್ರಾಮ ಗುರುತಿಸಿದ್ದು, 195 ಗ್ರಾಮಗಳಿಗೆ ಅಧಿಸೂಚನೆ ಹೊರಡಿಸಿದೆ.

ಅನುಮತಿ ಪಡೆದು ಘೋಷಣೆ: ತಾಲೂಕಿನಲ್ಲಿ 47 ಗ್ರಾಮ ಗುರುತಿಸಿದ್ದು 26 ಗ್ರಾಮಗಳಿಗೆ ಅಧಿಸೂಚನೆ ಹೊರಡಿಸಿದ್ದೇವೆ. ಕಂದಾಯ ಗ್ರಾಮವಾಗಿಸಲು ಯಾವುದೇ ಜನ ವಿರೋಧಿ ಕ್ರಮಕ್ಕೆ ಮುಂದಾಗದೇ ಜನರ ಅನುಮತಿ ಪಡೆದು ಘೋಷಿಸಲಾಗುವುದು ಎಂದರು.

ಈ ಗ್ರಾಮದಲ್ಲೂ 25 ಪವತಿ ಖಾತೆಯ ಅರ್ಜಿಯಿದ್ದು ಇತ್ಯರ್ಥಗೊಳಿಸಲಾಗುವುದು. ಜಿಲ್ಲೆಯಾ ದ್ಯಂತ ಇಂತಹ 3,200 ಗ್ರಾಮಗಳಿದ್ದು ಮೂಲ ಸೌಕರ್ಯಗಳಿಗೆ ಆದ್ಯತೆ ನೀಡಲಾಗಿದೆ. ಸರ್ಕಾರಿ ಜಾಗ, ಗೋಮಾಳ, ಸ್ಮಶಾನ ಒತ್ತುವರಿಯಾಗಿದ್ದರೆ ಅಧಿಕಾರಿಗಳು ಕೂಡಲೇ ಕ್ರಮಕ್ಕೆ ಮುಂದಾಗಿ ಎಂದರು.

ಗ್ರಾಮದ ಸಂಸ್ಕೃತಿಗೆ ಗೌರವ : ಜಿಲ್ಲಾಧಿಕಾರಿಗಳು ಬಂದಾಗ ತೋರಣ ಕಟ್ಟಿ ಎತ್ತಿನಗಾಡಿಯಲ್ಲಿ ಹಾರಹಾಕಿ ಮೆರವಣಿಗೆ ಮಾಡುವುದು ಆಡಂಬರದ ಕೆಲಸವಲ್ಲ. ಇದು ಗ್ರಾಮಸ್ಥರು ತಮ್ಮ ಗ್ರಾಮದ ಸಂಸ್ಕೃತಿಯನ್ನು ನಮಗೆ ಪರಿಚಯಿಸಿಕೊಡುವ ಕ್ರಿಯೆ. ಅಧಿಕಾರಿಗಳು ಬೇರೆ ರಾಜ್ಯದಿಂದ ಬಂದರೂ ಜನಪರ ಆಡಳಿತ ನೀಡಲು ಕನ್ನಡ ಕಲಿಯಲೇಬೇಕು ಎಂದರು.

ಕನ್ನಡ ಕಲಿತ ರಿಷಿ ಆನಂದ್‌ : ಮಧುಗಿರಿಯ ಉಪವಿಭಾಗಾಧಿಕಾರಿಯಾಗಿ ಕಳೆದ ವಾರ ಅಧಿಕಾರ ವಹಿಸಿಕೊಂಡ ಜಾರ್ಖಂಡ್‌ ಮೂಲದ ಐಎಎಸ್‌ ಅಧಿಕಾರಿ ರಿಷಿ ಆನಂದ್‌ ಹಿಂದಿಯಲ್ಲಿ ಮಾತನಾಡಿ ದ್ದರು. ಆದರೆ ಕೇವಲ ವಾರದಲ್ಲೇ ಕನ್ನಡ ಕಲಿತು ಮಾತ ನಾಡಿದ್ದು ಎಲ್ಲರೂ ಆಶ್ವರ್ಯಚಕಿತರಾದರು. ಇದೊಂದು ಜನಪರ ಕಾರ್ಯಕ್ರಮ ಆಗಿದೆ. ಎಲ್ರೂ ಇದ್ರ ಉಪಯೋಗ್‌ ಪಡಯ್‌ಬೇಕು. ಯಾವ್‌ ಸಮಸ್ಯೆ ಇದ್ರು ನನಗೆ ತಿಳಿಸಿ ಎಂದು ಮಾತು ಮುಗಿಸಿದರು.

ತಹಶೀಲ್ದಾರ್‌ ಸುರೇಶಾಚಾರ್‌ ಮಾತನಾಡಿದರು. ಎಸ್ಪಿ ರಾಹುಲ್‌ ಕುಮಾರ್‌ ಶಹಾಪುರ್‌, ಎಡಿಸಿ ಚನ್ನಬಸಪ್ಪ, ಡಿವೈಎಸ್ಪಿ ವೆಂಕಟೇಶ್‌ನಾಯ್ಡು, ಗ್ರಾಪಂ ಅಧ್ಯಕ್ಷೆ ಜ್ಯೋತಿ, ಪಿಡಿಒ, ಜುಂಜೇಗೌಡ, ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯಾಧಿಕಾರಿ ಚೆನ್ನವೀರಪ್ಪ, ಗ್ರಾಮ ಲೆಕ್ಕಿಗರಾದ ಹರೀಶ್‌, ರಾಮಗಿರಿ, ಶಶಿ, ರಮೇಶ್‌, ಪ್ರಸನ್ನ, ಶ್ರೀನಿವಾಸ್‌, ಗ್ರಾಮಸ್ಥರು ಜೊತೆಗಿದ್ದರು.

ಬಗರ್‌ಹುಕುಂ ಸಮಿತಿಯಿಂದ ಹಲವು ತಪ್ಪು: ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ ಶಾಸಕ ಎಂ.ವಿ.ವೀರಭದ್ರಯ್ಯ ಮಾತನಾಡಿ, ಕ್ಷೇತ್ರದ ಹಿಂದಿನ ಬಗರ್‌ಹುಕುಂ ಸಮಿತಿಯಿಂದ ಹಲವು ತಪ್ಪುಗಳಾಗಿದ್ದು, ರೈತರಿಗೆ ಅನ್ಯಾಯವಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸಿಕೊಡಬೇಕು. ಮಾರೀಪಾಳ್ಯ ಗ್ರಾಮವನ್ನು ಕಂದಾಯ ಗ್ರಾಮವಾಗಿಸುವಲ್ಲಿ ಗೊಂದಲವಿದ್ದು, ಸರಿಪಡಿಸಬೇಕಿದೆ ಎಂದರು.

900 ಜನಸಂಖ್ಯೆಯ ಈ ಗಿಡದಾಗಲಹಳ್ಳಿ ಶಾಲೆಗೆ ರಂಗಭೂಮಿ, ದೇಗುಲದ ಅಭಿವೃದ್ಧಿ, ಸಿಸಿ ರಸ್ತೆ ಹಾಗೂ ನೂತನ ಶಾಲಾ ಕೊಠಡಿ ಸೇರಿ 30 ಲಕ್ಷಕ್ಕೂ ಹೆಚ್ಚಿನ ಅಭಿವೃದ್ಧಿ ಕಾರ್ಯ ಮಾಡಲಾಗಿದೆ ಎಂದರು.

ಟಾಪ್ ನ್ಯೂಸ್

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

NIA (2)

ಪ್ರವೀಣ್ ನೆಟ್ಟಾರು ಕೇಸ್ : ಸುಳ್ಯ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಿದ ಎನ್‌ಐಎ

4-shivamogga

ಒಳ ಮೀಸಲಾತಿ ಬೇಗುದಿ ; ಯಡಿಯೂರಪ್ಪ ಮನೆಗೆ ಕಲ್ಲು ತೂರಾಟ, ಪ್ರತಿಭಟನೆ

tdy-16

ಆಕಾಂಕ್ಷಾ ದುಬೆ ಬಳಿಕ ಮತ್ತೊಂದು ಘಟನೆ: ನೇಣು ಬಿಗಿದ ಸ್ಥಿತಿಯಲ್ಲಿ ಯುವ ನಟಿ ಪತ್ತೆ

3—harapanahalli

ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಬಿಗ್ ಫೈಟ್‌

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

G PARAMESHWAR

ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ

TDY-20

ಬಂಧಿಸಿರುವ ಮಹಾರಾಷ್ಟ್ರದ ಹಸುಕರುಗಳ ಬಿಡುಗಡೆ ಮಾಡಲು ಮನವಿ

1-weqewq

ಕುಣಿಗಲ್:ಬೈಕ್ ಅವಘಡದಲ್ಲಿ ಇಂಜಿನಿಯರ್ ಸೇರಿ ಇಬ್ಬರ ಮೃತ್ಯು

ಉತ್ತರ ಪ್ರದೇಶದ ಸಿ.ಎಂ ಯೋಗಿ ಭೇಟಿಯಾದ ಮುನಿಯಪ್ಪ

ಚುನಾವಣಾ ಕಾವು: ಉತ್ತರ ಪ್ರದೇಶದ ಸಿ.ಎಂ ಯೋಗಿ ಭೇಟಿಯಾದ ಕೆ.ಎಂ ಮುನಿಯಪ್ಪ

ಮೋದಿ ಕಮಾಲ್‌ ಮುಂದೆ ಕಾಂಗ್ರೆಸ್‌ ಶೂನ್ಯ: ಜೆಪಿ ನಡ್ಡಾ ವಾಗ್ಧಾಳಿ

ಮೋದಿ ಕಮಾಲ್‌ ಮುಂದೆ ಕಾಂಗ್ರೆಸ್‌ ಶೂನ್ಯ: ಜೆಪಿ ನಡ್ಡಾ ವಾಗ್ಧಾಳಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

NIA (2)

ಪ್ರವೀಣ್ ನೆಟ್ಟಾರು ಕೇಸ್ : ಸುಳ್ಯ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಿದ ಎನ್‌ಐಎ

tdy-17

ತಹಶೀಲ್ದಾರ್‌ ದಾಳಿ: ಉಡುಗೊರೆಗಳು ವಶಕ್ಕೆ

ದೈವ ಸಂಘರ್ಷದ ಸುತ್ತ ‘ಆರ’; ಹೊಸಬರ ಸ್ಪಿರಿಚ್ಯುಯಲ್‌ ಡ್ರಾಮಾ

ದೈವ ಸಂಘರ್ಷದ ಸುತ್ತ ‘ಆರ’; ಹೊಸಬರ ಸ್ಪಿರಿಚ್ಯುಯಲ್‌ ಡ್ರಾಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.