ಜೂನ್ 1-3 ; ಕೊರಟಗೆರೆ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯ ಸುವರ್ಣ ಮಹೋತ್ಸವ


Team Udayavani, May 27, 2022, 7:14 PM IST

1-sfsfsdf

ಕೊರಟಗೆರೆ:ಪಟ್ಟಣದ ಶ್ರೀ ಕನ್ನಿಕಾ ಪರಮೇಶ್ವರಿಪ್ರತಿಷ್ಠಾಪನಾ ಸುವರ್ಣ ಮಹೋತ್ಸವದ ಅಂಗವಾಗಿ ಆರ್ಯ ವೈಶ್ಯ ಮಂಡಳಿ ವತಿಯಿಂದ 1ಕೋಟಿ ವೆಚ್ಚದಲ್ಲಿ ನೂತನ ರಾಜ ಗೋಪುರ , ಕಲಶ ಪ್ರತಿಷ್ಠಾಪನೆ,ಸುವರ್ಣ ಮಹೋತ್ಸವ ಭವನ , ಅತ್ಯಾಧುನಿಕ ಭೊಜನ ಶಾಲೆ, ವಧು- ವರರ ಕೊಠಡಿ ಗಳ ಉದ್ಘಾಟನೆಯೊಂದಿಗೆ, ಮಹಾ ಕುಂಭಾಭಿಷೇಕ ಹಾಗೂ ಗಿರಿಜಾ ಕಲ್ಯಾಣೋತ್ಸವ ಜೂನ್ 1ರಿಂದ ಮತ್ತು3 ರವರಗೆ ಏರ್ಪಡಿಸಲಾಗಿದೆ ಎಂದು ಕರ್ನಾಟಕ ಆರ್ಯವೈಶ್ಯ ಮಹಾ ಸಭಾ ನಿರ್ದೇಶಕ ಸಂಪಂಗಿ ಕೃಷ್ಣ ಶೆಟ್ಟಿ.ಸಿ.ಎ.ತಿಳಿಸಿದ್ದಾರೆ.

ಅವರು ಪಟ್ಟಣದ ಕನ್ನಿಕಾ ದೇವಾಲಯದ ಸಭಾಂಗಣದಲ್ಲಿ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಕೊರಟಗೆರೆ ಪಟ್ಟಣದಲ್ಲಿ ಶ್ರೀ ಕನ್ನಿಕಾ ಪರಮೇಶ್ವರಿ ಅಮ್ಮನವರ ಪ್ರತಿಷ್ಟಾಪನೆ ಯಾಗಿ 50 ವರ್ಷಗಳು ತುಂಬಿದ ನೆನಪಿಗಾಗಿ ಶಿಥಿಲಾವಸ್ಥೆ ತಲುಪಿರುವ ವಾಸವಿ ಕಲ್ಯಾಣ ಮಂಟಪವನ್ನು ದಾನಿಗಳಾದ ಶ್ರೀ ಗುಂಡಯ್ಯ ಶ್ರೇಷ್ಠಿರವರ ಮಕ್ಕಳಾದ ಎಂ.ಜಿ.ಸುಧೀರ್ ಮತ್ತು ಎಂ.ಜಿ.ಬದ್ರಿಪ್ರಸಾದ್ ನೇತೃತ್ವದಲ್ಲಿ 1ಕೋಟಿ ವೆಚ್ಚದಲ್ಲಿ ನೂತನವಾಗಿ ನವೀಕರಣದೊಂದಿಗೆ,ವಾಸವಿ ದೇವಾಲಯಕ್ಕೆ ರಾಜ ಗೋಪುರಕ್ಕೆ,10 ಅಡಿ ವಾಸವಿ ದೇವಿಯ ವಿಗ್ರಹ ಪ್ರತಿಷ್ಟಾಪನೆ ಹಾಗೂ ಸುವರ್ಣ ಮಹೋತ್ಸವ ಭವನ,ಅತ್ಯಾಧುನಿಕ ಭೋಜನ ಶಾಲೆ, ಹಾಗೂ ನೂತನ ವಧು ವರರ ಕೊಠಡಿಗಳನ್ನು ನಿರ್ಮಿಸಿದ್ದು, ಜೂನ್1ರಿಂದ 3ರವರೆಗೂ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಉದ್ಘಾಟಿಸಲಾಗುವುದು ಎಂದರು.

ಜೂನ್ 1ರಂದು ಗೋಧೂಳಿ ಲಗ್ನದಲ್ಲಿ 108 ಸುಮಂಗಲಿಯರಿಂದ ಗಂಗಾ ಭಗೀರಥ ಪೂಜೆ,ಯಾಗ ಶಾಲೆ ಪ್ರವೇಶ,ಕಲಶ ಪ್ರತಿಷ್ಟಾಪನೆ,ಮಹಾಗಣಪತಿ ಪೂಜೆ, ಮಹಾ ಸಂಕಲ್ಪ ಹಾಗೂ ಹೋಮ ಹವನಗಳೊಂದಿಗೆ ಸಂಜೆ6 ಗಂಟೆಗೆ ಕರ್ನಾಟಕ ಆರ್ಯ ವೈಶ್ಯ ಮಹಾ ಸಭಾದ ಅದ್ಯಕ್ಷ ರವಿಶಂಕರ್ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಪರಿಷತ್ ಸದಸ್ಯ ಹಾಗೂ ಆರ್ಯ ವೈಶ್ಯ ಅಭಿವೃದ್ಧಿ
ನಿಗಮದ ಮಾಜಿ ಅದ್ಯಕ್ಷ ಡಿ.ಎಸ್.ಅರುಣ್,ಮಾಜಿ ಪಪಂ ಸದಸ್ಯ ಶ್ರೀನಿವಾಸ್ ,ಆರ್ಯ ವೈಶ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ತಾಲೂಕು ಅದ್ಯಕ್ಷ ಸಂಪಂಗಿ ಕೃಷ್ಣಯ್ಯಶೆಟ್ಟಿ,ಗುಪ್ತ ಜೂಯಲರ್ಸ್ ಮಾಲೀಕ ನವೀನ್,ಆರ್ಯ ವೈಶ್ಯ ಮಂಡಳಿಯ ಅದ್ಯಕ್ಷ ವೆಂಕಟಾಚಲಶ್ರೆಷ್ಟಿ, ಎಂ.ಜಿ. ಬದ್ರಿ ಪ್ರಸಾದ್,ಪದ್ಮ ರಮೇಶ್, ಅಶೋಕ್ ಕುಮಾರ್,ಎಂ.ಜಿ.ಸುಧೀರ್ ಭಾಗವಹಿಸುವವರು.

ಕುಂಭಾಭಿಷೇಕ ಹಾಗೂ ರಾಜ ಗೋಪುರ ಕಲಶ ಪ್ರತಿಷ್ಠಾಪನೆ
ಜೂನ್2ರಂದು ಬ್ರಾಹ್ಮಿ ಮಹೂರ್ತದಲ್ಲಿ ವಾಸವಿ ಪೀಠಾಧಿಪತಿಗಳಾದ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಗಳು ಹಾಗೂ ಸಿದ್ದರಬೆಟ್ಟದ ರಂಭಾಪುರಿ ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ವೀರಭದ್ರ ಶಿವಾಚಾರ್ಯ ಸ್ವಾಮೀಜಿರವರ ದಿವ್ಯ ಸಾನಿಧ್ಯದಲ್ಲಿ ನೇರವೇರಲಿದೆ.

ಗಿರಿಜಾ ಕಲ್ಯಾಣ
ಲೋಕ ಕಲ್ಯಾಣಾರ್ಥಕವಾಗಿ ಜೂನ್3 ರಂದು 8.30 ಕ್ಕೆ ವಾಸವಿ ಮಹಲ್ ನಲ್ಲಿ ಸಮಾರೋಪ ಸಮಾರಂಭದಲ್ಲಿ ಗಿರಿಜಾ ಕಲ್ಯಾಣೋತ್ಸವ ಕಾರ್ಯಕ್ರಮ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ ಉಪಸ್ಥಿತಿಯಲ್ಲಿ ವಿಯೆಟ್ನಂ ದೇಶದ ಕರ್ನಾಟಕದ ರಾಯಭಾರಿ ಎನ್.ಎಸ್ ಶ್ರೀನಿವಾಸಮೂರ್ತಿ, ಪಪಂ ಸದಸ್ಯ ಪ್ರದೀಪ್ ಕುಮಾರ್, ವಿ.ಸಿ. ರಮೇಶ್ ಬಾಬು, ನಂಜುಂಡಯ್ಯಶ್ರೆಷ್ಟಿ, ಕೃಷ್ಣ ಯ್ಯ ಶ್ರೆಷ್ಟಿ ರವರ ಉಪಸ್ಥಿತಿ ಯಲ್ಲಿ ನೇರ ವೇರಲಿದ್ದು, ನಂತರ ಸಂಜೆ ಕೇರಳದ ಚಂಡೆಮೇಳ ಹಾಗೂ ಜಾನಪದ ಕಲಾ ತಂಡಗಳೊಂದಿಗೆ ಪಟ್ಟಣದ ರಾಜ ಬೀದಿಗಳಲ್ಲಿ ಶ್ರೀ ಕನ್ನಿಕಾ ಪರಮೇಶ್ವರಿ ಅಮ್ಮನವರ ಮೆರವಣಿಗೆ ಏರ್ಪಡಿಸಲಾಗಿದೆ.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.