ಹೆದ್ದಾರಿಯಲ್ಲಿ ಜಂಗಲ್‌ ಗಿಡಗಳು: ತೊಂದರೆ


Team Udayavani, Sep 9, 2021, 5:10 PM IST

ಹೆದ್ದಾರಿಯಲ್ಲಿ ಜಂಗಲ್‌ ಗಿಡಗಳು: ತೊಂದರೆ

ಗುಬ್ಬಿ: ರಾಜ್ಯ ಹೆದ್ದಾರಿ 84ರ ಶಿರಾ- ನಂಜನಗೂಡು ರಸ್ತೆಯ ಎರಡು ಬದಿಯಲ್ಲಿ ಜಂಗಲ್‌ ಗಿಡಗಳು ಸೇರಿದಂತೆ ಬೃಹತ್‌ ಪ್ರಮಾಣದಲ್ಲಿ ಬೇಲಿ ಗಿಡಗಳು ಬೆಳೆದಿದ್ದು, ಆ ಗಿಡಗಳನ್ನು ಸ್ವಚ್ಛಗೊಳಿಸಿ ವಾಹನ ಸವಾರರಿಗೆ ಓಡಾಡುವುದಕ್ಕೆ ಅನುಕೂಲ ಮಾಡಿಕೊಡುವಲ್ಲಿ ಪಿಡಬ್ಲೂಡಿ ಇಲಾಖೆ ಸಂಪೂರ್ಣ ವಿಫ‌ಲಗೊಂಡಿದೆ.

ಗುಬ್ಬಿ ಪಟ್ಟಣದಿಂದ ಚನ್ನಶೇಟ್ಟಿಹಳ್ಳಿ, ಅಮ್ಮನಘಟ್ಟ, ತಿಪ್ಪೂರು ಗ್ರಾಮಗಳು ಸೇರಿದಂತೆ ಚೇಳೂರು ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ-04ಕ್ಕೆ ಸಂಪರ್ಕಿಸುವ ಈ ರಸ್ತೆಯ ಎರಡುಬದಿಯಲ್ಲಿ ಜಂಗಲ್‌ ಗಿಡಗಳು ಬೆಳೆದಿದ್ದು, ವಾಹನ ಸವಾರರು ದಿನನಿತ್ಯ ಓಡಾಡುವಾಗ ತೊಂದರೆ
ಅನುಭವಿಸುವಂತಾಗಿದೆ.

ಕಾಡು-ಪ್ರಾಣಿಗಳ ಭಯ: ರಾಜ್ಯ ಹೆದ್ದಾರಿ 84ರ ಶಿರಾ-ನಂಜನಗೂಡು ಹೆದ್ದಾರಿ ರಸ್ತೆಯು ಗ್ರಾಮೀಣಾ ಭಾಗದಲ್ಲಿ ಹಾದು ಹೋಗಿದ್ದು, ಇಲ್ಲಿನ
ಗ್ರಾಮಗಳ ಅಕ್ಕಪಕ್ಕದ ತೋಟಗಳಲ್ಲಿ ಚಿರತೆ, ಕರಡಿ ಸೇರಿದಂತೆ ಹಲವು ಕಾಡು ಪ್ರಾಣಿಗಳು ಕಾಣಿಸಿಕೊಳ್ಳುತ್ತಿರುವುದು ಜನರನ್ನು ಭಯ ಭೀತರನ್ನಾಗಿಸಿದೆ. ರಸ್ತೆಯ ಇಕ್ಕೆಲ ಗಳಲ್ಲಿ ಗುಂಪು- ಗುಂಪಾಗಿ ಬೆಳೆದಿರುವ ಪೊದೆಗಳಲ್ಲಿ ಕಾಡು ಪ್ರಾಣಿಗಳು ಆಡಗಿ ಕುಳಿತು ಕೊಳ್ಳುವುದಕ್ಕೆ ಸಹಕಾರಿಯಾಗಿದೆ. ಸಂಬಂಧಪಟ್ಟ ಇಲಾಖೆ ಯವರು ಇದನ್ನು ಪರಿಹರಿಸ ಬೇಕಾಗಿದೆ.

ಇದನ್ನೂ ಓದಿ:ಮತ್ತೋರ್ವ ಸಹಾಯಕ ಸಿಬ್ಬಂದಿಗೆ ಕೋವಿಡ್: ಅಭ್ಯಾಸ ಸ್ಥಗಿತಗೊಳಿಸಿದ ಟೀಂ ಇಂಡಿಯಾ

ತಿರುವುಗಳು ಹೆಚ್ಚಾಗಿ ಬರುವ ಈ ಹೆದ್ದಾರಿಯಲ್ಲಿ ಎದುರುಗಡೆಯಿಂದ ಬರುವ ವಾಹನಗಳು ಸರಿಯಾಗಿ ಕಾಣಿಸುವುದಿಲ್ಲ. ರಾತ್ರಿ ವೇಳೆಯಲ್ಲಿ ಈ ರಸ್ತೆಯಲ್ಲಿ ಓಡಾಡುವುದಕ್ಕೆ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಬೇಕಾಗಿದ್ದು, ದೊಡ್ಡ ವಾಹನಗಳು ಎದುರುಗಡೆ ಬಂದಾಗ ‌ ರಸ್ತೆಯ
ಕೆಳಕ್ಕೆ ಇಳಿಸುವುದಕ್ಕೂ ಆಗುವುದಿಲ್ಲ. ಅಪಘಾತಗಳಿಗೆ ಎಡೆ ಮಾಡಿಕೊಟ್ಟಿದೆ. ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಈ ಬಗ್ಗೆ ಕ್ರಮ ವಹಿಸಬೇಕಿದೆ ಎಂದು ಸ್ಥಳೀಯ ಗ್ರಾಮಸ್ಥರು ಆಗ್ರಹಿದ್ದಾರೆ.

ಚನ್ನಶೆಟ್ಟಿಹಳ್ಳಿ, ಅಮ್ಮನಘಟ್ಟ ಸೇರಿದಂತೆ ತಿಪ್ಪೂರು ಗ್ರಾಮಗಳಿಂದ ವಿವಿಧಕೆಲಸ ನಿಮಿತ್ತ ಪಟ್ಟಣಕ್ಕೆ ಈ ರಸ್ತೆಯಲ್ಲೆ ಬರಬೇಕು. ಸಂಜೆ
ಇದೆ ರಸ್ತೆಯಲ್ಲೇ ಹೋಗಬೇಕು.ಕಾಡು ಪ್ರಾಣಿಗಳು ಸೇರಿದಂತೆಕಳ್ಳರ ಭಯದ ಜತೆಗೆ ದಿನಕಳೆಯುವಂತಾಗಿದೆ.
-ಯತೀಶ್‌, ಸ್ಥಳೀಯ

ರಾಜ್ಯ ಹೆದ್ದಾರಿಗಳ ಅಕ್ಕಪಕ್ಕದಲ್ಲಿ ಬೆಳೆದಿರುವ ಜಂಗಲ್‌ ಗಿಡಹಾಗೂ ಪೊದೆಗಳನ್ನು ತೆಗೆಯಲು ಈಗಾಗಲೇ ಟೆಂಡರ್‌ ಪ್ರಕ್ರಿಯೆಯ ಹಂತದಲ್ಲಿದ್ದು, ಆದಷ್ಟು ಬೇಗ ರಸ್ತೆ ಬದಿಯ ಗಿಡಗಳನ್ನು ಸ್ವಚ್ಛಗೊಳಿಸಲುಕ್ರಮ ವಹಿಸುತ್ತೇನೆ.
-ವಿಜಯ್‌ಕುಮಾರ್‌, ಪಿಡಬ್ಲೂಡಿ ಎಂಜಿನಿಯರ್‌, ಗುಬ್ಬಿ

-ಕೆಂಪರಾಜು ಜಿ.ಆರ್‌

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.