ಮರಾಠ ನಿಗಮ ರದ್ದಿಗೆ ಆಗ್ರಹಿಸಿ ಪ್ರತಿಭಟನೆ


Team Udayavani, Dec 6, 2020, 7:44 PM IST

ಮರಾಠ ನಿಗಮ ರದ್ದಿಗೆ ಆಗ್ರಹಿಸಿ ಪ್ರತಿಭಟನೆ

‌ಕುಣಿಗಲ್‌: ಮರಾಠ ನಿಗಮ ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ ಕರ್ನಾಟಕ ಬಂದ್‌ ಹಿನ್ನೆಲೆ ವಿವಿಧ ಸಂಘಟನೆಳಿಂದ ಕುಣಿಗಲ್‌ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಸರ್ಕಾರ ರಾಜಕೀಯ ಲಾಭಕ್ಕಾಗಿ ಏಳು ಕೋಟಿ ಕನ್ನಡಿಗರ ಹಿತವನ್ನು ಬಲಿಕೊಟ್ಟು ಮರಾಠ ನಿಗಮ ಮಾಡಿರುವುದನ್ನು ರದ್ದುಪಡಿಸುವಂತೆ ಆಗ್ರಹಿಸಿ ಡಾ.ರಾಜ್‌ ಸಂಘದ ತಾಲೂಕು ಅಧ್ಯಕ್ಷ ರಂಗಸ್ವಾಮಿ, ರೈತ ಸಂಘದಜಿಲ್ಲಾಧ್ಯಕ್ಷಆನಂದ್‌ಪಟೇಲ್‌,ಕರವೇ ಅಧ್ಯಕ್ಷ ಮಂಜುನಾಥ್‌, ಕಜಾವೇ ಅಧ್ಯಕ್ಷ ಶಂಕರ್‌ ಅವರ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಿಂದ ತಾಲೂಕು ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನೆಡೆಸಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ರಾಜಕೀಯ ಸ್ವಾರ್ಥಕ್ಕೆ ನಿಗಮ ಸ್ಥಾಪನೆ: ಡಾ.ರಾಜ್‌ ಸಂಘದ ಅಧ್ಯಕ್ಷ ರಂಗಸ್ವಾಮಿ ಮಾತನಾಡಿ, ಮಹಾರಾಷ್ಟ್ರವು ಏಕೀಕರಣ ಸಮಿತಿಯ ಹೆಸರಿನಲ್ಲಿ ಕರ್ನಾಟಕದ ವಿರುದ್ಧ ಹಲವು ಭಾರಿ ಪ್ರತಿಭಟನೆ ನಡೆಸಿ ಕನ್ನಡಿಗರ ಭಾವನೆಗೆ ಧಕ್ಕೆ ಉಂಟು ಮಾಡುತ್ತಿದೆ.ಸಂಗೋಳ್ಳಿರಾಯಣ್ಣನ ವಿಗ್ರಹ ಪ್ರತಿಷ್ಠಾಪನೆ,ಮಹಾಜನ್‌ ವರದಿ ಜಾರಿಗೆ ಅಡ್ಡಗಾಲು ಹಾಕಿದೆ, ಮಹದಾಯಿ ನೀರಿನ್ನು ನಮ್ಮ ಗಡಿಭಾಗದ ಜನರಿಗೆ ನೀಡುತ್ತಿಲ್ಲ, ಈಗಿರುವಾಗ ಸಿಎಂ ಯಡಿಯೂರಪ್ಪ ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮರಾಠ ನಿಗಮ ಮಾಡಿರುವುದನ್ನು ಖಂಡನೀಯ ಎಂದರು.

ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್‌ಪಟೇಲ್‌ ಮಾತನಾಡಿ, ಕೇಂದ್ರ ಎನ್‌ಡಿಎ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಗಳು ರೈತರಿಗೆ ಮರಣ ಶಾಸನವಾಗಿದೆ. ಇದನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ಲಕ್ಷಾಂತರ ಮಂದಿ ರೈತರು ಶಾಂತಿಯುತವಾಗಿಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ,ಇದನ್ನು ಹತ್ತಿಕ್ಕಲು ರೈತರ ಮೇಲೆ ಲಾಠಿಚಾರ್ಜ್‌ ಮಾಡುವ ಮೂಲಕ ದೌರ್ಜನ್ಯ, ದಬ್ಟಾಳಿಕೆ ಎಸಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದಿಂದ ಜನರನ್ನು ಒಡೆದು ಆಳುವ ನೀತಿ: ಪುರಸಭಾ ಮಾಜಿ ಅಧ್ಯಕ್ಷ ರೆಹಮಾನ್‌ ಷರೀಫ್‌ ಮಾತನಾಡಿ, ಎಲ್ಲಾ ಜನಾಂಗದಲ್ಲೂ ಬಡವರಿದ್ದಾರೆ, ಅವರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಸಹಾಯವಾಗುವಂತ ನಿಗಮ ಸ್ಥಾಪಿಸದೇ ಜಾತಿಗೊಂದು, ಭಾಷೆಗೊಂದು ನಿಗಮ ಮಾಡುವ ಮೂಲಕ ರಾಜ್ಯದ ಜನರನ್ನು ಹೊಡೆದು ಹಾಳುವಂತ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಹೋರಾಟದ ಎಚ್ಚರಿಕೆ: ಕರವೇ ಅಧ್ಯಕ್ಷ ಮಂಜುನಾಥ್‌ ಮಾತನಾಡಿ, ಕನ್ನಡ ನುಡಿ, ಭಾಷೆ, ಸಂಸ್ಕೃತಿ, ನೆಲ, ಜಲಕ್ಕಾಗಿ ಹೋರಾಟ ಮಾಡುವಕನ್ನಡ ಪರ ಸಂಘಟನೆಗಳನ್ನು ನಕಲಿ ಹೋರಾಟಗಾರರು ಹಾಗೂ ಹಿಂದುವಿರೋಧಿಗಳು ಎಂದು ಬಿಜೆಪಿ ಶಾಸಕರು ಬಾಯಿಗೆ ಬಂದತ್ತೆ ಮಾತನಾಡುತ್ತಿದ್ದಾರೆ, ಹಾಗಾದರೆ ಸಿಎಂ ಯಡಿಯೂರಪ್ಪ ಪುರಸಭಾ ಸದಸ್ಯರಾಗಿ ನಿಂದಲ್ಲೂ ಈವರೆಗೂ ಹೋರಾಟ ನಡೆಸಿಕೊಂಡು ಬಂದು ಮುಖ್ಯಮಂತ್ರಿಯಾಗಿದ್ದಾರೆ, ಅವರನ್ನು ನಕಲಿ ಹೋರಾಟಗಾರರು ಅನ್ನುತ್ತೀರ ಎಂದು ಪ್ರಶ್ನಿಸಿದರು,

ಯಡಿಯೂರಪ್ಪನವರೇ ನಿಮ್ಮ ಶಾಸಕರಿಗೆ ಬುದ್ಧಿ ಹೇಳಿ ಅವರ ಬಾಯಿಗೆ ಬೀಗ ಹಾಕಿ ಇಲ್ಲವಾದಲ್ಲಿ ರಾಜ್ಯಾದ್ಯಂತ ತೀವ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ನಂತರ ಪ್ರಭಾರ ತಹಶೀಲ್ದಾರ್‌ ತಿಪ್ಪೇಸ್ವಾಮಿ ಅವರಿಗೆಮನವಿಸಲ್ಲಿಸಿದರು.ಪ್ರತಿಭಟನೆಯಲ್ಲಿ ಕಸಾಪ ಅಧ್ಯಕ್ಷ ಕ.ಚ.ಕೃಷ್ಣಪ್ಪ, ಮಾಜಿ ಅಧ್ಯಕ್ಷ ದಿನೇಶ್‌ಕುಮಾರ್‌ ಹಾಗೂ ವಿವಿಧ ಸಂಘದ ಅಧ್ಯಕ್ಷರಾದ ಎಸ್‌.ಆರ್‌.ಚಿಕ್ಕಣ್ಣ, ನಗುತಾ ರಂಗನಾಥ್‌, ಶಿವಣ್ಣ, ಕೋಟೆ ಶ್ರೀನಿವಾಸ್‌, ವೆಂಕಟೇಶ್‌ಬಾಬು,ಧನಂಜಯ, ಶಿವಕುಮಾರ್‌, ಎಸ್‌.ಟಿ.ಕೃಷ್ಣರಾಜು ಇತರರುಇದ್ದರು.

ಟಾಪ್ ನ್ಯೂಸ್

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

utದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Udupi ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

saಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ

Manipal ಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasadas

Pavagada ; ಹಾವು ಕಡಿದು ಅರು‌ ವರ್ಷದ ಬಾಲಕ ಸಾವು: ಆಸ್ಪತ್ರೆ ಎದುರು ಪ್ರತಿಭಟನೆ

4-kinigal

Kunigal: ಮನೆ ಬೀಗ ಹೊಡೆದು ಕಳ್ಳತನ

police

Kunigal; ಜೂಜು ಅಡ್ಡೆ ಮೇಲೆ‌‌ ಪೊಲೀಸರ ದಾಳಿ: ನಾಲ್ವರ ಬಂಧನ

death

Kunigal: ವಿದ್ಯುತ್ ಸ್ಪರ್ಶಗೊಂಡು ರೈತ ಸ್ಥಳದಲ್ಲೇ ಮೃತ್ಯು

Crime: ಅಪರಿಚಿತ ವ್ಯಕ್ತಿಗಳಿಂದ ವೃದ್ದೆಗೆ ಮೋಸ; ಮನೆ ಬಾಡಿಗೆ ಪಡೆದು ಚಿನ್ನಾಭರಣ ದೋಚಿ ಪರಾರಿ

Crime: ಅಪರಿಚಿತ ವ್ಯಕ್ತಿಗಳಿಂದ ವೃದ್ದೆಗೆ ಮೋಸ; ಮನೆ ಬಾಡಿಗೆ ಪಡೆದು ಚಿನ್ನಾಭರಣ ದೋಚಿ ಪರಾರಿ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

jds

JDS: ಮೈತ್ರಿಗೆ ಮುನಿಸು: ಶಾಸಕರು, ನಾಯಕರಿಗೆ ಅಸಮಾಧಾನ ಮೂಡಿಸಿದ ಗೆಳೆತನ

exam

PUC ಗೆ ಆಂತರಿಕ ಅಂಕ: ಪ್ರಶ್ನೆಪತ್ರಿಕೆಗೆ ಹೊಸ ರೂಪ

CONGRESS FLAG IMP

Congress: ಸಿಎಂ, ಡಿಸಿಎಂ ಚರ್ಚೆ ಸಲ್ಲದು: ಹೈಕಮಾಂಡ್‌

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Modi

Swatchhata Abhiyan: ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.