ಕೊರಟಗೆರೆ : ಹೆಜ್ಜೇನು ದಾಳಿಗೆ ನಿವೃತ್ತ ಗ್ರಾಮ ಪಂಚಾಯತ್ ಕಾರ್ಯದರ್ಶಿ ಸಾವು
Team Udayavani, May 27, 2022, 8:02 PM IST
ಕೊರಟಗೆರೆ : ತಾಲೂಕಿನ ಕೋಳಾಲ ಹೋಬಳಿಯ ಇರಕಸಂದ್ರ ಗ್ರಾಮದ ಬಳಿ ಹೆಜ್ಜೇನು ದಾಳಿಯಲ್ಲಿ ನಿವೃತ್ತ ಗ್ರಾಮ ಪಂಚಾಯತ್ ಕಾರ್ಯ ದರ್ಶಿ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಹುಲವಂಗಲ ಗ್ರಾಮದ ಕೃಷ್ಣಮೂರ್ತಿ (52) ಮೃತಪಟ್ಟ ದುರ್ದೈವಿ. ಸಂಕೇನಹಳ್ಳಿ ಗ್ರಾಮದ ಜಯಪ್ರಕಾಶ್, ಪಟ್ಟದೇವರಹಳ್ಳಿಯ ಸೋಮಣ್ಣ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ಚಿದ್ದಾರೆ.
ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಶಾಸಕಡಾ.ಜಿ.ಪರಮೇಶ್ವರ್ ಜಿಲ್ಲಾಸ್ಪತ್ರೆ ವೈದ್ಯರಿಗೆ ಸೂಚಿಸಿದ್ದಾರೆ.
ಬಿಸಿಲಿನ ತಾಪಕ್ಕೆ ಹೆಜ್ಜೇನು ಎದ್ದು,ಕೊರಟಗೆರೆ ಮತ್ತು ಬೆಂಗಳೂರು ಮಾರ್ಗವಾಗಿ ದ್ವಿಚಕ್ರ ವಾಹನಗಳಲ್ಲಿ ಚಲಿಸುತ್ತಿರುವ ನಾಗರಿಕರ ಮೇಲೆ ಏಕಾಏಕಿ ದಾಳಿ ಮಾಡಿವೆ ಎಂದು ತಹಶಿಲ್ದಾರ್ ನಾಹಿದಾ ಜಮ್ ಜಮ್ ತಿಳಿಸಿದರು.
ಈ ಸಂಭಂದ ಕೊಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್ಐ ಮಹಾಲಕ್ಷ್ಮಮ್ಮ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.