Koratagere: ಹಲಸಿನ ಮರದಿಂದ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು

ಊರಿನ ಮುಖಂಡರ ಜೊತೆ ಸೇರಿ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ ತೋಟದ ಮಾಲೀಕ

Team Udayavani, May 9, 2024, 11:13 AM IST

5-koratagere

ಕೊರಟಗೆರೆ: ಹಲಸಿನಕಾಯಿ ಕೀಳಲು ಮರ ಹತ್ತಿದ ಕೂಲಿ ಕಾರ್ಮಿಕ ಮರದಿಂದ ಕಾಲು ಜಾರಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಕೋಳಾಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹುಳಸೊಪ್ಪಿನಹಳ್ಳಿ ಗ್ರಾಮದ ವೆಂಕಟಶಾಮಯ್ಯ ಮಗನಾದ ಮಧುಸೂಧನ್ ಮೃತ ವ್ಯಕ್ತಿ. ತಾಲೂಕಿನ ನೀಲಗೊಂಡನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಅಳಾಲ ಸಂದ್ರ ಗ್ರಾಮದ ತೋಟವೊಂದರ ಹಲಸಿನ ಮರದಿಂದ ಕಾಲು ಜಾರಿ ಬಿದ್ದಿದ್ದು ಮೃತಪಟ್ಟಿದ್ದಾರೆ.

ತೋಟದ ಮಾಲೀಕ ಬಸವರಾಜು ಕೂಲಿ ಕಾರ್ಮಿಕನಿಗೆ ಮರ ಹತ್ತಲ್ಲೂ ಬರದೆ ಇದ್ದರೂ ಮರ ಹತ್ತಿಸಿದ್ದನು. ಕಾಲು ಜಾರಿ ಬಿದ್ದ ಕ್ಷಣದಲ್ಲೇ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿರುವುದನ್ನು ಕಂಡು ಮಾಲೀಕ ಯಾರಿಗೂ ವಿಷಯ ತಿಳಿಸದೇ ತನಗೆ ಸಂಬಂಧವೇ ಇಲ್ಲದ ರೀತಿ ತೋಟದ ಮಾಲೀಕ ವರ್ತಿಸಿದ್ದಾನೆ.

ಪ್ರತಿದಿನವೂ ಕೆಲಸಕ್ಕೆ ಬರುವುದಿಲ್ಲ ಎಂದರೂ ಕೂಡಾ ಬಲವಂತವಾಗಿ ಕರೆದುಕೊಂಡು ಹೋಗಿ ಮಧ್ಯಪಾನ ಮಾಡಿಸಿ ತನ್ನ ತೋಟದಲ್ಲಿ ಮಾಲೀಕ  ಕೆಲಸ ಮಾಡಿಸಿಕೊಳ್ಳುತ್ತಿದ್ದ. ಮರ ಹತ್ತಲು ಬರದೆ ಇದ್ದರೂ ಸಹ ಮರ ಹತ್ತಲೂ ತಿಳಿಸಿದ್ದು ಮರದಿಂದ ಕಾಲು ಜಾರಿ ಬಿದ್ದ ಕ್ಷಣವೇ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬೆ.7.45ರ ಸಮಯ ಈ ಘಟನೆ ನಡೆದಿದ್ದು, ಮಧ್ಯಾಹ್ನ ಕಳೆದರೂ ಯಾರಿಗೂ ಮಾಹಿತಿ ನೀಡದೆ ಊರಿನ ಪ್ರಮುಖ ವ್ಯಕ್ತಿಗಳ ಜೊತೆ ಸೇರಿ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ಊರಿನ ಜನರಿಗೆ ಮಾಹಿತಿ ತಿಳಿಯುತ್ತಿದ್ದಂತೆ ಏನು ಗೊತ್ತಿಲ್ಲದ ಹಾಗೆ ಮಾಲೀಕ ಸ್ಥಳಕ್ಕೆ ಬಂದಿದ್ದನು.

ಕೂಲಿ ಕಾರ್ಮಿಕ ಮಧುಸೂಧನ್ ತನ್ನ ತಾಯಿಯ ಆರೋಗ್ಯ ನೋಡಿಕೊಂಡು ಜೀವನ ಸಾಗಿಸುತ್ತಿದ್ದ. ಆತನ ತಾಯಿ, ಮಗನಿಗೆ ಮದುವೆ ಮಾಡಿ ಸಂತೋಷವನ್ನು ಕಾಣಲು ಕನಸು ಕಟ್ಟಿಕೊಂಡಿದ್ದು ಈಗ ಮಗನ ಸಾವಿನಿಂದ ನೋವು ಅನುಭವಿಸುತ್ತಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ತಾಯಿಯಿಂದ ಮಗನನ್ನು ದೂರ ಮಾಡಿರುವುದಲ್ಲದೇ ಆತನ ಮೇಲೆ ಕಳ್ಳತನದ ಆರೋಪ ಕೂಡಾ ಹಾಕಿದ್ದಾನೆ. ಮೃತನಾದ ಬಳಿಕ ಎರಡು ಲಕ್ಷ ಹಣದ ಆಸೆ ತೋರಿಸಿ ತೋಟದ ಮಾಲೀಕನ ಜೊತೆ ಸೇರಿ ಊರಿನ ಮುಖಂಡರಾದ ಸೀನಪ್ಪ, ಜಯರಾಮಯ್ಯ, ಚಂದ್ರು, ಶ್ರೀನಿವಾಸ್, ಮಂಜಣ್ಣ ಎಂಬವರು ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ್ದು ಪ್ರಕರಣದ ಸಂಪೂರ್ಣ ಮಾಹಿತಿ ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಸ್ಥಳಕ್ಕೆ ಕೋಳಾಲ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪ್ರತಿದಿನ ಮಧುಸೂಧನ್ ತನ್ನ ತೋಟದ ಕೆಲಸಕ್ಕೆ ಬರುತ್ತಿದ್ದ. ನನಗೆ ಹೊರಗಡೆ ತಿಂಡಿ ತಿನ್ನುವ ಅಭ್ಯಾಸವಿಲ್ಲ. ತೋಟಕ್ಕೆ ನೀರು ಬಿಡುವಂತೆ ತಿಳಿಸಿ ಮನೆಗೆ ತೆರಳಿದೆ. ಕೆಲಸಗಾರನಿಗೂ ತಿಂಡಿ ತಂದಾಗ ಅಷ್ಟೋತ್ತಿಗಾಗಲೇ ಆತ ಮರದಡಿ ಬಿದ್ದದ್ದ. ಕೂಡಲೇ ಸ್ನೇಹಿತರಿಗೆ ಕರೆ ಮಾಡಿ ತಿಳಿಸಿದ್ದೇನೆ. ಸ್ವಲ್ಪ ಸಮಯದ ನಂತರವೇ ಈ ಘಟನೆ ಬಗ್ಗೆ ಗೊತ್ತಾಗಿರುವುದು. ನಾನು ಯಾವ ಹಲಸಿನಕಾಯಿ ಕೀಳುವುದಕ್ಕೂ ಹೇಳಿಲ್ಲಾ, ನನಗೆ ಮೊಟ್ಟ ಮೊದಲು ಆರೋಗ್ಯವೇ ಸರಿ ಇಲ್ಲಾ. – ಬಸವರಾಜು , ತೋಟದ ಮಾಲೀಕ

ನನ್ನ ಪತಿ ಸಹ ಮುಂಚೆಯೇ ನಿಧನರಾಗಿದ್ದರು. ಒಬ್ಬನೇ ಮಗನೆಂದು ಬಹಳ ಪ್ರೀತಿಯಿಂದ ಸಾಕಿದ್ದೇ. ನನ್ನ ಮಗ ಕೆಲಸಕ್ಕೆ ಬರುವುದಿಲ್ಲ ಎಂದರೂ ಈ ತೋಟದ ಮಾಲೀಕ ಬಸವರಾಜು ಬಿಡದೇ ಕರೆದುಕೊಂಡು ಹೋಗುತ್ತಿದ್ದ. ನನಗೆ ಕಣ್ಣಿನ ಸಮಸ್ಯೆ ಬೇರೆ ಇತ್ತು. ಇವತ್ತು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇನೆ ಎಂದಿದ್ದನು. ನನಗೆ ಇನ್ಯಾರು ದಿಕ್ಕು. – ರಂಗಮ್ಮ, ಕೂಲಿ ಕಾರ್ಮಿಕನ ತಾಯಿ

ಟಾಪ್ ನ್ಯೂಸ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.