ಕೊರಟಗೆರೆ: ಬೈಕ್ ಗಳ ಮುಖಾಮುಖಿ; ಓರ್ವ ಸಾವು, ತಲೆ ಮರೆಸಿಕೊಂಡ ಇನ್ನೋರ್ವ
Team Udayavani, Aug 21, 2022, 8:58 PM IST
ಕೊರಟಗೆರೆ: ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಯುವಕನೋರ್ವ ಸಾವಿಗೀಡಾಗಿ ಮತ್ತೋರ್ವ ಬೈಕ್ ಸವಾರ ಭಯದಿಂದ ತಲೆಮರೆಸಿಕೊಂಡಿರುವ ಘಟನೆ ಕೊರಟಗೆರೆ ತಾಲೂಕಿನ ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ತಾಲೂಕಿನ ಕೋಳಾಲ ಹೋಬಳಿಯ ಇರಕಸಂದ್ರ ಕಾಲೋನಿಯಲ್ಲಿ ಈ ದುರ್ಘಟನೆ ಜರಗಿದ್ದು, ವಜ್ಜಿನಕುರಿಕೆ ಗ್ರಾಮದ ಶಶಿಕುಮಾರ್ 30 ವರ್ಷ ಈತನು ಬಾರ್ ಬೈಂಡಿಂಗ್ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಬೈಕ್ ಅಪಘಾತದಲ್ಲಿ ಸಾವಿಗೀಡಾದ ದುರ್ದೈವಿಯಾಗಿದ್ದಾನೆ.
ಮೃತ ಶಶಿಕುಮಾರ್ ವಜ್ಜಿನಕುರಿಕೆ ಗ್ರಾಮದ ಕಡೆಯಿಂದ ಕೊರಟಗೆರೆಗೆ ಬರುತ್ತಿರುವಾಗ ಇರಕಸಂದ್ರ ಕಾಲೋನಿ ಬಳಿಯ ಎಲೆರಾಂಪುರ ಕ್ರಾಸ್ ನ ತಿರುವಿನಲ್ಲಿ ಕೊರಟಗೆರೆ ಕಡೆಗೆ ಹೋಗುತ್ತಿದ್ದ ಮುತ್ತುರಾಜು ನಡುವೆ ಎರಡು ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿ ಶಶಿಕುಮಾರ್ ತಲೆಗೆ ತೀವ್ರ ಪೆಟ್ಟಾಗಿ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆ , ತುಮಕೂರು ಸಾರ್ವಜನಿಕ ಆಸ್ಪತ್ರೆ ನಂತರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾನೆ ಎನ್ನಲಾಗಿದೆ.
ಮೃತ ಶಶಿಕುಮಾರ್ ವಜ್ಜಿನಕುರಿಕೆ ಯಿಂದ ಕೊರಟಗೆರೆಗೆ ಬರುತ್ತಿರುವಾಗ ಇರಕಸಂದ್ರ ಕಾಲೋನಿ ಬಳಿ ತಿರುವಿನಲ್ಲಿ ಎದುರಿನಿಂದ ಬರುವ ದ್ವಿಚಕ್ರವಾಹನ ಕಾಣದೆ ಅಪಘಾತ ನಡೆದಿದೆ. ಹೊಸಹಳ್ಳಿ ಗ್ರಾಮದ ಮುತ್ತುರಾಜು ಸಣ್ಣಪುಟ್ಟ ಪೆಟ್ಟಾಗಿ ಶಶಿಕುಮಾರ್ ನ ಸಾವಿನ ಸುದ್ದಿ ಕೇಳಿ ಭಯದಿಂದ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಕೆ ಸುರೇಶ್ ಹಾಗೂ ಪಿಎಸ್ಐ ಮಹಾಲಕ್ಷ್ಮಮ್ಮ ಹೆಚ್ ಎನ್ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು
Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್ಗಳು ಸಕ್ಸಸ್
Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ