ಕೊರಟಗೆರೆ ಬಿಜೆಪಿ; ಕೆ.ಎಂ.ಮುನಿಯಪ್ಪ ಬೆಂಬಲಕ್ಕೆ ನಾನಿದ್ದೇನೆ: ಜಿ.ಮರೀಸ್ವಾಮಿ


Team Udayavani, Dec 15, 2022, 6:36 PM IST

1-sasadsa

ಕೊರಟಗೆರೆ: ಬಿಜೆಪಿ ಮುಖಂಡ ಕೆ.ಎಂ.ಮುನಿಯಪ್ಪ ಕೊರಟಗೆರೆ ಕ್ಷೇತ್ರದಲ್ಲಿ ಕಳೆದ 4 ವರ್ಷದಿಂದ ಜನಸೇವೆ ಮಾಡಿದ್ದಾರೆ. ಕೆ.ಎಂ.ಮುನಿಯಪ್ಪ ಪರವಾಗಿ ನನ್ನ ಬೆಂಬಲ ಇದ್ದೇ ಇರುತ್ತದೆ.. ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ತಳ ಮಟ್ಟದಿಂದ ಸಂಘಟನೆಗೆ ಮುಂದಾಗಿ ಕೊರಟಗೆರೆಯಲ್ಲಿ ಬಿಜೆಪಿ ಪಕ್ಷದ ಗೆಲುವಿಗೆ ಶ್ರಮಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಮಾಜಿ ಜಿಪಂ ಅಧ್ಯಕ್ಷ ಜಿ.ಮರೀಸ್ವಾಮಿ ಮನವಿ ಮಾಡಿದರು.

ಕೊರಟಗೆರೆ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಮುಖಂಡ ಕೆ.ಎಂ.ಮುನಿಯಪ್ಪ ಮತ್ತು ಟಿ.ಡಿ.ತಿಮ್ಮಜ್ಜ ನೇತೃತ್ವದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಕೋರೊನಾ ರೋಗ ಹರಡಿದಾಗ ಕೊರಟಗೆರೆ ಕ್ಷೇತ್ರದ ಜನರಿಗೆ ಬಿಜೆಪಿ ಮುಖಂಡ ಕೆ.ಎಂ.ಮುನಿಯಪ್ಪ 30 ಸಾವಿರ ಆಹಾರದ ಕಿಟ್ ಮತ್ತು ವೈದ್ಯಕೀಯ ನೇರವು ನೀಡಿದ್ದಾರೆ. ಕೊರಟಗೆರೆ ಕ್ಷೇತ್ರದ ಜನರಿಂದ ಮುನಿಯಪ್ಪನಿಗೆ ಪ್ರೀತಿ ಮತ್ತು ವಾತ್ಸಲ್ಯ ದೊರೆತಿದೆ. ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆ-ಸಾಧನೆಗಳನ್ನು ಗ್ರಾಮೀಣ ಜನರಿಗೆ ತಲುಪಿಸುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡಬೇಕಿದೆ ಎಂದು ತಿಳಿಸಿದರು.

ತುಮಕೂರು ನಗರ, ತಿಪಟೂರು, ತುರುವೇಕೆರೆ, ಚಿಕ್ಕನಾಯನಹಳ್ಳಿ, ಶಿರಾ ಕ್ಷೇತ್ರವು ಬಿಜೆಪಿ ತೆಕ್ಕಿಯಲ್ಲಿದೆ. 2023ಕ್ಕೆ ತುಮಕೂರು ಗ್ರಾಮಾಂತರ, ಕೊರಟಗೆರೆ, ಮಧುಗಿರಿ, ಪಾವಗಡ, ಗುಬ್ಬಿ ಮತ್ತು ಕುಣಿಗಲ್ ಕ್ಷೇತ್ರದಲ್ಲಿಯು ಬಿಜೆಪಿ ಪಕ್ಷವು ಗೆಲುವು ಸಾಧಿಸಲಿದೆ. ಬಿಜೆಪಿ ಪಕ್ಷದ ಗೆಲುವಿಗೆ ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳೇ ಸಹಕಾರಿ ಆಗಲಿದೆ ಎಂದು ಜಿ.ಮರೀಸ್ವಾಮಿ ಹೇಳಿದರು.

ಕೊರಟಗೆರೆ ಕ್ಷೇತ್ರದ ಬಿಜೆಪಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಕೆ.ಎಂ.ಮುನಿಯಪ್ಪ ಮಾತನಾಡಿ ನಾನು ಕಳೆದ ೪ವರ್ಷದಿಂದ ಕೊರಟಗೆರೆ ಕ್ಷೇತ್ರದಲ್ಲಿ ಸಮಾಜ ಸೇವೆ ಮಾಡುತ್ತಿದ್ದೇನೆ. ಮಾಜಿ ಸಿಎಂ ಯಡಿಯೂರಪ್ಪ ಅಪ್ಪಾಜಿಯ ಆರ್ಶಿವಾದ ನನ್ನ ಮೇಲಿದೆ. ಬಿಜೆಪಿ ಪಕ್ಷದ ಹಿರಿಯರ ತಿರ್ಮಾನಕ್ಕೆ ನಾನು ಬದ್ದನಿದ್ದೇನೆ. ಬಿಜೆಪಿ ಪಕ್ಷದ ಸಂಘಟನೆಯೇ ಕಾರ್ಯಕರ್ತರ ಸಮಾವೇಶದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಕೆ.ಎಂ.ಮುನಿಯಪ್ಪ ಶಕ್ತಿ ಪ್ರದರ್ಶನ

ಮಾರುತಿ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ೫ಸಾವಿರಕ್ಕೂ ಅಧಿಕ ಕಾರ್ಯಕರ್ತರು ಆಗಮಿಸಿದ್ದರು. ಸಭಾಂಗಣ ಮತ್ತು ಹೊರಾಂಗಣ ಸ್ಥಳದಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ತುಂಬಿದ್ದರು. ಬಿಜೆಪಿ ಮುಖಂಡ ಕೆ.ಎಂ.ಮುನಿಯಪ್ಪ ಪರವಾಗಿ ಜೈಕಾರ ಮತ್ತು ಟಿಕೇಟ್ ನೀಡುವಂತೆ ಜಿ.ಮರೀಸ್ವಾಮಿಗೆ ಸಾವಿರಾರು ಕಾರ್ಯಕರ್ತರು ಒತ್ತಾಯ ಮಾಡಿದರು.

20 ಜನ ಕಾರ್ಯಕರ್ತರ ರಾಜನಾಮೆ

20 ಜನ ಬಿಜೆಪಿ ಕಾರ್ಯಕರ್ತರ ರಾಜಿನಾಮೆಯು ಪಕ್ಷದ ಹಿನ್ನಡೆಗೆ ಪ್ರಮುಖ ಕಾರಣ. ಕೋಟ್ಯಂತರ ಕಾರ್ಯಕರ್ತರು ಇರುವ ಬಿಜೆಪಿ ರಾಷ್ಟ್ರೀಯ ಶಿಸ್ತಿನ ಪಕ್ಷವಾಗಿದೆ. ಕುಟುಂಬದಲ್ಲಿ ಒಡಕು ಮೂಡುವುದು ಸರ್ವೇ ಸಾಮಾನ್ಯ. ತಿಮ್ಮಜ್ಜ, ಪ್ರಸನ್ನ ಮತ್ತು ಹನುಮಂತರಾಜು ರಾಜೀನಾಮೆ ಬಗ್ಗೆ ಗೊಂಬಲ ಬೇಡ ಮತ್ತೇ ಮೂವರನ್ನು ಪಾರ್ಟಿಗೆ ಸೇರಿಸುವ ಪ್ರಯತ್ನ ಮಾಡೇ ಮಾಡ್ತೀನಿ ಎಂದು ಬಿಜೆಪಿ ಮುಖಂಡ ಜಿ.ಮರೀಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಚೇತನ್, ಟಿ.ಎಸ್.ಕೃಷ್ಣಮೂರ್ತಿ, ತಿಮ್ಮಜ್ಜ, ಹನುಮಂತರಾಯಪ್ಪ, ಪ್ರಸನ್ನಕುಮಾರ್, ಪ್ರಕಾಶ್‌ಬಾಬು, ಚಂದ್ರಣ್ಣ, ದೊಡ್ಡಕಾಯಪ್ಪ, ಮೀಸೆ ಮಂಜುನಾಥ, ನಟರಾಜು, ಉಮೇಶ್‌ಚಂದ್ರ, ಗೋವಿಂದರೆಡ್ಡಿ, ಸುರೇಶ್, ಬಾಲರಾಜು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.