ಕೊರಟಗೆರೆ : ಭಾರಿ ಮಳೆಗೆ ಕುಸಿದು ಬಿದ್ದ ಸೇತುವೆ, ವಾಹನ ಸಂಚಾರ ಸ್ಥಗಿತ


Team Udayavani, Aug 26, 2022, 6:14 PM IST

ಕೊರಟಗೆರೆ : ಭಾರಿ ಮಳೆಗೆ ಕುಸಿದು ಬಿದ್ದ ಸೇತುವೆ,  ವಾಹನ ಸಂಚಾರ ಸ್ಥಗಿತ

ಕೊರಟಗೆರೆ : ತಾಲ್ಲೂಕಿನ ಗೊರವನಹಳ್ಳಿ -ತೀತಾ ಗ್ರಾಮಗಳ ಮಧ್ಯೆ ಹಾದು ಹೋಗಿರುವ ತೀತಾ ಜಲಾಶಯದ ಕೋಡಿ ಹಳ್ಳಕ್ಕೆ ನಿರ್ಮಿಸಿರುವ ರಸ್ತೆಯ ಸೇತುವೆ ಕುಸಿದು ವಾಹನ ಸಂಚಾರ ಸ್ಥಗಿತಗೊಂಡಿದೆ.

ಕೊರಟಗೆರೆಯಿಂದ ದೊಡ್ಡಬಳ್ಳಾಪುರ ರಸ್ತೆ ಇದಾಗಿದ್ದು, ತಾಲ್ಲೂಕಿನಲ್ಲಿ ಸುರಿದ ಅತಿಯಾದ ಮಳೆ ಹಾಗೂ ತೀತಾ ಜಲಾಶಯವು ಕೋಡಿ ಬಿದ್ದು ನೀರು ರಸ್ತೆಯ ಮೇಲೆ ಹರಿದು, ಸೇತುವೆಯಲ್ಲಿ ಕುಸಿತ ಕಂಡು ಬಂದಿದೆ. ಇದರಿಂದ ಕೋಳಾಲ ಮಾರ್ಗವಾಗಿ ಗೊರವನಹಳ್ಳಿ ಲಕ್ಷ್ಮಿ ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ಹಾಗೂ ಮಾವತ್ತೂರು ದೊಡ್ಡಸಾಗ್ಗೆರೆ ಸುತ್ತಮುತ್ತಲ ಭಾಗದ ಜನರು ಕೊರಟಗೆರೆಗೆ ಪ್ರಯಾಣಿಸಲು ತೀವ್ರ ತೊಂದರೆ ಉಂಟಾಗಿದ್ದು, ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಿದೆ.

ಕೂಡಲೇ ಕುಸಿದಿರುವ ಸೇತುವೆಯನ್ನು ದುರಸ್ಥಿಗೊಳಿಸಿ ಈ ಭಾಗದ ಜನರು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಂಪರ್ಕಿಸುವ ಈ ರಸ್ತೆಯ ಸೇತುವೆ ಕುಸಿದಿರುವ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆಯ ಎಇಇ ಮಲ್ಲಿಕಾರ್ಜುನಯ್ಯ ಭೇಟಿ ನೀಡಿ ಪರಿಶೀಲಿಸಿ ಆದಷ್ಟು ಬೇಗ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತೆವೆ ಎಂದು ತಿಳಿಸಿದ್ದಾರೆ.

ಕಳೆದ ತಿಂಗಳಲ್ಲಿ ತೀತಾ ಜಲಾಶಯ ಕೋಡಿ ಬಿದ್ದು ಈ ಸೇತುವೆಯ ಮೇಲೆ ನೀರು ಹರಿದಿತ್ತು. ಆದರೆ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ಸೇತುವೆ ಬಾಗಶ಼ಃ ಕುಸಿದಿದ್ದು ಈಗ ಸಂಪೂರ್ಣ ಕುಸಿದು ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ . ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪನವರ ಕಾಲದಲ್ಲಿ ನಿರ್ಮಾಣಗೊಂಡ ತೀತಾ ಜಲಾಶಯ . ಕಳೆದ 20ವರ್ಷಗಳ ಹಿಂದೆ ನಿರ್ಮಾಣ ಮಾಡಿರುವ ಸೇತುವೆ . ಸರಿಯಾದ ನಿರ್ವಹಣೆ ಇಲ್ಲದೆ ಸೇತುವೆ ಕುಸಿತವಾಗಿದೆ ಎಂದು ಸ್ಥಳಿಯರ ಆರೋಪವಾಗಿದೆ.

ಇದನ್ನೂ ಓದಿ : ನಿರ್ಲಕ್ಷ್ಯ ವಹಿಸಿದ್ದ ವೈದ್ಯ-ಸಿಬ್ಬಂದಿಗೆ 15 ಲಕ್ಷ ರೂ ದಂಡ

ಕಾರ್ಮಿಕರು,ತುಮಕೂರು, ಕೊರಟಗೆರೆ ಸೇರಿದಂತೆ ಶಾಲಾ ಕಾಲೇಜುಗಳಿಗೆ ಹೊಗುವ ವಿದ್ಯಾರ್ಥಿಗಳು,ಹಾಗೂ ತರಕಾರಿ,ಹೂವಿನ ಮಾರುಕಟ್ಟೆಗೆ ಹೊಗುವ ರೈತರಿಗೆ ಈ ಸೇತುವೆಯ ಕುಸಿತದಿಂದ ಬಹಳ ತೊಂದರೆಯಾಗುತ್ತಿದೆ ಆದ್ದರಿಂದ ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಸರ್ಕಾರ ಗಮನ ಹರಿಸಿ ಈ ಭಾಗದ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಆಗ್ರಹಿಸಿದ್ದಾರೆ.

ಸೇತುವೆ ಕುಸಿದು ಬಿದ್ದ ಪರಿಣಾಮವಾಗಿ
ಗೊರವನಹಳ್ಳಿ ಮತ್ತು ತೀತಾ ಗ್ರಾಮಗಳ ಪ್ರಮುಖ ಸಂಪರ್ಕ ರಸ್ತೆ ಕಡಿತ ಗೊಂಡಿದೆ. ದೊಡ್ಡಸಾಗ್ಗರೆ, ಮಾವತ್ತೂರು ಮತ್ತು ಕೋಳಾಲ ಗ್ರಾಮಗಳಿಗೆ ಪ್ರಯಾಣಿಸುವ ರೈತರು ಕಾರ್ಮಿಕರು ಶಾಲೆಯ ಮಕ್ಕಳು ಕಾಲೇಜು ವಿದ್ಯಾರ್ಥಿಗಳು ಪ್ರತಿಯೊಬ್ಬರಿಗೂ ಅನುಕೂಲವಾಗುವ ರಸ್ತೆ.ಇದಾಗಿದೆ. ಮಹಾಲಕ್ಷ್ಮಿ ತಾಯಿ ಸನ್ನಿಧಿಗೆ ಬರುವ ಭಕ್ತರು ಕೋಲಾರ ದೊಡ್ಡಬಳ್ಳಾಪುರ ಈ ಭಾಗದಿಂದ ಬರುವ ಇದೇ ರಸ್ತೆಯನ್ನು ಉಪಯೋಗಿಸುತ್ತಿದ್ದಾರೆ ಈ.ರಸ್ತೆಯ ದುರಸ್ತಿಯನ್ನು ತತ್‍ಕ್ಷಣ ಮಾಡಬೇಕು.ಇದೇ ತೀತಾ ಜಲಾಶಯದ ಕೋಡಿ ನೀರು ತುಂಬುಗಾನಹಳ್ಳಿ ಗ್ರಾಮದ ಹತ್ತಿರ ಹರಿಯುತ್ತಿರುವುದರಿಂದ ಈ ಗ್ರಾಮದ ಮಕ್ಕಳು ಶಾಲೆಗೆ ಹೋಗುವುದಕ್ಕೆ ಸಾಧ್ಯವಾಗುತ್ತಿಲ್ಲ. ಮರು ಸಂಪರ್ಕ ಒದಗಿಸುವಕ್ಕೆ ಹಾಗೂ ಪರ್ಯಾಯವಾಗಿ ಪಕ್ಕದಲ್ಲಿ ಓಡಾಡಲು ಅನುಕೂಲ ಕಲ್ಪಿಸಬೇಕು. ಹೊಸ ಬ್ರಿಡ್ಜ್ ಮಾಡಲು ತಡವಾಗುವುದರಿಂದ, ಪಕ್ಕದಲ್ಲಿ ತಾತ್ಕಾಲಿಕವಾಗಿ ಮರು ಸಂಪರ್ಕ ಒದಗಿಸಬೇಕು ಎಂದು ನಾವು ಸರ್ಕಾರವನ್ನು ಒತ್ತಾಯ ಮಾಡುತ್ತೇವೆ.ಮುಂದಿನ ದಿನಗಳಲ್ಲಿ ಅವರು ಯಾವ ರೀತಿ ಕ್ರಮ ಕೈಕೊಳ್ಳುತ್ತಾರೆ ಎಂಬುದನ್ನು ನೋಡಿಕೊಂಡು ರೈತರು ಮತ್ತು ನಮ್ಮಪಕ್ಷದ ಮುಖಂಡರ ಜೊತೆ ಚರ್ಚಿಸಿ ಮುಂದಿನ ತಿರ್ಮಾನ ಕೈಗೊಳ್ಳಲಾಗುವುದು.

– ಮಾಜಿ ಶಾಸಕ ಪಿ.ಆರ್. ಸುದಾಕರ್ ಲಾಲ್

ಲಘು ವಾಹನ ಓಡಾಡಲು ಪಕ್ಕದಲ್ಲಿ ಪರ್ಯಾಯವಾಗಿ ವ್ಯವಸ್ಥೆ
ಭಾರೀ ವಾಹನ ಓಡಾಡಲು ಲಿಂಗಾಪುರ- ಹೊಳವನಹಳ್ಳಿ ಮಾರ್ಗವಾಗಿ ಓಡಾಡಬಹುದು. ಕೋಡಿಯ ನೀರು ನಿಲ್ಲಬೇಕು ನಿಲ್ಲದೇ ಹೊರತು ಏನು ಮಾಡಲಿ ಕ್ಕಾಗಲ್ಲ.ಮಳೆ ನಿಂತರೆ ಕೆಲಸ ಅಚ್ಚುಕಟ್ಟಾಗಿ ಬ್ರಿಡ್ಜ್ ನಿರ್ಮಾಣ ಮಾಡಬಹುದು. ನಾವು ಕ್ರಯಾ ಯೋಜನೆ ತಯಾರಿಸಿ ಜಿಲ್ಲಾಧಿಕಾರಿ ಗಳ ಅನುದಾನ ಬಳಸಿಕೊಂಡು ನಿರ್ಮಾಣ ಮಾಡಲು ವ್ಯವಸ್ಥೆ ಮಾಡುತ್ತೇವೆ.

– ಮಲ್ಲಿಕಾರ್ಜುನ್ ಎಇಇ ಪಿಡಬ್ಲ್ಯೂಡಿ ಇಲಾಖೆ ಕೊರಟಗೆರೆ.

ಈ ಭಾರಿ ನಮ್ಮ ತಾಲ್ಲೂಕಿನಲ್ಲಿ ಹೆಚ್ಚು ಉತ್ತಮ ಮಳೆಯಾಗಿದೆ. ಇನ್ನೂ‌ ಮಳೆ ಹೆಚ್ಚಾಗುವ ಸಾದ್ಯತೆ ಇದೆ. ಅದಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ.ಕೆರೆಗಳ ನಿರ್ವಹಣೆ ಜವಾಬ್ದಾರಿ ಯನ್ನು ಜಿಪಂಗೆ ನೀಡಿದ್ದಾರೆ. ಅದರೆ ಅವರು ಗ್ರಾಪಂಗಳಿಗೆ ವರ್ಗಾವಣೆ ಮಾಡಿದ್ದಾರೆ.ಗ್ರಾಪಂಗಳಲ್ಲಿ ಹಣ ಕೊರತೆ ಇರುವುದರಿಂದ ಸರಿಯಾಗಿ ನಿರ್ವಹಣೆ ಆಗುತ್ತಿಲ್ಲ.ಶೀಘ್ರದಲ್ಲೇ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇನೆ.

– ಮಾಜಿ ಉಪ ಮುಖ್ಯಮಂತ್ರಿಹಾಗೂ ಶಾಸಕ ಡಾ.ಜಿ.ಪರಮೇಶ್ವರ ಕೊರಟಗೆರೆ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.