ಕೊರಟಗೆರೆ: ಅತ್ಯಾಚಾರ ಎಸಗಿ 45 ವರ್ಷದ ಮಹಿಳೆಯ ಬರ್ಬರ ಹತ್ಯೆ
Team Udayavani, Apr 29, 2023, 10:02 PM IST
ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಹೋಬಳಿಯ ಚಿಕ್ಕಾವಳ್ಳಿ ಗ್ರಾಮದಲ್ಲಿ ಒಂಟಿ ಮಹಿಳೆಯನ್ನು ಹಿಂಬಾಲಿಸಿಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಬಲತ್ಕಾರ ಮಾಡಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಸಾವಿತ್ರಮ್ಮ(45) ರಾಗಿ ಹಿಟ್ಟು ಮಾಡಿಸಲು ಹೋಗುವ ಸಂದರ್ಭದಲ್ಲಿ ಹಿಂಬಾಲಿಸಿ ಆಕೆಯನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ತಿಳಿದುಬಂದಿದೆ.
ವಿಷಯ ತಿಳಿದ ತತ್ ಕ್ಷಣ ಕೊರಟಗೆರೆ ಠಾಣಾ ಪೊಲೀಸರು, ಶ್ವಾನದಳದ ತಂಡದೊಂದಿಗೆ ಬಂದು ಸ್ಥಳಪರಿಶೀಲನೆ ಮಾಡಿದ ಬಳಿಕ ಆರೋಪಿ ಮಲ್ಲಿಕಾರ್ಜುನ ಎಂಬಾತನನ್ನು ಪತ್ತೆ ಹಚ್ಚಲು ಸಹಾಯವಾಗಿದೆ.
ಚಿಕ್ಕಾವಳ್ಳಿ ಗ್ರಾಮದವನೇ ಆದ ಮಲ್ಲಿಕಾರ್ಜುನ(47) ಕೃತ್ಯ ಎಸಗಿದ್ದಾನೆ ಎನ್ನಲಾಗಿದ್ದು, ಸಾವಿತ್ರಮ್ಮನವರ ಸಂಬಂಧಿಯಾಗಿದ್ದು ಜಮೀನು ವಿಚಾರದಲ್ಲಿ ಇಬ್ಬರಿಗೆ ಆಗಾಗ ಕ್ಯಾತೆ ನಡೆಯುತ್ತಿತ್ತು ಎನ್ನಲಾಗಿದ್ದು, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದೆ. ಸತ್ಯಾಸತ್ಯತೆ ತನಿಖೆಯಿಂದ ಹೊರಬರಬೇಕಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ತುಮಕೂರು ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಮಧುಗಿರಿ ಉಪ ಅಧೀಕ್ಷಕ ವೆಂಕಟೇಶ್ ನಾಯ್ಡು,ಸಿಪಿಐ ಸುರೇಶ್ ಕೆ, ಪಿಎಸ್ ಐ ಪ್ರದೀಪ್ ಸಿಂಗ್, ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ