ಕೊರಟಗೆರೆ: ಪ್ರೀತಿಗೆ ಅಡ್ಡಿಯಾದ ಗಂಡನನ್ನೇ ಮುಗಿಸಲು 20 ಸಾವಿರ ರೂ. ಸುಪಾರಿ ನೀಡಿದ ಪತ್ನಿ…
ಪ್ರೀಯಕರನ ಜೊತೆ ಸೇರಿ ಗಂಡನಿಗೆ ಮುಹೂರ್ತ ಫಿಕ್ಸ್ ಮಾಡಿದ ಹೆಂಡತಿ
Team Udayavani, Dec 1, 2022, 8:49 PM IST
ಕೊರಟಗೆರೆ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡನನ್ನೇ ತನ್ನ ಪ್ರೀಯತಮನ ಜೊತೆ ಸೇರಿ 20 ಸಾವಿರಕ್ಕೆ ಬೆಂಗಳೂರು ಮೂಲದ ಯುವಕನಿಗೆ ಸುಫಾರಿ ನೀಡಿ ಮಧುಗಿರಿ ಬೈಪಾಸ್ ರಸ್ತೆಯಲ್ಲಿ ಕೊಲೆ ಮಾಡಿಸಿ ಕೊರಟಗೆರೆ ರೈತನ ಜಮೀನಿನಲ್ಲಿ ಗುಂಡಿ ತೋಡಿ ಮುಚ್ಚಿಸಿರುವ ಘಟನೆ ಸೋಮವಾರ ನಡೆದಿದೆ.
ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಬೈಚಾಪುರ ಗ್ರಾಪಂ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದ ರೈತ ಕೊಲ್ಲಪ್ಪನ ಜಮೀನಿನಲ್ಲಿ ಘಟನೆ ನಡೆದಿದೆ. ಕೊಲೆಯಾದ ಮೃತದೇಹವನ್ನು ಗುರುತಿಸಲಾಗಿದೆ. ದೊಡ್ಡಬಳ್ಳಾಪುರ ತಾಲೂಕು ದುರ್ಗದಹಳ್ಳಿಯ ಸುರೇಶ್(36) ಕೊಲೆಯಾದ ದುರ್ದೈವಿ.
ಕೊಲೆಯಾದ ಸುರೇಶ್ನ ಮಡದಿ ವೆಂಕಟಲಕ್ಷ್ಮಮ್ಮ ಜೊತೆ ಬಸವನಹಳ್ಳಿ ಗ್ರಾಮದ ಲೊಕೇಶ್(27) ಜೊತೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಮುಗಿಸಲು ಪ್ರೀಯಕರ ಜೊತೆ ಸೇರಿ ಮತ್ತೋರ್ವನಿಗೆ 20 ಸಾವಿರ ಸುಫಾರಿ ಮಾತನಾಡಿ 5 ಸಾವಿರ ಮುಂಗಡ ಪಡೆದು ಕೊಲೆ ಮಾಡಲಾಗಿದೆ.
ಮಧುಗಿರಿ ಬೈಪಾಸ್ ರಸ್ತೆಯಲ್ಲಿ ಎಣ್ಣೆ ಕುಡಿಸಿ ಲೊಕೇಶ್ ಮತ್ತು ಸ್ನೇಹಿತರು ಕೊಲೆ ಮಾಡಿದ್ದಾರೆ. ಕೊಲೆಯ ಸಂಬಂಧ ಬಸವನಹಳ್ಳಿಯ ಲೊಕೇಶ್, ಗೌರಿಬಿದನೂರಿನ ವೆಂಕಟಲಕ್ಷ್ಮಮ್ಮ, ಚಿನ್ನಮ್ಮ ಮತ್ತು ನವೀನ್ ಎಂಬಾತನನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳಿಗಾಗಿ ಕೊರಟಗೆರೆ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತೀದೆ.
ಮಧುಗಿರಿ ಬೈಪಾಸ್ ಬಳಿ ಕೊಲೆ ಮಾಡಿದ ಸುರೇಶನನ್ನು ಕೊರಟಗೆರೆಯ ಬಸವನಹಳ್ಳಿಯ ಬಳಿ ಮುಚ್ಚಲಾಗಿದೆ. ಸ್ಥಳಕ್ಕೆ ಮಧುಗಿರಿ ಡಿವೈಎಸ್ಪಿ ವೆಂಕಟೇಶನಾಯ್ಡು, ಕೊರಟಗೆರೆ ಸಿಪಿಐ ಸುರೇಶ್, ಪಿಎಸೈ ಚೇನತ್ಗೌಡ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ