ಕೊರಟಗೆರೆ: ಪ್ರೀತಿಗೆ ಅಡ್ಡಿಯಾದ ಗಂಡನನ್ನೇ ಮುಗಿಸಲು 20 ಸಾವಿರ ರೂ. ಸುಪಾರಿ ನೀಡಿದ ಪತ್ನಿ…
ಪ್ರೀಯಕರನ ಜೊತೆ ಸೇರಿ ಗಂಡನಿಗೆ ಮುಹೂರ್ತ ಫಿಕ್ಸ್ ಮಾಡಿದ ಹೆಂಡತಿ
Team Udayavani, Dec 1, 2022, 8:49 PM IST
ಕೊರಟಗೆರೆ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡನನ್ನೇ ತನ್ನ ಪ್ರೀಯತಮನ ಜೊತೆ ಸೇರಿ 20 ಸಾವಿರಕ್ಕೆ ಬೆಂಗಳೂರು ಮೂಲದ ಯುವಕನಿಗೆ ಸುಫಾರಿ ನೀಡಿ ಮಧುಗಿರಿ ಬೈಪಾಸ್ ರಸ್ತೆಯಲ್ಲಿ ಕೊಲೆ ಮಾಡಿಸಿ ಕೊರಟಗೆರೆ ರೈತನ ಜಮೀನಿನಲ್ಲಿ ಗುಂಡಿ ತೋಡಿ ಮುಚ್ಚಿಸಿರುವ ಘಟನೆ ಸೋಮವಾರ ನಡೆದಿದೆ.
ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಬೈಚಾಪುರ ಗ್ರಾಪಂ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದ ರೈತ ಕೊಲ್ಲಪ್ಪನ ಜಮೀನಿನಲ್ಲಿ ಘಟನೆ ನಡೆದಿದೆ. ಕೊಲೆಯಾದ ಮೃತದೇಹವನ್ನು ಗುರುತಿಸಲಾಗಿದೆ. ದೊಡ್ಡಬಳ್ಳಾಪುರ ತಾಲೂಕು ದುರ್ಗದಹಳ್ಳಿಯ ಸುರೇಶ್(36) ಕೊಲೆಯಾದ ದುರ್ದೈವಿ.
ಕೊಲೆಯಾದ ಸುರೇಶ್ನ ಮಡದಿ ವೆಂಕಟಲಕ್ಷ್ಮಮ್ಮ ಜೊತೆ ಬಸವನಹಳ್ಳಿ ಗ್ರಾಮದ ಲೊಕೇಶ್(27) ಜೊತೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಮುಗಿಸಲು ಪ್ರೀಯಕರ ಜೊತೆ ಸೇರಿ ಮತ್ತೋರ್ವನಿಗೆ 20 ಸಾವಿರ ಸುಫಾರಿ ಮಾತನಾಡಿ 5 ಸಾವಿರ ಮುಂಗಡ ಪಡೆದು ಕೊಲೆ ಮಾಡಲಾಗಿದೆ.
ಮಧುಗಿರಿ ಬೈಪಾಸ್ ರಸ್ತೆಯಲ್ಲಿ ಎಣ್ಣೆ ಕುಡಿಸಿ ಲೊಕೇಶ್ ಮತ್ತು ಸ್ನೇಹಿತರು ಕೊಲೆ ಮಾಡಿದ್ದಾರೆ. ಕೊಲೆಯ ಸಂಬಂಧ ಬಸವನಹಳ್ಳಿಯ ಲೊಕೇಶ್, ಗೌರಿಬಿದನೂರಿನ ವೆಂಕಟಲಕ್ಷ್ಮಮ್ಮ, ಚಿನ್ನಮ್ಮ ಮತ್ತು ನವೀನ್ ಎಂಬಾತನನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳಿಗಾಗಿ ಕೊರಟಗೆರೆ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತೀದೆ.
ಮಧುಗಿರಿ ಬೈಪಾಸ್ ಬಳಿ ಕೊಲೆ ಮಾಡಿದ ಸುರೇಶನನ್ನು ಕೊರಟಗೆರೆಯ ಬಸವನಹಳ್ಳಿಯ ಬಳಿ ಮುಚ್ಚಲಾಗಿದೆ. ಸ್ಥಳಕ್ಕೆ ಮಧುಗಿರಿ ಡಿವೈಎಸ್ಪಿ ವೆಂಕಟೇಶನಾಯ್ಡು, ಕೊರಟಗೆರೆ ಸಿಪಿಐ ಸುರೇಶ್, ಪಿಎಸೈ ಚೇನತ್ಗೌಡ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುದೀಪ್ ಭೇಟಿಯಾದ ಡಿಕೆ ಶಿವಕುಮಾರ್: ಕಾಂಗ್ರೆಸ್ ಪಕ್ಷ ಸೇರುತ್ತಾರಾ ಕಿಚ್ಚ?
ನಿನ್ನೆ ರಾತ್ರಿಯೇ ಅಮಿತ್ ಶಾ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ರಮೇಶ ಜಾರಕಿಹೊಳಿ
ಎಂ.ಬಿ.ಪಾ- ಪರಂ ಗರಂ: ಕಾಂಗ್ರೆಸ್ ಪ್ರಚಾರ ಸಮಿತಿ – ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪರಂ ರಾಜೀನಾಮೆ ವದಂತಿ
ಜನಪ್ರಿಯತೆಗೆ ಚಿತ್ತ, ಸಂಪನ್ಮೂಲ ಎತ್ತ
ಟ್ರಾಫಿಕ್ ದಂಡ ಪಾವತಿಗೆ ಭರ್ಜರಿ ರಿಯಾಯಿತಿ
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಸೂಕ್ತ ಸ್ಥಳಾವಕಾಶ ನೀಡಿದರೆ ರಬಕವಿ ಬನಹಟ್ಟಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ: ಮುನೇನಕೊಪ್ಪ
ಆರ್ಹಾಳ: ಭೂಮಿ ಪೋಡಿ ಮುಕ್ತ ಮಾಡದಿದ್ದರೆ ಮತದಾನ ಬಹಿಷ್ಕಾರ
ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು; ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು
ಸಾಮಾಜಿಕ ಉದ್ಯಮಕ್ಕೆ ಹುಬ್ಬಳ್ಳಿ ಮಾಡೆಲ್; ದೇಶಪಾಂಡೆ ಫೌಂಡೇಶನ್ ಅಭಿವೃದ್ಧಿ ಸಂವಾದ’ ಸಮಾವೇಶ
ಆರೋಗ್ಯವೇ ಭಾಗ್ಯ…ರುಚಿಕರವಾದ ವೆಜ್ ಗೋಲ್ಡ್ ಕಾಯಿನ್ ರೆಸಿಪಿ