Koratagere : ದಸರಾ ಹಬ್ಬಕ್ಕೆ ಗೊಂಬೆಗಳ ಸಂಭ್ರಮದ ಮೆರುಗು

ಮನೆಯಲ್ಲೇ 1ಸಾವಿರಕ್ಕೂ ಅಧಿಕ ಗೊಂಬೆಗಳ ಪ್ರತಿಷ್ಠಾಪನೆ

Team Udayavani, Oct 22, 2023, 6:58 PM IST

1-ssa-dsa

ಕೊರಟಗೆರೆ:ಕಲ್ಪತರು ಜಿಲ್ಲೆಯಲ್ಲಿ ಮೈಸೂರು ಮತ್ತು ಚನ್ನಪಟ್ಟಣದ ದಸರಾ ಗೊಂಬೆಗಳ ಹಬ್ಬಕ್ಕೆ ವಿಶೇಷ ಸ್ಥಾನವಿದೆ. ನವರಾತ್ರಿ ಹಬ್ಬದ ಪ್ರಯುಕ್ತ ಗ್ರಾಮೀಣ ಸೊಗಡಿನಲ್ಲಿ 9ದಿನ ಗೊಂಬೆಗಳ ಕೂರಿಸಿ ಸಂಭ್ರಮಿಸುವುದೇ ವಿಶೇಷ. ಚೆಂದದ ಗೊಂಬೆಗಳನ್ನು ಕೂರಿಸಿ ಅಲಂಕರಿಸುವ ಮೂಲಕ ಮೈಸೂರು ದಸರಾವನ್ನು ತುಮಕೂರು ಜಿಲ್ಲೆ ಸೇರಿದಂತೆ ಕೊರಟಗೆರೆ ಕ್ಷೇತ್ರದಾದ್ಯಂತ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ.
ನವರಾತ್ರಿಹಬ್ಬದ ಪ್ರಯುಕ್ತ ಪ್ರತಿವರ್ಷ ಪಾಡ್ಯ ದಿನದಿಂದಲೇ ಗೊಂಬೆಗಳನ್ನು ಜೋಡಿಸಿ ಪೂಜಿಸುತ್ತಾ ಬರುವುದು ಸಂಪ್ರದಾಯ. 150ವರ್ಷದ ಹಿಂದೆಯ ಇತಿಹಾಸವಿರುವ ಕಥೆಗಳು, ಮಹಾಭಾರತ ಮತ್ತು ರಾಮಾಯಣದ ಗೊಂಬೆಗಳೇ ಮಕ್ಕಳ ಕಣ್ಮನ ಸೆಳೆಯಲಿದೆ. ಪ್ರತಿನಿತ್ಯವು ವಿಶೇಷಪೂಜೆ ಮತ್ತು ಭಜನೆ ಕಾರ್ಯಕ್ರಮ ಸೇರಿದಂತೆ ಮಕ್ಕಳಿಗೆ ದಿನಕ್ಕೊಂದು ಸಿಹಿತಿಂಡಿ ನೀಡುವುದು ಸಹ ವಾಡಿಕೆಯಾಗಿದೆ.

50ಬಗೆಯ ಗೊಂಬೆಗಳ ವೈಶಿಷ್ಟತೆ..
ದಸರಾ ಹಬ್ಬದ ಪ್ರಾರಂಭದ ದಿನವೇ ಮನೆಯಲ್ಲಿ ಕೂರಿಸುವ ಒಂದೊಂದು ಬೊಂಬೆಗಳು ಒಂದೊಂದು ರೀತಿಯ ವಿಶೇಷ ಇತಿಹಾಸದ ಕಥೆಗಳನ್ನು ಹೇಳುತ್ತವೆ. ನಮ್ಮ ಸಂಸ್ಕೃತಿ , ಧಾರ್ಮಿಕ ಪರಂಪರೆ, ಸಾಹಿತ್ಯ ಆಚರಣೆ, ವೈಚಾರಿಕತೆ, ವಿಜ್ಞಾನ, ಪೌರಾಣಿಕ ಕಥೆ, ಕೃಷಿ, ಚಂದ್ರಯಾನ-3, ಸನಾತನ ಧರ್ಮ ಹೀಗೆ ವಿಷಯ ಮತ್ತು ಪ್ರಸ್ತುತ ವಿದ್ಯಮಾನಕ್ಕೆ ತಕ್ಕಂತೆ ಗೊಂಬೆಗಳನ್ನು ಸಿದ್ದತೆ ಮಾಡಲಾಗಿದೆ. ಅಲ್ಲದೇ ನಮ್ಮ ನಾಡಿನ ಸಂಸ್ಕೃತಿ ಮತ್ತು ಐತಿಹಾಸಿದ ಇತಿಹಾಸ ಸಾರುವ ಗೊಂಬೆಗಳಿಗೆ ಪ್ರಮುಖ ಸ್ಥಾನ ನೀಡಲಾಗಿದೆ.

ಹೆಣ್ಣು ಮಕ್ಕಳಿಗೆ ದಸರಾವೇ ವಿಶೇಷ
ನವರಾತ್ರಿಯು ಹೆಣ್ಣು ಮಕ್ಕಳಿಗೆ ಇಷ್ಟವಾಗುವ ಹಬ್ಬ. ಮಹಿಳೆಯರು 9ದಿನವು 9ರೀತಿಯ ಬಣ್ಣ ಬಣ್ಣದ ಉಡುಗೆ ತೊಟ್ಟು ಸಂಭ್ರಮಿಸುವ ವಿಶೇಷ ಹಬ್ಬ. ಪ್ರತಿದಿನ ಬನ್ನಿ ಮರ ಸೇರಿದಂತೆ ನಾನಾ ದೇವಾಸ್ಥಾನಗಳಿಗೆ ಬೆಳಗಿನ ಜಾವವೇ ತೆರಳಿ ಪೂಜೆ ಮಾಡುವುದೇ ವಿಶೇಷ. ಮನೆಗಳಲ್ಲಿ ಗೊಂಬೆಕೂರಿಸಿ ಸಿಂಗಾರ ಮಾಡಿ ಹಬ್ಬದ ಸಂಭ್ರಮ ಹೆಚ್ಚಿಸುತ್ತಾರೆ. ಗೃಹಿಣಿಯರು ತವರಿನಿಂದ ತಂದ ಪಟ್ಟದ ಗೊಂಬೆಗಳನ್ನು ಇಟ್ಟು ಪೂಜಿಸುವುದು ವಿಶೇಷವಾಗಿ ಕಾಣಸಿಗಲಿದೆ.

ಕೊರಟಗೆರೆ ತಾಲೂಕು ಹೊಳವನಹಳ್ಳಿ ಲೇ.ರಮಾನಂದ್-ನಾಗಮಣಿ ದಂಪತಿಗಳ ಮನೆಯಲ್ಲಿ 1ಸಾವಿರಕ್ಕೂ ಅಧಿಕ ಗೊಂಬೆಗಳನ್ನು ಪ್ರತಿಷ್ಠಾಪಿಸಲಾಗಿದೆ. ಪಟ್ಟದ ಗೊಂಬೆಗೆ ರಾಜ-ರಾಣಿಯಂತೆ ಅಲಂಕಾರ ಮಾಡಿ ಅಗ್ರಸ್ಥಾನದಲ್ಲಿ ಮಂಟಪ ನಿರ್ಮಿಸಿ ಗೊಂಬೆಗಳನ್ನು ಕೂರಿಸಲಾಗಿದೆ. ಆಧುನಿಕತೆ ಬೆಳೆದಂತೆ ಪ್ರಸ್ತುತ ಪಿಳಿಗೆಯ ಮಕ್ಕಳಿಗೆ ನಮ್ಮ ಸಂಸ್ಕøತಿ ಮತ್ತು ಸಂಪ್ರದಾಯ ಪರಿಚಯ ಮಾಡಬೇಕಿದೆ ಎಂಬುದು ಹಿರಿಯರ ಅಭಿಪ್ರಾಯವಾಗಿದೆ.

1ಸಾವಿರಕ್ಕೂ ಅಧಿಕ ಗೊಂಬೆಗಳ ಪ್ರದರ್ಶನ..
ರಾಮಾಯಣ, ಮಹಾಭಾರತ, ಬ್ರಹ್ಮೋತ್ಸವ, ಶ್ರೀನಿವಾಸ ಪದ್ಮಾವತಿ, ರೈತರ ದಿನಚರಿ, ಮದುವೆ ಸಂಭ್ರಮ, ರಾಮ ಪಟ್ಟಾಭಿಷೇಕ, ಸೀತಾರಾಮ ಕಲ್ಯಾಣ, ಕುಂಬಕರಣ, ಕಲ್ಯಾನೋತ್ಸವ, ಶ್ರೀಸರಸ್ಪತಿ, ಶ್ರೀರಾಮ ಆಂಜನೇಯ ಗುಹೆ, ಶ್ರೀಅಷ್ಟಲಕ್ಷ್ಮೀ, ದಾರ್ಶನಿಕರು, ಮದುವೆ ಸಂಭ್ರಮ, ಘಟೋದ್ಗಜ, ನೃತ್ಯ ಪ್ರದರ್ಶನ, ಉಲಗ ಅಳಂದ ಪೆರುಮಾಳ್, ಶ್ರೀಕೃಷ್ಣಲೀಲೆ, ಗೋವರ್ಧನ ಗಿರಿಧಾಮ, ನಮ್ಮೂರಶಾಲೆ, ಲವಕುಶ, ವರ್ತಕ ಗಣಪತಿ, ನಾಧಮುನಿಗೋಷ್ಟಿ, ಚಂದ್ರಯಾನ-3 ಬಿಂಬಿಸುವ 1ಸಾವಿರಕ್ಕೂ ಅಧಿಕ ಗೊಂಬೆಗಳ ಮುಖ್ಯಶಿಕ್ಷಕ ಲೇ.ರಮಾನಂದ ಅವರ ಮನೆಯಲ್ಲಿ ಅನಾವರಣಗೊಂಡಿವೆ.

ಬ್ರಹೋತ್ಸವ, ಜಾತ್ರೆ, ಹಬ್ಬ, ಸರಕಾರಿ ಶಾಲೆ, ಮಧುವೆ ಸಂಭ್ರಮ, ಇತಿಹಾಸದ ಕಥೆ, ರೈತರ ಜೀವನ, ಕಲಿಯುಗ ಮತ್ತು ಚಂದ್ರಯಾನ-3ರ ಬೊಂಬೆಗಳು ಮಕ್ಕಳಿಗೆ ಪ್ರೀಯಪಾತ್ರ. ರಾಮಾಯಣ-ಮಹಾಭಾರತ ನೆನಪಿಸುವ ಸನಾತನ ಧರ್ಮದ ಪರಂಪರೆಯ ಗೊಂಬೆಗಳ ಪ್ರದರ್ಶನ ಅನಾವರಣ ಆಗಿವೆ. ನಮ್ಮ ದೇಶದ ಸಂಸ್ಕøತಿ ಮತ್ತು ಸನಾತನ ಧರ್ಮದ ಪರಿಚಯಿಸುವುದೇ ಗೊಂಬೆಗಳ ವಿಶೇಷ.
-ದೀಪ್ತಿ. ಶಿಕ್ಷಕಿ, ಹೊಳವನಹಳ್ಳಿ

ನಮ್ಮ ಮನೆಯ ದಸರಾ ಗೊಂಬೆಗಳಿಗೆ 150ವರ್ಷದ ಇತಿಹಾಸವಿದೆ. ನವರಾತ್ರಿ ಪ್ರಯುಕ್ತ ಗೊಂಬೆಗಳ ಪ್ರದರ್ಶನ ಪಾಡ್ಯಮಿಯಲ್ಲಿ ಪ್ರಾರಂಭವಾಗಿ ವಿಜಯದಶಮಿಗೆ ಮುಕ್ತಾಯ ಆಗಲಿದೆ. 9ದಿನಗಳ ಕಾಲ ವಿಶೇಷಪೂಜೆ ಮತ್ತು ಭಜನೆ ಕಾರ್ಯಕ್ರಮ ಜರುಗಲಿದೆ. 1ಸಾವಿರಕ್ಕೂ ಅಧಿಕ ಗೊಂಬೆಗಳ ರಕ್ಷಣೆ ಮತ್ತು ನಿರ್ವಹಣೆಯೇ ನಮಗೇ ದೊಡ್ಡ ಸವಾಲು. ನಮ್ಮ ದೇಶದ ಪರಂಪರೆ ಮತ್ತು ಸಂಸ್ಕøತಿಯು ಗೊಂಬೆಗಳ ಮೂಲಕ ಅನಾವರಣೆ ಗೊಂಡಿವೆ.

-ನಾಗಮಣಿ. ಗೃಹಿಣಿ, ಹೊಳವನಹಳ್ಳಿ.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.