ಕೊರಟಗೆರೆ: ಬೋನಿಗೆ ಬಿದ್ದ ಚಿರತೆ
Team Udayavani, Dec 31, 2022, 12:58 PM IST
ಕೊರಟಗೆರೆ: ತಾಲೂಕಿನ ಕೋಳಾಲ ಹೋಬಳಿಯ ನೀಲಗೊಂಡನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಜನರ ನಿದ್ದೆಗೆಡಿಸಿದ್ದ ಚಿರತೆಯೊಂದು ಡಿ. 31 ರ ಬೆಳಿಗ್ಗೆ ತಂಗನಹಳ್ಳಿಬೆಟ್ಟದ ತಪ್ಪಲಿನಲ್ಲಿಟ್ಟಿದ್ದ ಬೋನಿನಲ್ಲಿ ಸೆರೆಯಾಗಿದೆ.
ಇತ್ತೀಚೆಗೆಷ್ಟೇ ಇರಕ ಸಂದ್ರ ಕಾಲೊನಿ ಗ್ರಾಮದ ಹಲವು ಮಕ್ಕಳು ಮತ್ತು ವೃದ್ದರ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಪ್ರಾಣಿಗಳ ಹಾಗೂ ಮಕ್ಕಳ ಮೇಲೆ ಪದೇ ಪದೇ ದಾಳಿ ಮಾಡಿ ಪರಾರಿಯಾಗುತ್ತಿತ್ತು.
ಇದರಿಂದ ಆತಂಕಗೊಂಡ ನೀಲಗೊಂಡನಹಳ್ಳಿ ಮತ್ತು ಎಲೆರಾಂಪುರ ಗ್ರಾಮ ಪಂಚಾಯತಿಗಳ ಹಲವು ಗ್ರಾಮಗಳ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಚಿರತೆ ಸೆರೆ ಹಿಡಿಯುವಂತೆ ಮನವಿ ಮಾಡಿದ್ದರು.
ತಕ್ಷಣ ಎಚ್ವೆತ್ತ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ನೀಲಗೊಂಡನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಹಳ್ಳಿ ಹಳ್ಳಿಗೂ ಭೇಟಿ ನೀಡಿ ಚಿರತೆ ಕಾಣಿಸಿಕೊಂಡ ಜಾಗದಲ್ಲಿ ಬೋನ್ ಇಡುವ ವ್ಯವಸ್ಥೆ ಮಾಡಿದ್ದು, ಇಂದು (ಡಿ.31) ಬೆಳಿಗ್ಗೆ ಚಿರತೆ ಬೋನಿನಲ್ಲಿ ಸೆರೆ ಸಿಕ್ಕಿರುವುದು ಹಲವು ಗ್ರಾಮಗಳ ಜನರು ನೆಮ್ಮದಿಯಿಂದ ನಿಟ್ಟುಸಿರು ಬಿಡುವಂತಾಗಿದೆ.
ತಾಲೂಕಿನ ವಲಯ ಸಹಾಯಕ ಅರಣ್ಯಾಧಿಕಾರಿ ಸುರೇಶ್, ಚಿರತೆ ಹಿಡಿಯಲು ಬೋನ್ ಇಟ್ಟಿದ್ದ ಸ್ಥಳಕ್ಕೆ ಭೇಟಿ ನೀಡಿ, ಮಾತನಾಡಿ, ಗ್ರಾಮಸ್ಥರು ಯಾವುದೇ ಕಾರಣಕ್ಕೂ ಅತಂಕ ಪಡುವುದು ಬೇಡ. ಚಿರತೆ ಸೆರೆ ಸಿಕ್ಕಿದ್ದು, ಗ್ರಾಮಗಳ ಜನರು ನೆಮ್ಮದಿಯಾಗಿರಲು ಸೂಚಿಸಿದರು. ಸೆರೆ ಸಿಕ್ಕಿರುವ ಚಿರತೆಯನ್ನು ಬನ್ನೇರುಘಟ್ಟ ಅರಣ್ಯಕ್ಕೆ ಬಿಡಲಾಗುವುದು ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ