ಕೊರಟಗೆರೆ: ಪಟ್ಟಣ ಪಂಚಾಯತ್ ಪಿಠೋಪಕರಣ ಜಪ್ತಿಗೆ ನ್ಯಾಯಾಲಯ ಆದೇಶ


Team Udayavani, Oct 20, 2022, 9:23 PM IST

1-sdsadd

ಕೊರಟಗೆರೆ: ಹೇಮಾವತಿ ಕುಡಿಯುವ ನೀರಿನ ಶುದ್ದಿಕರಣ ಘಟಕ ನಿರ್ಮಾಣಕ್ಕಾಗಿ 2009-10ರಲ್ಲಿ ಜೆಟ್ಟಿಅಗ್ರಹಾರ ರೈತರಿಂದ ಭೂಸ್ವಾಧೀನ ಪಡಿಸಿಕೊಂಡ ಜಮೀನಿನ ಭೂಪರಿಹಾರವನ್ನು 2018 ರಲ್ಲಿ ನ್ಯಾಯಾಲಯದ ಆದೇಶದ ನಂತರವೂ ನೀಡದಿರುವ ಪರಿಣಾಮ ಪಟ್ಟಣ ಪಂಚಾಯತ್ ನ ಪಿಠೋಪಕರಣ ವಶ ಪಡಿಸಿಕೊಳ್ಳುವಂತೆ ಮಧುಗಿರಿ ಅಧಿಕ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ಮಾಡಿರುವ ಘಟನೆ ಗುರುವಾರ ನಡೆದಿದೆ.

ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಜೆಟ್ಟಿಅಗ್ರಹಾರ ಗ್ರಾಮದ ರೈತರಾದ ಬಸವರಾಜು ಮತ್ತು ನಂದೀಶ್ ಎಂಬ ರೈತರ ಜಮೀನನ್ನು 2009ರಲ್ಲೇ ಹೇಮಾವತಿ ಕುಡಿಯುವ ನೀರಿನ ಶುದ್ದಿಕರಣ ಘಟಕ ನಿರ್ಮಾಣಕ್ಕಾಗಿ ಸ್ವಾಧೀನ ಪಡಿಸಿಕೊಳ್ಳಲಾಗಿದೆ. 2018ರಲ್ಲೇ ಅಗ್ರಹಾರ ರೈತರಿಗೆ ತಕ್ಷಣ ಭೂಪರಿಹಾರ ನೀಡುವಂತೆ ಕೊರಟಗೆರೆ ಪಪಂಗೆ ಮಧುಗಿರಿ ಸಿವಿಲ್ ನ್ಯಾಯಾಲಯವು ಆದೇಶ ಮಾಡಿದೆ.

ಜೆಟ್ಟಿಅಗ್ರಹಾರ ಗ್ರಾಮದ ರೈತ ಬಸವರಾಜು ಮಾತನಾಡಿ ಹೇಮಾವತಿ ನೀರಿನ ಘಟಕ ನಿರ್ಮಾಣಕ್ಕಾಗಿ 2009ರಲ್ಲಿ ನಮ್ಮ ಜಮೀನು ಸ್ವಾಧೀನ ಮಾಡಿದ್ದಾರೆ. 2018ರಲ್ಲಿ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶ ಮಾಡಿದೆ. ನಮಗೇ ಇನ್ನೂ 48 ಲಕ್ಷಕ್ಕೂ ಅಧಿಕ ಭೂಪರಿಹಾರ ಬರಬೇಕಿದೆ. ನ್ಯಾಯಾಲಯದ ಆದೇಶವನ್ನು ಪಪಂಯು ಪಾಲನೆ ಮಾಡದಿರುವ ಹಿನ್ನಲೆ ಇಂದು ಪಿಠೋಪಕರಣ ಜಪ್ತಿಗೆ ಆದೇಶ ಮಾಡಲಾಗಿದೆ ಎಂದರು.

ಕೊರಟಗೆರೆ ಸಿವಿಲ್ ನ್ಯಾಯಾಲಯದ ಅಮೀನ್‌ರಾದ ಮಂಜುನಾಥ ಮಾತನಾಡಿ ಜೆಟ್ಟಿಅಗ್ರಹಾರದ ಇಬ್ಬರು ರೈತರಿಗೆ 48 ಲಕ್ಷ ರೂ.ಗೂ ಅಧಿಕ ಭೂಪರಿಹಾರ ನೀಡಲು ನ್ಯಾಯಾಲಯ ೨೦೧೮ರಲ್ಲೇ ಆದೇಶ ಮಾಡಿದೆ. ರೈತರಿಗೆ ಜಮೀನು ಸ್ವಾಧೀನದ ಪರಿಹಾರ ನೀಡುವಲ್ಲಿ ಕೊರಟಗೆರೆ ಪಪಂ ವಿಳಂಭ ಮಾಡಿದೆ. ಇಂದು ಮಧುಗಿರಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಕೊರಟಗೆರೆ ಪಪಂಯ ಪಿಠೋಪಕರಣವನ್ನು ಜಪ್ತಿ ಮಾಡಿದ್ದೇವೆ ಎಂದು ಕೊರಟಗೆರೆಯ ಸಿವಿಲ್ ನ್ಯಾಯಾಲಯದ ಮಂಜುನಾಥ ಅಮೀನ್ ತಿಳಿಸಿದರು.

ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್ ಮಾತನಾಡಿ ನ್ಯಾಯಾಲಯದ ಆದೇಶವನ್ನು ಕಾರ್ಯಗತ ಮಾಡುವುದು ಪಪಂ ಅಧಿಕಾರಿಗಳ ಪ್ರಮುಖ ಜವಾಬ್ದಾರಿ. ಪ.ಪಂ. ನಿಂದ ಆದೇಶ ನಿರ್ಲಕ್ಷ ಮಾಡಿರುವ ಪರಿಣಾಮ ಈಗ ಸಮಸ್ಯೆ ಆಗಿದೆ. ನ್ಯಾಯಾಲಯ ಪಿಠೋಪಕರಣ ವಶಕ್ಕೆ ಪಡೆದಿರುವ ಬಗ್ಗೆ ನನಗೇ ಮಾಹಿತಿ ಇಲ್ಲ. ಸರಕಾರದ ಅನುಧಾನ ಮತ್ತು ಪ.ಪಂ. ನಿಂದ ತಕ್ಷಣ ಮಾಹಿತಿ ಪಡೆದು ಸಮಸ್ಯೆ ಬಗೆಹರಿಸುತ್ತೇನೆ ಎಂದರು.

ಮಧುಗಿರಿಯ ಘನ ಸಿವಿಲ್ ನ್ಯಾಯಾಲಯವು 2018ರಲ್ಲೇ ಆದೇಶ ಮಾಡಿದೆ. ಕೊರಟಗೆರೆ ಪಪಂ ಮುಖ್ಯಾಧಿಕಾರಿಗೆ ಈ ಹಿಂದೆಯೇ ವಾರೆಂಟ್ ಜಾರಿಯಾಗಿದೆ. ನ್ಯಾಯಾಲಯದ ಆದೇಶವನ್ನು ನಿರ್ಲಕ್ಷ ಮಾಡಿರುವ ಪರಿಣಾಮ ಕೊರಟಗೆರೆ ಪಪಂಯ ಮುಖ್ಯಾಧಿಕಾರಿ, ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಕಚೇರಿಯ ಪಿಠೋಪಕರಣ ಜಪ್ತಿ ಮಾಡಿ ಮಧುಗಿರಿ ಸಿವಿಲ್ ನ್ಯಾಯಾಲಯವು ಆದೇಶ ಮಾಡಿದೆ.

ಕೊರಟಗೆರೆ ಸಿವಿಲ್ ನ್ಯಾಯಾಲಯದ ಅಮೀನರಾದ ಮಂಜುನಾಥ ಮತ್ತು ಪರಮೇಶ್ವರಯ್ಯ ನೇತೃತ್ವದಲ್ಲಿ ಪಪಂ ಕಚೇರಿಯ ಪಿಠೋಪಕರಣವನ್ನು ವಶಕ್ಕೆ ಪಡೆಯಲಾಗಿದೆ. ಇದೇ ಸಂದರ್ಭದಲ್ಲಿ ಪಪಂಯ ಮುಖ್ಯಾಧಿಕಾರಿ ಭಾಗ್ಯ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.