ಮನೆ ಬಿಟ್ಟು ತವರು ಮನೆಗೆ ಹೋದ ಪತ್ನಿ : ಮನನೊಂದ ಪತಿ ಆತ್ಮಹತ್ಯೆಗೆ ಶರಣು
Team Udayavani, Jun 13, 2022, 10:23 PM IST
ಕೊರಟಗೆರೆ : ಮನೆ ಬಿಟ್ಟು ತವರು ಮನೆಗೆ ಹೋದ ಪತ್ನಿಯ ನೆನೆಪಿನಲ್ಲಿ ಮನನೊಂದ ಪತಿ ಮಾನಸಿಕ ಖಿನ್ನತೆಗೆ ಒಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಮರೆನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮರೆನಾಯಕನಹಳ್ಳಿ ಗ್ರಾಮದ ಶಿವಪ್ರಸಾದ್ (45) ವರ್ಷ ಮೃತಪಟ್ಟ ದುರ್ದೈವಿಯಾಗಿದ್ದಾನೆ.
ತನ್ನ ಅಕ್ಕನ ಮಗಳನ್ನೇ ಮದುವೆಯಾಗಿದ್ದ ಶಿವಪ್ರಸಾದ್ ನ ಸಂಸಾರದಲ್ಲಿ ಅನ್ಯೋನ್ಯತೆ ಇಲ್ಲದೆ ಹೆಂಡತಿಯು ಮನೆ ಬಿಟ್ಟು ತವರು ಮನೆಗೆ ಹೋಗಿ ವಾಸವಿದ್ದಳು. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಶಿವಪ್ರಸಾದ್ ರಾತ್ರಿ 9 ಗಂಟೆಗೆ ಊಟ ಮಾಡಿ ಮನೆಯಿಂದ ಹೊರ ಹೋಗಿ ಪಕ್ಕದ ಜಮೀನಿನಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೊರಟಗೆರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ನಾಗರಾಜು, ಎಎಸ್ಐ ಯೋಗೀಶ್, ಮುಖ್ಯಪೇದೆ ಜಯಪ್ರಕಾಶ್ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಪಾಕ್ 3-0 ಕ್ಲೀನ್ ಸ್ವೀಪ್ ಸಾಧನೆ: ವಿಂಡೀಸ್ಗೆ ಸತತ 3ನೇ ಏಕದಿನದಲ್ಲೂ ಸೋಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ