2023ಕ್ಕೆ ಕೊರಟಗೆರೆ ಕ್ಷೇತ್ರದಲ್ಲಿ ಕಮಲ ಅರಳುವುದು ಖಚಿತ : ಮುನಿಯಪ್ಪ


Team Udayavani, Jan 3, 2023, 7:01 PM IST

2023ಕ್ಕೆ ಕೊರಟಗೆರೆ ಕ್ಷೇತ್ರದಲ್ಲಿ ಕಮಲ ಅರಳುವುದು ಖಚಿತ : ಮುನಿಯಪ್ಪ

ಕೊರಟಗೆರೆ: ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ತಳ ಮಟ್ಟದಲ್ಲಿದ್ದ ಭಾರತೀಯ ಜನತಾ ಪಾರ್ಟಿಯನ್ನು ಸತತ 4ವರ್ಷಗಳಿಂದ ಜನತೆಯ ಕಷ್ಟಗಳಿಗೆ ಸ್ಫಂಧಿಸುವುದರ ಮೂಲಕ ಬಿಜೆಪಿಯ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸಿದ್ದೇನೆ.ಈ ಬಾರಿ ನನಗೆ ಟಿಕೇಟ್ ನೀಡಿದರೆ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಬಾವುಟ ಹಾರಿಸುವುದು ಖಚಿತ ಎಂದು ಬಿಜೆಪಿ ಆಕ್ಷಾಂಕಿ ಅಭ್ಯರ್ಥಿ ಕೆ.ಎಂ ಮುನಿಯಪ್ಪ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಮುನಿಯಪ್ಪರವರ ನಡೆ ಹಳ್ಳಿಯ ಕಡೆ ಎಂಬ ವಿಶೇಷ ಕಾರ್ಯಕ್ರಮದ ಮುಖೇನ ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಡಿ ಭಾಗದ ವೀರನಾಗೇನಹಳ್ಳಿ ಗ್ರಾಮದಲ್ಲಿ ಪಕ್ಷದ ಪ್ರಚಾರದ ವೇಳೆ ಮಾತನಾಡಿದರು.

ಕೋವಿಡ್ ಸಂದರ್ಭದಲ್ಲಿ ಕ್ಷೇತ್ರದ ಜನರ ಕಷ್ಟಗಳಿಗೆ ಸ್ಪಂದಿಸಿದ್ದೇನೆ, ಅಂದಿನಿಂದಲೂ ಇಲ್ಲಿಯವರೆಗೂ ಕ್ಷೇತ್ರದಲ್ಲಿ ಜನಪರ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದ್ದೇನೆ. ಮುಂದೆಯೂ ಸಹ ಎಲ್ಲರ ಕಷ್ಟಗಳಿಗೆ ಸ್ಪಂದಿಸುವುದೇ ನನ್ನ ಮುಖ್ಯ ಗುರಿ. ರಾಜ್ಯದ ಹಲವು ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದೇನೆ ಅವರು ನಮ್ಮೆಲ್ಲರ ಬೆಂಬಲ ನಿಮಗಿದೆ ಎಂದು ಭರವಸೆ ಕೂಡ ನೀಡಿದ್ದಾರೆ ಎಂದು ಹೇಳಿದರು.

ಮತದಾರ ಪ್ರಭುಗಳು ಮತ್ತು ಕಾರ್ಯಕರ್ತರು ಹೆಚ್ಚಾಗಿ ನನ್ನ ಪರವಾಗಿದ್ದು, ರಾಜ್ಯದ ಬಿಜೆಪಿ ಪಕ್ಷದ ನಾಯಕರು ನನ್ನ ಜನಪರ ಸೇವೆಯನ್ನು ಗುರುತಿಸಿ ಚುನಾವಣೆಗೆ ಸ್ಪರ್ದಿಸಲು ಟಿಕೆಟ್‌ ನ್ನು ನನಗೆ ನೀಡಬೇಕು ಎಂದರು.

ಮುನಿಯಪ್ಪನವರ ಸಾಮಾಜಿಕ ಸೇವೆಯ ಚಿತ್ರಣದೊಂದಿಗೆ 2023 ರ ನೂತನ ವರ್ಷದ ಕ್ಯಾಲೆಂಡರ್‌ನಲ್ಲಿ ಮುದ್ರಿಸಿ ಪುರವರ ಹೋಬಳಿ ಗ್ರಾಮಗಳಿಗೆ ಮತ್ತು ಹೊಳವನಹಳ್ಳಿ ಹೋಬಳಿ ಸಂಬಂಧಿಸಿದ ಗ್ರಾಮಗಳ ಜನರಿಗೆ ವಿತರಿಸಿ ಹೊಸ ವರ್ಷದ ಶುಭಾಶಯ ಕೋರಿ ಪಕ್ಷದ ಕಾರ್ಯಚಟುವಟಿಕೆಗಳನ್ನು ವಿವರಿಸಿದರು.

ಈ ವೇಳೆ ಉಪಾಧ್ಯಕ್ಷ ರಾಜಣ್ಣ, ಜಿಲ್ಲಾ ಕಮಿಟಿ ಸದಸ್ಯ ಗೋವಿಂದರೆಡ್ಡಿ, ನಾಮಿನಿ ಸದಸ್ಯ ಚಂದ್ರಪ್ಪ, ಕೋಳಾಲ ಶಕ್ತಿ ಕೇಂದ್ರದ ಅಧ್ಯಕ್ಷ ಮಂಜಣ್ಣ, ಆನಂದ್, ಜಗದೀಶ್, ಸೇರಿದಂತೆ ಹೆಚ್ಚಿನ ಕಾರ್ಯಕರ್ತರು ಹಾಜರಿದ್ದರು.

ಜ. 26ಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್‌ವೈ ಮತ್ತು ಪುತ್ರ ವಿಜಯೇಂದ್ರ ಕ್ಷೇತ್ರಕ್ಕೆ ಭೇಟಿ.
ಬಿಜೆಪಿ ಪಕ್ಷವನ್ನು ಇನ್ನಷ್ಟು ಕ್ಷೇತ್ರದಲ್ಲಿ ಬಲಪಡಿಸುವ ದೃಷ್ಠಿಯಿಂದ ಜ26 ಕ್ಕೆ ಕೊರಟಗೆರೆ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರವರು ಹಾಗೂ ಪುತ್ರರಾದ ವಿಜಯೇಂದ್ರರವರು ಭೇಟಿ ನೀಡಲಿದ್ದಾರೆ. ಬಿಜೆಪಿ ಪಕ್ಷದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ತಿಳಿಸಲಿದ್ದು, ಹೆಚ್ಚಿನ ಸಂಖೈಯಲ್ಲಿ ಕ್ಷೇತ್ರದ ಜನರು ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಕಾಂಕ್ಷಿ ಅಭ್ಯರ್ಥಿ ಮುನಿಯಪ್ಪ ಮನವಿ ಮಾಡಿಕೊಂಡರು.

ಇದನ್ನೂ ಓದಿ: ಸಾರ್ವಜನಿಕ ಸಭೆ, ರ‍್ಯಾಲಿ ನಿಷೇಧಿಸಿದ ಆಂಧ್ರ ಸರ್ಕಾರ

ಟಾಪ್ ನ್ಯೂಸ್

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.