Koratagere:ಅದ್ಧೂರಿಯಾಗಿ ನಡೆದ ಗಂಗಾಧರೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ

ಮಹಾಶಿವರಾತ್ರಿ ಹಬ್ಬವು ಪ್ರತಿಯೊಬ್ಬರಿಗೂ ಪ್ರಿಯವಾದ ಹಬ್ಬ:ಸಿದ್ಧರಬೆಟ್ಟ ಶ್ರೀಗಳು

Team Udayavani, Mar 9, 2024, 8:39 PM IST

1-aaaa

ಕೊರಟಗೆರೆ: ಪಟ್ಟಣದ ಪ್ರಸಿದ್ದ ಗಂಗಾಧರೇಶ್ವರ ಸ್ವಾಮಿ ಬೆಟ್ಟದಲ್ಲಿ ಮಹಾ ಶಿವರಾತ್ರಿಯೊಂದು ಗಿರಿಜಾ ಕಲ್ಯಾಣ, ಲಕ್ಷದೀಪೋತ್ಸವ ಹಾಗೂ ಶನಿವಾರದಂದು ಗಂಗಾಧರೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವವು ಅದ್ದೂರಿಯಾಗಿ ನಡೆಯಿತು.

ತಾಲ್ಲೂಕಿನ ನಾಡ ಪ್ರಭು ರಣಬೈರೇಗೌಡ ಯುವ ಸೇವಾ ಸಂಘ ಮತ್ತು ಪ್ರೆಂಡ್ಸ್ ಗ್ರೂಪ್ ಸೇವಾ ಸಮಿತಿ ಇವರಿಂದ ಸತತ 24ನೇ ವರ್ಷದ ಏರ್ಪಡಿಸಿದ್ದ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಸಿದ್ದರಬೆಟ್ಟದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ಲಕ್ಷದೀಪೋತ್ಸವಕ್ಕೆ ಚಾಲನೆ ನೀಡಿದರು.

ಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ರುದ್ರಾಭಿಷೇಕ, ಹೋಮ, ಗಿರಿಜಾಕಲ್ಯಾಣ, ಸೇರಿದಂತೆ ವಿವಿಧಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಪಟ್ಟಣದ ತೇರಿನ ಬೀದಿಯಲ್ಲಿ ಶ್ರೀಗಂಗಾಧರೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ತಹಶೀಲ್ದಾರ್ ಮಂಜುನಾಥ್ ಚಾಲನೆ ನೀಡಿದ ಬಳಿಕ ರಥೋತ್ಸವವು ಭಕ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ಶನಿವಾರ ನಡೆಯಿತು.

ಸಿದ್ಧರಬೆಟ್ಟದ ವೀರಭಧ್ರ ಶಿವಚಾರ್ಯ ಸ್ವಾಮೀಜಿ ಮಾತನಾಡಿ, ಮಹಾಶಿವರಾತ್ರಿ ಹಬ್ಬವು ಪ್ರತಿಯೊಬ್ಬರಿಗೂ ಪ್ರಿಯವಾದ ಹಬ್ಬವಾಗಿದೆ. ಏಕೆಂದರೆ ನಾಡಿನೆಲ್ಲೆಡೆ ಭಕ್ತರು ಹಬ್ಬದಂದು ಉಪವಾಸ ವ್ರತವನ್ನು ಮಾಡುವುದರ ಜೊತೆಗೆ ಶಿವನ ಹತ್ತಿರವಿದ್ದು ಸ್ಮರಣೆಯನ್ನು ಮಾಡುವ ಹಬ್ಬವಾಗಿದೆ. ಗಂಗಾಧರೇಶ್ವರ ದೇವಲಾಯವು ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಮಹಾಶಿವರಾತ್ರಿ ಹಬ್ಬದ ಅಂಗವಾಗಿ ರಣಭೈರೇಗೌಡರ ಯುವ ವೇದಿಕೆ ಮತ್ತು ಪ್ರೆಂಡ್ಸ್ ಗ್ರೂಪ್ ವತಿಯಿಂದ 24 ವರ್ಷಗಳಿಂದಲೂ ದೇವಾಲಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಾ ಬಂದಿದೆ. ಈ ವರ್ಷವಾದರೂ ಸಹ ನಾಡಿನಲ್ಲಿ ಉತ್ತಮ ಮಳೆಯನ್ನು ಕರುಣಿಸಿ ಸಕಲ ಜೀವರಾಶಿಗಳನ್ನು ಕಾಪಾಡಿ ಭಕ್ತರ ಬೇಡಿಕೆಗಳನ್ನು ಈಡೇರಿಸಲಿ ಎಂದು ಹೇಳಿದರು.

ತಹಶೀಲ್ದಾರ್ ಮಂಜುನಾಥ್ ಮಾತನಾಡಿ, ದಕ್ಷಿಣಕಾಶಿಯೆಂದೇ ಪ್ರಸಿದ್ದಿ ಪಡೆದಿರುವ ಪಟ್ಟಣದ ಗಂಗಾಧರೇಶ್ವರ ಸ್ವಾಮಿ ದೇವಾಲಯಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ, ಈ ದೇವಾಲಯವು ಮುಜುರಾಯಿ ಇಲಾಖೆಗೆ ಸೇರಿದ್ದು ರಣಬೈರೇಗೌಡರ ಯುವ ವೇದಿಕೆ ಮತ್ತು ಫ್ರೆಂಡ್ಸ್ ಗ್ರೂಪ್ ವತಿಯಿಂದ ಸುಮಾರು ೨೪ ವರ್ಷಗಳಿಂದ ಮಹಾಶಿವರಾತ್ರಿ ಹಬ್ಬದಂದು ಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಗಳು, ಅಭಿಷೇಕ, ಗಿರಿಜಾ ಕಲ್ಯಾಣ ಮತ್ತು ಲಕ್ಷದಿಪೋತ್ಸವ ಕಾರ್ಯಕ್ರಮಗಳು ನಡೆಸಿಕೊಂಡು ಬಂದಿದ್ದಾರೆ ಎಂದು ತಿಳಿಸಿದರು.

ಭಕ್ತರು ಹಬ್ಬದಂದು ಉಪವಾಸ ವ್ರತವನ್ನು ಮಾಡಿ ಸ್ವಾಮಿ ದರ್ಶನ ಪಡೆದು ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ಪ್ರಾರ್ಥನೆ ಮಾಡಿಕೊಳ್ಳುತ್ತಾರೆ ಹಬ್ಬದ ಮುಂದಿನ ದಿನ ಪಟ್ಟಣದ ತೇರಿನ ಬೀದಿಯಲ್ಲಿ ಹೆಚ್ಚಿನ ಭಕ್ತರ ಸಮೂಹದಲ್ಲಿ ಗಂಗಾಧರೇಶ್ವರ ಸ್ವಾಮಿ ರಥೋತ್ಸವವು ಅದ್ದೂರಿಯಾಗಿ ನಡೆಯಿತು ಎಂದರು.

ಈ ಸಂದರ್ಭದಲ್ಲಿ ರಣಭೈರೇಗೌಡರ ಯುವ ವೇದಿಕೆಯ ಅಧ್ಯಕ್ಷ ಮಂಜುನಾಥ್, ಕೆ.ವಿ ಪುರುಷೋತ್ತಮ್, ಲೋಕೇಶ್, ಸಿಪಿಐ ಅನಿಲ್, ಪಿಎಸ್‌ಐ ಮಂಜುನಾಥ್, ಕಂದಾಯ ಇಲಾಖೆಯ ಆರ್‌ಐ ಬಸವರಾಜು, ಡಾ.ಮಲ್ಲಿಕಾರ್ಜುನ್, ರೇಣುಕಾ ಮಲ್ಲಿಕಾರ್ಜುನ್, ಪ್ರೆಂಡ್ಸ್ ಗ್ರೂಪ್‌ನ ರವಿಕುಮಾರ್, ಮಲ್ಲಣ್ಣ, ರುದ್ರಪ್ರಸಾದ್, ಅರುಣ್, ನಾಗರಾಜು, ಪ್ರದೀಪ್, ರಮೇಶ್, ಕುದುರೆ ಸತೀಶ್, ಗೋಪಿನಾಥ್, ರವಿಕುಮಾರ್ ಸೇರಿದಂತೆ ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.