ಕೊರಟಗೆರೆ: ಅದ್ದೂರಿಯಿಂದ ಹನುಮ ಜಯಂತಿ ಆಚರಣೆ 

ಭಕ್ತಾದಿಗಳಿಗೆ ಶುಭ ಕೋರಿದ ತಹಶೀಲ್ದಾರ್ ನಾಹಿದಾ ಜಮ್ ಜಮ್.

Team Udayavani, Dec 5, 2022, 8:09 PM IST

1-D-ASDSAD

ಕೊರಟಗೆರೆ: ಪಟ್ಟಣದ ಗುಂಡಾಂಜನೇಯ ಸ್ವಾಮಿಯ ಸನ್ನಿಧಾನದಲ್ಲಿ ಹನುಮ ಜಯಂತಿ ಆಚರಣೆಯ ಅಂಗವಾಗಿ ಗುಂಡಾಂಜನೇಯ ಸ್ವಾಮಿಗೆ  ಬೆಳಗ್ಗೆಯಿಂದಲೇ ಅಭಿಷೇಕ, ವಿಶೇಷ ಹೂವಿನ ಅಲಂಕಾರ, ಪೂಜೆಗಳನ್ನುಮಾಡಲಾಯಿತು. ತಾಲೂಕು ದಂಡಾಧಿಕಾರಿ ನಾಹಿದಾ ಜಮ್ ಜಮ್, ಶ್ರೀ ಸುರಕ್ಷಾ ಚಾರಿಟೇಬಲ್ ಟ್ರಸ್ಟ್ ಮತ್ತು ಸಹಸ್ರ ಭಕ್ತಾದಿಗಳು ಅತ್ಯಂತ ವಿಜೃಂಭಣೆಯಿಂದ ಆಚರಿಸಿದರು.

ದೇವರ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ತಹಶೀಲ್ದಾರ್ ನಾಹಿದಾ ಜಮ್ ಜಮ್, ಮುಜರಾಯಿ ದೇವಸ್ಥಾನಗಳಲ್ಲಿ ಈಗಾಗಲೇ ಕೆಲವು ದೇವಸ್ಥಾನಗಳಿಗೆ ಅನುದಾನ ಬಿಡುಗಡೆಯಾಗಿದೆ, ಹಾಗೆಯೇ ಶ್ರೀ ಗುಂಡಾಜನೇಯ ಸ್ವಾಮಿ ದೇವಾಲಯಕ್ಕೂ ಕೂಡ ಹಣ ಬಿಡುಗಡೆಯಾಗಿದೆ, ಆದಷ್ಟು ಬೇಗ ಕೆಲಸ ಪ್ರಾರಂಭಿಸಲು ಅನುಮತಿ ನೀಡಲಾಗುವುದು, ಹಾಗೆಯೇ ಶ್ರೀ ಗುಂಡಾಂಜನೇಯ ಸ್ವಾಮಿಯು ಎಲ್ಲ ಭಕ್ತಾದಿಗಳಿಗೂ ಆರೋಗ್ಯ, ಐಶ್ವರ್ಯವನ್ನು ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಸುರಕ್ಷಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ನಾಗರಾಜು ಮಾತನಾಡಿ, ಶ್ರೀ ಗುಂಡಾಂಜನೇಯ ಸ್ವಾಮಿಯು ಪುರಾತನ ಕಾಲದಿಂದಲೂ ಇಲ್ಲಿ ನೆಲೆಸಿ ಬೇಡಿ ಬಂದ ಭಕ್ತಾದಿಗಳ ಕಷ್ಟಗಳನ್ನು ನಿವಾರಿಸುತ್ತಿದ್ದಾನೆ, ಹಾಗೆಯೇ ಪುರಾತನ ಕಾಲದಿಂದಲೂ ದೇವಸ್ಥಾನವು ಹಾಗೆಯೇ ಇದೆ, ಇತ್ತೀಚಿಗೆ ನಾವೆಲ್ಲ ಸದಸ್ಯರುಗಳು ಸೇರಿ ಸುರಕ್ಷಾ ಒಂದು ಸಂಸ್ಥೆಯನ್ನು ಕಟ್ಟಿಕೊಂಡು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಮುಂದಾಗಿದ್ದೇವೆ, ಆದರೆ ಮುಜರಾಯಿ ಇಲಾಖೆಗೆ ಒಳಪಡುವ ಈ ದೇವಸ್ಥಾನವನ್ನು ಇದುವರೆಗೂ ಯಾವ ಅಧಿಕಾರಿಯೂ ಕೂಡ ಜೀರ್ಣೋದ್ಧಾರ ಮಾಡಲು ಮುಂದಾಗಿಲ್ಲ, ಇಲ್ಲಿಂದ ಭಕ್ತರು ನೀಡುವ ಹುಂಡಿಯ ಹಣವನ್ನು ಮಾತ್ರ ತೆಗೆದುಕೊಂಡು ಹೋಗುತ್ತಾರೆ, ಇನ್ನಾದರೂ ಸರ್ಕಾರ ಈ ಬಗ್ಗೆ ಗಮನ ಹರಿಸಿ ಮುಜರಾಯಿ ದೇವಸ್ಥಾನಗಳನ್ನು ಜೀರ್ಣೋದ್ಧಾರವನ್ನು ಮಾಡಬೇಕಿದೆ ಎಂದರು.

ಉಪಾಧ್ಯಕ್ಷ ರಾಘವೇಂದ್ರ ಮಾತನಾಡಿ, ನಮ್ಮ ಪೂರ್ವಜರ ಕಾಲದಿಂದಲೂ ಸುತ್ತ ಮುತ್ತಲಿನ ಜನರಲ್ಲದೆ ರಾಜ್ಯದ ವಿವಿಧ  ಭಾಗಗಳಿಂದ ಇಲ್ಲಿಗೆ ಭಕ್ತಾದಿಗಳು ಬರುತ್ತಾರೆ,  ಭಕ್ತಾದಿಗಳು ಬೇಡಿದ ವರವನ್ನು ಶ್ರೀ ಆಂಜನೇಯ ಸ್ವಾಮಿಯು ಈಡೇರಿಸುತ್ತಾನೆ ಎನ್ನುವ ನಂಬಿಕೆಯಿಂದಲೇ ಇಂದಿಗೂ ಸಹಸ್ರಾರು ಭಕ್ತಾದಿಗಳ ದಂಡು ಬರುತ್ತಿದ್ದಾರೆ, ಆದರೆ ಬಂದ ಭಕ್ತಾದಿಗಳಿಗೆ ಕುಳಿತುಕೊಳ್ಳಲು, ವಿಶ್ರಾಂತಿಸಲು ಜಾಗವಿಲ್ಲ, ಆದಷ್ಟು ಬೇಗ ಸರಿಪಡಿಸಬೇಕಿದೆ ಎಂದು ತಿಳಿಸಿದರು.

ಕಾರ್ಯದರ್ಶಿ ಕೆಎನ್ ಸುರೇಶ್ ಮಾತನಾಡಿ, ನಮ್ಮ ತಾತ ಮುತ್ತಾತನ ಕಾಲದಿಂದಲೂ ಶ್ರೀ ಆಂಜನೇಯ ಸ್ವಾಮಿಯ ಭಕ್ತಾದಿಗಳೇ ನಾವೆಲ್ಲರೂ, ಇಂದಿಗೂ ಪ್ರತಿ ಶನಿವಾರ ನಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಳ್ಳುತ್ತೇವೆ, ಸಹಸ್ರಾರು ಭಕ್ತಾದಿಗಳು ಬರುವ ಶ್ರೀ ಆಂಜನೇಯ ಸ್ವಾಮಿ ಸನ್ನಿಧಾನವು ಹಿಂದಿನಿಂದಲೂ ಯಾವುದೇ ಅಭಿವೃದ್ಧಿಯನ್ನು ಕಂಡಿಲ್ಲ, ಭಕ್ತಾದಿಗಳೇ ಸಣ್ಣ ಪುಟ್ಟ ದೇವಸ್ಥಾನದ ಕೆಲಸಗಳನ್ನು ಮಾಡಿಸುತ್ತಿದ್ದಾರೆ, ಸರ್ಕಾರವು ಇತ್ತ ಕಡೆ ಗಮನ ಹರಿಸಬೇಕಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳು ಹಾಗೂ ಸುರಕ್ಷಾ ಚಾರಿಟೇಬಲ್ ಟ್ರಸ್ಟ್ ಆಡಳಿತ ಮಂಡಳಿಯ  ಅಧ್ಯಕ್ಷರಾದ ಶಿವಶಂಕರ್, ಗೌರವಾಧ್ಯಕ್ಷರಾದ ನಾಗರಾಜು, ಉಪಾಧ್ಯಕ್ಷರಾದ ರಾಘವೇಂದ್ರ, ಕಾರ್ಯದರ್ಶಿ ಕೆಎನ್ ಸುರೇಶ್, ಖಜಾಂಚಿ ಮಧುಸೂಧನ್ ಸೇರಿದಂತೆ ಎಲ್ಲ ಸದಸ್ಯರು ಹಾಗೂ ಭಕ್ತಾದಿಗಳು ಹಾಜರಿದ್ದರು.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

Lok Sabha Elections; ಶಾಂತಿಯುತ ಮತದಾನಕ್ಕೆ ಸಿದ್ದತೆ : ಡಿವೈಎಸ್‌ಪಿ ಓಂ ಪ್ರಕಾಶ್

Lok Sabha Elections; ಶಾಂತಿಯುತ ಮತದಾನಕ್ಕೆ ಸಿದ್ದತೆ : ಡಿವೈಎಸ್‌ಪಿ ಓಂ ಪ್ರಕಾಶ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.