11 ಕೋಟಿ 11 ಲಕ್ಷ ಕಾಮಗಾರಿಗೆ ಮಾಜಿ ಡಿಸಿಎಂ ಚಾಲನೆ

ಜಂಪೇನಹಳ್ಳಿ ಕೆರೆಗೆ ಶಾಸಕರಿಂದ ಗಂಗಾಪೂಜೆ; ಒತ್ತುವರಿ ತೆರವಿಗೆ ಖಡಕ್ ಸೂಚನೆ

Team Udayavani, Nov 23, 2022, 9:11 AM IST

1

ಕೊರಟಗೆರೆ: 15 ವಾರ್ಡುಗಳ ಸಮಗ್ರ ಅಭಿವೃದ್ದಿಗೆ 11 ಕೋಟಿ 11 ಲಕ್ಷದ ಕಾಮಗಾರಿಗೆ ಅಡಿಗಲ್ಲು ಹಾಕಿದ್ದೇನೆ. 10 ಕೋಟಿ ವೆಚ್ಚದ ಕೊರಟಗೆರೆ ಪಟ್ಟಣದ ಮುಖ್ಯರಸ್ತೆಯ ಕಾಮಗಾರಿಯು ಪ್ರಸ್ತುತ ಮುಗಿದಿದೆ. ಅಭಿವೃದ್ದಿ ವಿಚಾರದಲ್ಲಿ ರಾಜಕೀಯದ ಬಣ್ಣಬೇಡ, ರಾಜಕೀಯ ನಾಯಕರಿಗೆ ಕೀಳು ಭಾವನೆಯ ಮನಸ್ಥಿತಿ ಒಳ್ಳೆಯದಲ್ಲ. ನನಗೆ ಕೊರಟಗೆರೆ ಪಟ್ಟಣದ ಸಮಗ್ರ ಅಭಿವೃದ್ದಿಯೇ ಮುಖ್ಯ ಎಂದು ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ತಿಳಿಸಿದರು.

ಪಟ್ಟಣದ ಪಪಂಯಿಂದ ಮಂಗಳವಾರ ಏರ್ಪಡಿಸಲಾಗಿದ್ದ 15 ವಾರ್ಡುಗಳಲ್ಲಿ 11ಕೋಟಿ 11 ಲಕ್ಷ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ ವೇಳೆ ಮಾತನಾಡಿದರು.

ಗೋಕುಲದ ಕೆರೆಯ ಸುತ್ತಲು ಸುಸಜ್ಜಿತ ಉದ್ಯಾನವನ ನಿರ್ಮಾಣಕ್ಕೆ 10 ಕೋಟಿ ಅನುದಾನಕ್ಕೆ ಸರಕಾರಕ್ಕೆ ಮನವಿ ಮಾಡಿದ್ದೇನೆ. ಕೊರಟಗೆರೆ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ 2 ಕೋಟಿ ವೆಚ್ಚದ ಮಲ್ಲೇಶಪರ ಸೇತುವೆ ಈಗಾಗಲೇ ಪೂರ್ಣವಾಗಿದೆ. ಕೊರಟಗೆರೆ ಪಟ್ಟಣದಲ್ಲಿ ಅಭಿವೃದ್ದಿಯ ವಾತಾವರಣ ನಿರ್ಮಾಣವಾಗಿದೆ. ಕೊರಟಗೆರೆ ಕ್ಷೇತ್ರದ ಅಭಿವೃದ್ದಿಯ ಅಂಕಿ-ಅಂಶದ ದಾಖಲೆಯನ್ನು ನಿಮಗೆ ನೀಡಿ ಮತ್ತೆ ಚುನಾವಣೆಗೆ ನಿಮ್ಮ ಮುಂದೆ ಬರುತ್ತೇನೆ ಎಂದು ತಿಳಿಸಿದರು.

ಕೊರಟಗೆರೆ ಪ.ಪಂ. ಅಧ್ಯಕ್ಷೆ ಕಾವ್ಯ ರಮೇಶ್ ಮಾತನಾಡಿ, ಟಿಎಸ್‌ಪಿ ಅನುಧಾನ189ಲಕ್ಷ, ಎಸ್‌ಸಿಎಸ್‌ಪಿ ಅನುದಾನ-96 ಲಕ್ಷ, ಎಸ್‌ಎಫ್‌ಸಿ 6 ಕೋಟಿ, 14ನೇ ಹಣಕಾಸು ಅನುದಾನ-38 ಲಕ್ಷ, 15ನೇ ಹಣಕಾಸು ಅನುದಾನ-157 ಲಕ್ಷ ಮತ್ತು ಎಸ್‌ಎಫ್‌ಸಿ ಅನುಧಾನ 29 ಲಕ್ಷ ಸೇರಿ ಒಟ್ಟು 11 ಲಕ್ಷ 11 ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗೆ ಪಟ್ಟಣದ 15 ವಾರ್ಡುಗಳಲ್ಲಿ ಚಾಲನೆ ನೀಡಲಾಗಿದೆ. ಪಟ್ಟಣದ ಅಭಿವೃದ್ದಿಗೆ ಶಾಸಕರ ಇನ್ನಷ್ಟು ಸಹಕಾರ ನಮಗೆ ಅಗತ್ಯವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ.ಪಂ. ಅಧ್ಯಕ್ಷೆ ಕಾವ್ಯಶ್ರೀ, ಉಪಾಧ್ಯಕ್ಷೆ ಭಾರತಿ, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎನ್.ನಟರಾಜ್, ಮುಖ್ಯಾಧಿಕಾರಿ ಭಾಗ್ಯಮ್ಮ, ಸದಸ್ಯರಾದ ಕೆ.ಆರ್.ಓಬಳರಾಜು, ಪುಟ್ಟನರಸಪ್ಪ, ಎ.ಡಿ.ಬಲರಾಮಯ್ಯ, ನಾಗರಾಜು, ಲಕ್ಷ್ಮೀನಾರಾಯಣ್, ನಂದೀಶ್, ಹುಸ್ನಾಫಾರಿಯಾ, ಅನಿತಾ, ಹೇಮಾಲತಾ, ಪ್ರದೀಪ್ ಕುಮಾರ್, ಮಂಜುಳ, ಪ್ರೇಮ್‌ಕುಮಾರ್, ಗೋವಿಂದರಾಜು, ರಂಗನಾಥ್ ಸೇರಿದಂತೆ ಇತರರು ಇದ್ದರು.

ಕೆರೆ ಒತ್ತುವರಿ ತೆರವಿಗೆ ಶಾಸಕ ಸೂಚನೆ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಡೆದು ಹೋದ ಕಾವರ್ಗಲ್ ಕಂಬದಹಳ್ಳಿ ಕೆರೆಗೆ ಜಿಪಂ ಸಿಇಓ ಡಾ.ವಿದ್ಯಾಕುಮಾರಿ ಜೊತೆ ಶಾಸಕ ಡಾ.ಜಿ.ಪರಮೇಶ್ವರ್ ಬೇಟಿ ನೀಡಿ ಪರಿಶೀಲನೆ ನಡೆಸಿ ತಕ್ಷಣ ಪುನಶ್ಚೇತನಕ್ಕೆ ಅನುದಾನ ನೀಡುವಂತೆ ಆಗ್ರಹಿಸಿದರು. ನಂತರ ಜಂಪೇನಹಳ್ಳಿಗೆ ಕೆರೆಗೆ ಗಂಗಾ ಪೂಜೆ ಅರ್ಪಿಸಿ ಬಳಿಕ ಕೆರೆಯ ಒತ್ತುವರಿ ತೆರವು ಮತ್ತು ಪುನಶ್ಚೇತನ ಕಾಮಗಾರಿಗೆ ತಕ್ಷಣ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವೃಕ್ಷ ಉದ್ಯಾನವನಕ್ಕೆ 9 ಎಕ್ರೆ ಜಮೀನು ಮಂಜೂರು

ವೃಕ್ಷ ಉದ್ಯಾನವನ ನಿರ್ಮಾಣಕ್ಕೆ ರಾಜ್ಯ ಸರಕಾರ ಸರ್ವೇ ನಂ.174ರಲ್ಲಿ 9 ಎಕ್ರೆ ಜಮೀನು ಮಂಜೂರು ಮಾಡಿದೆ. ಸುಂದರ ಉದ್ಯಾನವನಕ್ಕಾಗಿ 250 ಲಕ್ಷ ಅನುದಾನಕ್ಕೂ ಮನವಿ ಮಾಡಿದ್ದು ಈಗಾಗಲೇ 50 ಲಕ್ಷ ಅನುದಾನ ಬಿಡುಗಡೆ ಆಗಿದೆ. ಸುಂದರ ಕೊರಟಗೆರೆ ಪಟ್ಟಣ ನಿರ್ಮಾಣಕ್ಕಾಗಿ ಕಲಾಭವನಕ್ಕೆ 50 ಕೋಟಿ ವೆಚ್ಚದ ಕಲಾಭವನವನ್ನು ನಾನು ಮಾಡೇ ಮಾಡ್ತೀನಿ ಎಂದು ಶಾಸಕ ಡಾ.ಜಿ.ಪರಮೇಶ್ವರ್ ಪಟ್ಟಣದ ಜನತೆಗೆ ಭರವಸೆ ನೀಡಿದರು.

35 ವರ್ಷದ ರಾಜಕೀಯ ಜೀವನದಲ್ಲಿ ನಾನೆಂದು ಚಿಲ್ಲರೇ ರಾಜಕೀಯ ಮಾಡಿಲ್ಲ. ಅಭಿವೃದ್ದಿ ವಿಚಾರದಲ್ಲಿ ನಾನು ಯಾರಿಗೂ ಹೆದರುವ ನಾಯಕನಲ್ಲ. ನಾನು ನನಗೋಸ್ಕರ ಕೆಲಸ ಮಾಡುತ್ತಿಲ್ಲ. ಕೊರಟಗೆರೆ ಜನತೆಗಾಗಿ ಕೆಲಸ ಮಾಡ್ತೀದಿನಿ. ಕೊರಟಗೆರೆ ಕ್ಷೇತ್ರದ ಜನತೆಯ ಋಣ ನನ್ನ ಮೇಲಿದೆ. ನಾನು ಇರುವವರೆಗೆ ಅನುದಾನ ತಂದು ಕೊರಟಗೆರೆ ಜನರ ಕೆಲಸ ಮಾಡೇ ಮಾಡ್ತೀನಿ. –ಡಾ.ಜಿ.ಪರಮೇಶ್ವರ, ಶಾಸಕ, ಕೊರಟಗೆರೆ

ಟಾಪ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

1-fwwewewqe

ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಪ್ರಧಾನಿಯಾಗುವುದಿಲ್ಲ: ಬಿಹಾರದಲ್ಲಿ ಗುಡುಗಿದ ಶಾ

b-l-santhosh

ಬಿ. ಎಲ್‌ ಸಂತೋಷ್‌ ಭಾಷಣಕ್ಕೆ ಅಧಿಕಾರಿಗಳ ಆಕ್ಷೇಪ… ಬಿಜೆಪಿ ಸಭೆಯಲ್ಲಿ ಆಗಿದ್ದೇನು?

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

Shashi Taroor

ವಿಪಕ್ಷ ಮೈತ್ರಿಕೂಟದ ಸಂಚಾಲಕರಾಗಲು ಸಣ್ಣ ಪಕ್ಷವನ್ನು ಪ್ರೋತ್ಸಾಹಿಸುತ್ತೇನೆ: ತರೂರ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-5

ದೇವಸ್ಥಾನ ಜೀರ್ಣೋದ್ದಾರ ವೇಳೆ: ಚೋಳರಕಾಲದ 65 ಚಿನ್ನದ ನಾಣ್ಯ ಪತ್ತೆ

ಜಗತ್ತೇ ಸಿದ್ಧಗಂಗಾ ಮಠದತ್ತ ಆಕರ್ಷಿಸಿದ ವ್ಯಕ್ತಿತ್ವ ಪೂಜ್ಯರದ್ದು

ಜಗತ್ತೇ ಸಿದ್ಧಗಂಗಾ ಮಠದತ್ತ ಆಕರ್ಷಿಸಿದ ವ್ಯಕ್ತಿತ್ವ ಪೂಜ್ಯರದ್ದು

ಕೊರಟಗೆರೆ: ಚೆಕ್ ಪೋಸ್ಟ್ ತೆರೆಯಲು ಸ್ಥಳ ಪರಿಶೀಲನೆ ನಡೆಸಿದ ಚುನಾವಣಾಧಿಕಾರಿ

ಕೊರಟಗೆರೆ: ಚೆಕ್ ಪೋಸ್ಟ್ ತೆರೆಯಲು ಸ್ಥಳ ಪರಿಶೀಲನೆ ನಡೆಸಿದ ಚುನಾವಣಾಧಿಕಾರಿ

tdy-19

ಅನುಮತಿಯಿಲ್ಲದೇ ಜಾಹೀರಾತು ಅಂಟಿಸಿದರೆ ಶಿಕ್ಷೆ

ಶ್ರೀನಿವಾಸ್‌ ಸೇರ್ಪಡೆಗೆ ಕಾಂಗ್ರೆಸಿಗರ ವಿರೋಧ

ಶ್ರೀನಿವಾಸ್‌ ಸೇರ್ಪಡೆಗೆ ಕಾಂಗ್ರೆಸಿಗರ ವಿರೋಧ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-saddsadsad

ಉತ್ತರಾಖಂಡದಲ್ಲಿ ಕಂದಕಕ್ಕೆ ಬಿದ್ದ 22 ಪ್ರಯಾಣಿಕರಿದ್ದ ಬಸ್

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

Salim Durani

ಇಹಲೋಕ ತ್ಯಜಿಸಿದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ