Koratagere: ಆಕಸ್ಮಿಕ ಬೆಂಕಿಗೆ 4 ಗುಡಿಸಲು ಭಸ್ಮ, ಮೂರು ಮೇಕೆಗಳು ಸಜೀವ ದಹನ
Team Udayavani, Apr 10, 2023, 9:18 PM IST
ಕೊರಟಗೆರೆ: ರೈತರು ಜಮೀನಿನಲ್ಲಿ ಕಸದ ಗುಡ್ಡೆಗೆ ಇಡಲಾದ ಬೆಂಕಿ, ಗಾಳಿ ಜೋರಾಗಿ ಬೀಸಿದ ಪರಿಣಾಮ ಗುಡಿಸಲಿಗೆ ಪ್ರಸರಿಸಿ ಆರು ಗುಡಿಸಲುಗಳು ಹಾಗೂ ಎರಡು ಹುಲ್ಲಿನ ಬಣವೆ ಬೆಂಕಿಗೆ ಆಹುತಿಯಾಗಿ ಹಾಗೂ 3 ಮೇಕೆಗಳು ಸ್ಥಳದಲ್ಲಿಯೇ ಸಜೀವ ದಹನವಾಗಿರುವ ಮನ ಕಲಕುವ ಘಟನೆಯೊಂದು ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಲ್ಲೂಕಿನ ಬೈಚಾಪುರ ಗ್ರಾ.ಪಂ ವ್ಯಾಪ್ತಿಯ ಚಿಕ್ಕನಹಳ್ಳಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಸುಶೀಲಮ್ಮ, ಸಣ್ಣಚೆನ್ನಪ್ಪ , ಕರಿಯಣ್ಣ, ವೆಂಕಟರವಣಪ್ಪ, ಶಿವಮ್ಮ ಎಂಬುವರ ಗುಡಿಸಲುಗಳು ಭಸ್ಮವಾದರೆ , ಲಕ್ಷ್ಮಿಪತಿ ಎಂಬವರಿಗೆ ಸೇರಿದ ಹುಲ್ಲಿನ ಬಣವೆ ಬೆಂಕಿಗೆ ಆಹುತಿಯಾಗಿದೆ. ವೆಂಕಟಪ್ಪ ಚನ್ನಪ್ಪ ಎಂಬುವರ ನಾಲ್ಕು ಮೇಕೆಗಳು ಸಜೀವ ದಹನವಾಗಿವೆ.
ಭಾನುವಾರ ಮಧ್ಯಾಹ್ನ ಪಕ್ಕದ ರೈತರ ಜಮೀನಿನಲ್ಲಿ ಹುಲ್ಲು ಹಾಯ್ದು ಕಸ ಕಡ್ಡಿಗೆ ಬೆಂಕಿ ಇಡಲಾದ ಸಂದರ್ಭದಲ್ಲಿ ಆಕಸ್ಮಿಕವಾಗಿ ಗಾಳಿಗೆ ಬೆಂಕಿಯ ಕಿಡಿಗಳು ಗುಡಿಸಲಿಗೆ ತಾಗಿ ಬೆಂಕಿ ಪ್ರಸರಿಸಿದೆ.
ಸಾರ್ವಜನಿಕರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರೂ ಪ್ರಯೋಜನವಾಗದೆ ಕೈ ಕಟ್ಟಿ ಕೂರುವಂತಾಯಿತು.
ಅಗ್ನಿಶಾಮಕ ದಳ ಆಗಮಿಸುವ ಹೊತ್ತಿಗೆ ಎಲ್ಲಾವೂ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿ ಬಡ ರೈತಾಪಿ ವರ್ಗದ ಹುಲ್ಲಿನ ಬಣವೆ , ದಿನಸಿ ಸಾಮಗ್ರಿಗಳು ಸೇರಿದಂತೆ ದಿನ ಬಳಕೆ ಬಟ್ಟೆಗಳು ಸಹ ಬೆಂಕಿ ಕೆನ್ನಾಲಿಗಿಗೆ ಸುಟ್ಟು ಭಸ್ಮವಾಗಿದ್ದು, ಬಡ ರೈತಾಪಿ ವರ್ಗ ಚಿಂತಾ ಕ್ರಾಂತರಾಗಿ ಸರ್ಕಾರದ ಮೊರೆ ಹೋಗುವಂತಾಗಿದೆ.
ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ತಹಸೀಲ್ದಾರ್ ಮುನಿಶಾಮಿ ರೆಡ್ಡಿ ,ಸಿಪಿಐ ಕೆ ಸುರೇಶ್, ಪಿಎಸ್ಐ ಪ್ರದೀಪ್ ಸಿಂಗ್ ಸ್ಥಳಕ್ಕೆ ಆಗಮಿಸಿ ರೈತರ ನಷ್ಟದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ಅತಿ ಶೀಘ್ರವಾಗಿ ಬಡ ರೈತರಿಗೆ ಸರಕಾರದಿಂದ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಹೆಚ್ಚು ಶ್ರಮವಿಸುವುದಾಗಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಇದನ್ನೂ ಓದಿ: Video: ಸಿಗರೇಟ್ ಸೇದುತ್ತಾ ರಾಷ್ಟ್ರಗೀತೆಗೆ ಅಪಮಾನ… ಇಬ್ಬರು ಯುವತಿಯರ ವಿರುದ್ಧ FIR
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ