ಸರಿಯಾಗಿ ಊಟ ನೀಡದ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳ ದೂರು: ಆತ್ಮಹತ್ಯೆಗೆ ಯತ್ನಿಸಿದ ವಾರ್ಡನ್

ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಾರ್ಡನ್ ಹೈಡ್ರಾಮ

Team Udayavani, Jun 23, 2022, 9:30 PM IST

ಸರಿಯಾಗಿ ಊಟ ನೀಡದ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳ ದೂರು: ಆತ್ಮಹತ್ಯೆಗೆ ಯತ್ನಿಸಿದ ವಾರ್ಡನ್

ಕೊರಟಗೆರೆ : ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಸಮರ್ಪಕ ಊಟ-ಉಪಹಾರ ಇಲ್ಲದ ಪರಿಣಾಮ ವಿದ್ಯಾರ್ಥಿಗಳು ಪ್ರಾಂಶುಪಾಲರಿಗೆ ದೂರು ನೀಡಿರುವ ಹಿನ್ನಲೆಯಲ್ಲಿ ವಾರ್ಡನ್ ವಿಷ ಕುಡಿಯುವ ಬೇದರಿಕೆಯ ಜೊತೆಯಲ್ಲಿ ಕೊಠಡಿಯೊಳಗೆ ಬಾಗಿಲು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಹೈಡ್ರಾಮವೊಂದು ಮುಂಜಾನೆ ನಡೆದಿದೆ.

ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹುಲೀಕುಂಟೆ ಸಮೀಪದ ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಹೈಡ್ರಾಮ ನಡೆದಿದೆ. ವಸತಿ ಶಾಲೆಯಲ್ಲಿ 6 ರಿಂದ 10ತರಗತಿಯಲ್ಲಿ 250 ಜನ ಮಹಿಳಾ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತೀದ್ದಾರೆ. ಮಹಿಳಾ- 7 ಮತ್ತು ಪುರುಷ-4 ಶಿಕ್ಷಕರಿದ್ದಾರೆ. ಪ್ರತಿವರ್ಷವು ಸಹ ಹುಲೀಕುಂಟೆ ವಸತಿಶಾಲೆಗೆ ಉತ್ತಮ ಫಲಿತಾಂಶವು ಬರುತ್ತೀದೆ.

ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಬೆಳಿಗ್ಗೆ 9 ಗಂಟೆಗೆ ತಿಂಡಿ, ಮಧ್ಯಾಹ್ನ 1 ಗಂಟೆಗೆ ಊಟ, ಸಂಜೆ 5 ಗಂಟೆಗೆ ಲಘು ಉಪಹಾರ, ರಾತ್ರಿ-8 ಗಂಟೆಗೆ ಊಟ ನೀಡಬೇಕಿದೆ. ಆದರೇ ಸಮಯಕ್ಕೆ ಸರಿಯಾಗಿ ಊಟವು ಇಲ್ಲ ತಿಂಡಿಯು ಮಕ್ಕಳಿಗೆ ಸೀಗುತ್ತೀಲ್ಲ. ರುಚಿಯಾದ ಊಟವು ಮರೀಚಿಕೆ ಆಗಿದೆ. ಭಾನುವಾರ ನಮ್ಮನ್ನು ಕೇಳೋರೇ ಇಲ್ಲ ಎಂದು ವಿದ್ಯಾರ್ಥಿಗಳು ವಾರ್ಡನ್ ವಿರುದ್ದ ಆರೋಪ ಮಾಡಿದ್ದಾರೆ.

ಊಟದ ವಿಚಾರದಲ್ಲಿ ವಿದ್ಯಾರ್ಥಿಗಳು ಪ್ರಶ್ನೆ ಮಾಡಿದ್ದಕ್ಕೆ ವಾರ್ಡನ್ ಏಕಾಏಕಿ ಯೋಗಬ್ಯಾಸದ ಸಮಯದಲ್ಲಿ ವಿಷದ ಬಾಟೀಲು ತೋರಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಬೇದರಿಕೆ ಹಾಕಿದ್ದಾರೆ. ನಂತರ ಕೊಠಡಿಯೊಳಗೆ ಬಾಗಿಲು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸುವಾಗ ಬಾಗೀಲು ಹೊಡೆದು ಹೊರಗಡೆ ಕರೆತಂದಿದ್ದಾರೆ. ವಸತಿಶಾಲೆಯಲ್ಲಿ ವಿಷದ ಬಾಟೀಲು ಹೇಗೆ ಬಂತು, ಶಾಲೆಯೊಳಗೆ ಆತ್ಮಹತ್ಯೆಯ ಹೈಡ್ರಾಮದ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕಿದೆ.

ಇದನ್ನೂ ಓದಿ : ದೀರ್ಘಾವಧಿ ರಫ್ತಿಗೆ ಯೋಜನೆಗಳನ್ನು ರೂಪಿಸಿ: ಉದ್ಯಮಿಗಳಿಗೆ ಮೋದಿ

ಜಂಟಿ ನಿರ್ದೇಶಕಿ ಬೇಟಿ ಪರಿಶೀಲನೆ..
ಹುಲೀಕುಂಟೆ ಕಿತ್ತೂರುರಾಣಿ ವಸತಿಶಾಲೆಗೆ ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೇಮಾ, ಜಿಲ್ಲಾ ಸಮನ್ವಯ ಅಧಿಕಾರಿ ಕಸ್ತೂರಿಕುಮಾರ್ ಬೇಟಿ ನೀಡಿ ಪ್ರಾಂಶುಪಾಲರು, ವಾರ್ಡನ್, ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಮಾಹಿತಿಗೆ ಕಲೆಹಾಕಿದ್ದಾರೆ. ಬೈಚಾಪುರ ಮತ್ತು ಹುಲೀಕುಂಟೆ ಎರಡು ಕಡೆಯಲ್ಲಿ ವಾರ್ಡನ್ ಆಗಿ ಕೆಲಸ ನಿರ್ವಹಣೆ ಮಾಡುತ್ತೀರುವ ತಾರಾಗೆ ಎಚ್ಚರಿಕೆ ನೀಡಿ ಘಟನೆ ಮತ್ತೇ ಮರುಕಳಿಸದಂತೆ ಸೂಚನೆ ನೀಡಿದ್ದಾರೆ.

ಪ್ರಾಂಶುಪಾಲರು ಮತ್ತು ಶಿಕ್ಷಕರು ನನ್ನ ಮೇಲೆ ವಿನಾಕಾರಣ ಪ್ರತಿನಿತ್ಯ ಮಾನಸಿಕ ಕಿರುಕುಳ ನೀಡುತ್ತೀದ್ದಾರೆ. ವಿದ್ಯಾರ್ಥಿಗಳಿಗೆ ಮಾತ್ರ ಊಟಕ್ಕೆ ಅವಕಾಶವಿದೆ. ಆದರೇ ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ಊಟ ನೀಡಬೇಕಂತೆ. ಊಟ ನೀಡದಿದ್ದಕ್ಕೆ ನನ್ನ ಮೇಲೆ ವಿದ್ಯಾರ್ಥಿಗಳ ಮೂಲಕ ಆರೋಪ ಮಾಡಿಸುತ್ತೀದ್ದಾರೆ.
– ತಾರಾ. ವಾರ್ಡನ್. ಕಿತ್ತೂರುರಾಣಿ ಚೆನ್ನಮ್ಮ ವಸತಿಶಾಲೆ. ಹುಲೀಕುಂಟೆ

ವಿದ್ಯಾರ್ಥಿಗಳಿಗೆ ಸಮರ್ಪಕ ಊಟ ನೀಡುವುದು ನಮ್ಮ ಕರ್ತವ್ಯ. ಊಟ ವಿಚಾರದಲ್ಲಿ ವಿದ್ಯಾರ್ಥಿಗಳು ನನಗೆ ದೂರು ನೀಡಿದ್ದಾರೆ. ನಾನು ಈಗಾಗಲೇ ಎರಡು ಸಲ ನೊಟೀಸ್ ಜಾರಿ ಮಾಡಿದ್ದೇನೆ. ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವ ಬೇದರಿಕೆ ಹಾಕಿದ್ದಾರೆ. ತುಮಕೂರು ಜಂಟಿ ನಿರ್ದೇಶಕಿ ಪ್ರೇಮಾ ಈಗಾಗಲೇ ಪರಿಶೀಲನೆ ನಡೆಸಿ ಕ್ರಮಕ್ಕೆ ಸೂಚಿಸಿದ್ದಾರೆ.
ಜ್ಯೋತಿ. ಪ್ರಾಂಶುಪಾಲರು. ಕಿತ್ತೂರುರಾಣಿ ಚೆನ್ನಮ್ಮ ವಸತಿಶಾಲೆ. ಹುಲೀಕುಂಟೆ.

ವಾರ್ಡನ್ ಆತ್ಮಹತ್ಯೆಗೆ ಯತ್ನಿಸಿದ ಘಟನೆಯ ವರದಿಯನ್ನು ಸರಕಾರಕ್ಕೆ ಸಲ್ಲಿಸುತ್ತೇನೆ. ನಾನೇ ಖುದ್ದು ವಸತಿಶಾಲೆಗೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಊಟದ ವಿಚಾರದಲ್ಲಿ ವಿದ್ಯಾರ್ಥಿಗಳು ವಾರ್ಡನ್ ವಿರುದ್ದ ದೂರಿದ್ದಾರೆ. ವಿಷಕಾರದ ಔಷದಿಯುಳ್ಳ ಯಾವುದೇ ವಸ್ತುವನ್ನು ವಸತಿ ಶಾಲೆಯೊಳಗೆ ಶೇಖರಣೆ ಮಾಡುವ ಆಗಿಲ್ಲ. ಸಮರ್ಪಕ ತನಿಖೆಗೆ ಇಲಾಖೆಗೆ ಈಗಾಗಲೇ ಪತ್ರ ಬರೆದಿದ್ದೇನೆ.
– ಪ್ರೇಮಾ. ಜಂಟಿ ನಿರ್ದೇಶಕಿ. ಸಮಾಜ ಕಲ್ಯಾಣ ಇಲಾಖೆ. ತುಮಕೂರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.