ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಿದ ಕೊರಟಗೆರೆ ತಹಶೀಲ್ದಾರ್ 

ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ

Team Udayavani, Oct 15, 2022, 9:36 PM IST

1-ddasd

ಕೊರಟಗೆರೆ: ತಾಲೂಕಿನ ಕಸಬಾ ಹೋಬಳಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿನ್ನೆಪಾಳ್ಯ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಯ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಡಿಯಲ್ಲಿ ಇದುವರೆಗೂ ಪಿಂಚಣಿ ಕಾಣದ ಒಂದೇ ಗ್ರಾಮದ 25 ವೃದ್ಧರಿಗೆ ಸ್ಥಳದಲ್ಲಿಯೇ ಪಿಂಚಣಿ ಪತ್ರ ಮಂಜೂರಾತಿ ಸ್ಥಳೀಯ ಸಾರ್ವಜನಿಕರ ಹತ್ತಾರು ಸಮಸ್ಯೆಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳ ಮುಖೇನ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಕೆಲಸ ಮಾಡಲಾಯಿತು.

ಮೂರು ವರ್ಷಗಳ ಹಿಂದೆ ಶಾಲೆಗೆ ಕಾಂಪೌಂಡ್, ಶೌಚಾಲಯ ಹಾಗೂ ಅಡುಗೆ ಕೋಣೆ ನಿರ್ಮಿಸುವಂತೆ ಮೂರು 3ವರ್ಷಗಳ ಹಿಂದೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಇಲ್ಲಿವರೆಗೆ ಯಾವುದೇ ಕೆಲಸವಾಗಿಲ್ಲ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಎಚ್. ಹರೀಶ್ ಬಾಬು ಆರೋಪ ಮಾಡಿದರು.

ತಾಲೂಕಿನ ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿನ್ನೆಪಾಳ್ಯ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿಕಡೆ ಕಾರ‍್ಯಕ್ರಮದಲ್ಲಿ ಬೋಡಬಂಡೇನಹಳ್ಳಿಯ ಶಾಲಾ ಕಾಂಪೌಂಡ್ ಇತರೆ ಸಮಸ್ಯೆಗಳ ಬಗ್ಗೆ ವೇಳೆ ಅವರು ಮಾತನಾಡಿದರು.

1 ರಿಂದ 7 ನೇ ತರಗತಿ ವರೆಗೆ 65 ಜನ ವಿದ್ಯಾರ್ಥಿಗಳು ಶಾಲೆಯಲ್ಲಿ ಕಲಿಕೆಯಲ್ಲಿದ್ದಾರೆ. ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ಇಲ್ಲದ ಕಾರಣದಿಂದಾಗಿ ಅನೇಕ ವಿದ್ಯಾರ್ಥಿಗಳು ಬೇರೆ ಶಾಲೆಗೆ ದಾಖಲಾಗಿದ್ದಾರೆ. ಇದರಿಂದ ನಮ್ಮೂರಿನ ಶಾಲೆಯ ದಾಖಲಾತಿ ಸಂಖ್ಯೆ ಗಣನೀಯವಾಗಿ ಕುಸಿಯುತ್ತಿದೆ. ಶೀಘ್ರವಾಗಿ ಮೂಲಭೂತ ಸೌಕರ್ಯ ಒದಗಿಸದಿದ್ದರೆ ಇನ್ನಷ್ಟು ಪೋಷಕರು ತಮ್ಮ ಮಕ್ಕಳನ್ನು ಬೇರೆ ಶಾಲೆಗಳಿಗೆ ದಾಖಲು ಮಾಡಲು ಮುಂದಾಗುತ್ತಾರೆ ಆಗ ಸರ್ಕಾರಿ ಶಾಲೆ ಮುಚ್ಚುವ ಪರಿಸ್ಥಿತಿ ನಿರ‍್ಮಾಣವಾಗಲಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿ ವತಿಯಿಂದ ನರೇಗಾ ಯೋಜನೆಯಡಿ ಕಾಮಗಾರಿ ಮಾಡಲು ಅನೇಕ ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ಸಭೆಯಲ್ಲಿ ಆರೋಪ ಮಾಡಿದರು.

ನಮ್ಮ ಕುರಿ ರೊಪ್ಪದಲ್ಲಿ ಕೂಡಿದ್ದ ೧೩ ಕುರಿಗಳು ಕಳವಾಗಿ ಮೂರು ತಿಂಗಳು ಕಳೆದಿದೆ. ಪೊಲೀಸ್ ಇಲಾಖೆಗೆ ದೂರು ನಿಡಲಾಗಿದೆ. ಇಲ್ಲಿವರೆಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಕುರಿ ಸಾಕಾಣಿಕೆಯಿಂದ ಜೀವನ ನಡೆಸುತ್ತಿದ್ದ ನಮ್ಮ ಕುಟುಂಬ ಈಗ ಬೀದಿಗೆ ಬಿದ್ದಿದೆ ಎಂದು ಬೋಡಬಂಡೇನಹಳ್ಳಿ ಗ್ರಾಮದ ಬಿ.ಎನ್.ರಮೇಶ್ ತಹಶೀಲ್ದಾರ್ ನಹಿದಾ ಜಮ್ ಜಮ್ ಎದುರು ಅಲವತ್ತುಕೊಂಡರು.

ಕಾರ‍್ಯಕ್ರಮದಲ್ಲಿ 25 ನೂತನ ಪಿಂಚಣಿ ಆದೇಶ ಪತ್ರ ವಿತರಿಸಲಾಯಿತು. ವಿವಿಧ ಇಲಾಖೆಗೆ ಸಂಬಂಧಿಸಿದ 47 ಅರ್ಜಿಗಳನ್ನು ಸ್ವೀಕೃತವಾಗಿದ್ದವು. ತಹಶೀಲ್ದಾರ್ ನಹಿದಾ ಜಮ್ ಜಮ್, ತಾ.ಪಂ. ಇಓ ಡಾ. ಡಿ.ದೊಡ್ಡಸಿದ್ದಯ್ಯ, ಕೃಷಿ ಇಲಾಖೆ ಎಚ್.ನಾಗರಾಜ, ಅರಣ್ಯ ಇಲಾಖೆ ಎಚ್.ಎಂ.ಸುರೇಶ್, ಗ್ರಾಮೀಣಭಿವೃದ್ಧಿ ಇಲಾಖೆ ಎಇಇ ರವಿಕುಮಾರ್, ಪಶು ಇಲಾಖೆ ಸಿದ್ದನಗೌಡ ಇತರರು ಇದ್ದರು.

ತಡವಾಗಿ ಬಂದ ಪಿಡಿಓ
ಜಿಲ್ಲಾಧಿಕಾರಿ ನಡೆ ಹಳ್ಳಿಕಡೆ ಕಾರ‍್ಯಕ್ರಮಕ್ಕೆ ಹಂಚಿಹಳ್ಳಿ ಗ್ರಾ.ಪಂ. ಪಿಡಿಓ ಮಂಜುಳಾ ಅವರು ತಡವಾಗಿ ಬಂದಿರುವ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದು ಸಾರ‍್ವಜನಿಕ ವಲಯದಲ್ಲಿ ಚರ್ಚೆಗೀಡಾಯಿತು. ಸರ್ಕಾರಿ ಕಾರ‍್ಯಕ್ರಮಕ್ಕೆ ಪಿಡಿಓ ಅವರು ತಡವಾಗಿ ಬರುವ ಮೂಲಕ ನಿರ್ಲಕ್ಷ ತೋರಿದ್ದಾರೆ. ಈ ಹಿಂದೆ ಜಟ್ಟಿಅಗ್ರಹಾರ ಗ್ರಾ.ಪಂ. ವ್ಯಾಪ್ತಿಯ ನವಿಲುಕುರಿಕೆಯಲ್ಲಿ ಕಳೆದ ತಿಂಗಳು ನಡೆದ ಕಾರ‍್ಯಕ್ರಮಕ್ಕೂ ಆಗ ಅಗ್ರಹಾರ ಪಂಚಾಯಿತಿ ಪಿಡಿಓ ಆಗಿದ್ದ ಮಂಜುಳ ಅವರು ತಡವಾಗಿ ಬರುವ ಮೂಲಕ ನಿರ್ಲಕ್ಷ ತೋರಿದ್ದರು ಎಂದೆಲ್ಲಾ ಮಾತುಗಳು ಕೇಳಿ ಬಂದವು. ಹಾಗೂ ಹಂಚಿಹಳ್ಳಿ ಗ್ರಾಮಪಂಚಾಯಿತಿ ಉಪಾಧ್ಯಕ್ಷ ರಂಗನಾಥ್, ಸದಸ್ಯ ರಾಜಶೇಖರ್ ಹೊರತುಪಡಿಸಿ ಅಧ್ಯಕ್ಷರು ಹಾಗೂ ಉಳಿದ ಸದಸ್ಯರ ಗೈರು ಹಾಜರಿ ಬಗ್ಗೆಯೂ ಆಕ್ರೋಶ ವ್ಯಕ್ತವಾಯಿತು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Tumkur ಕೊಟ್ಟಿಗೆಗೆ ಒಟ್ಟಿಗೆ ನುಗ್ಗಿದ 5 ಚಿರತೆಗಳು:32 ಕುರಿಗಳ ಸಾವು

Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Kunigal: ಹಿಂದು ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ : ಈದ್ ಮೀಲಾದ್ ಮೆರವಣಿಗೆ

Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.